ಬೆಂಗಳೂರಿನ ಡಿಜೆ ಹಳ್ಳಿಪ್ರಕರಣಕ್ಕೆ ಸಂಬಂಧಿಸಿದಂತೆ ಮಾತನಾಡಿದ ವೈದ್ಯಕೀಯ ಶಿಕ್ಷಣ ಸಚಿವ ಸುಧಾಕರ್ ನಾವೆಲ್ಲಾ ಅಣ್ಣ ತಮ್ಮಂದಿರಂತೆ ಇರೋಣ. ಇದಕ್ಕೆ ಧರ್ಮದ ಬಣ್ಣ ಹಚ್ಚುವುದು ಬೇಡ ಎಂದು ಹೇಳಿದ್ದಾರೆ.

ಬೆಂಗಳೂರು (ಆ.13): ಬೆಂಗಳೂರಿನ ಡಿ.ಜೆ.ಹಳ್ಳಿಯಲ್ಲಿ ನಡೆದಿರುವ ಘಟನೆ ಖಂಡನೀಯ. ಪ್ರಜಾಪ್ರಭುತ್ವದಲ್ಲಿ ಯಾವುದೇ ಧರ್ಮಕ್ಕೂ ಧಕ್ಕೆಯಾಗಬಾರದು. ನಾವೆಲ್ಲಾ ಅಣ್ಣ ತಮ್ಮಂದಿರಂತೆ ಇರೋಣ. ಎಲ್ಲರೂ ಶಾಂತಿ ಕಾಪಾಡಿ’ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್‌ ಮನವಿ ಮಾಡಿದ್ದಾರೆ. 

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಈ ಸಂಬಂಧ ಟ್ವೀಟ್‌ ಮಾಡಿರುವ ಅವರು, ‘ಡಿ.ಜೆ.ಹಳ್ಳಿ ಘಟನೆ ಖಂಡನೀಯ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಯಾವುದೇ ಧರ್ಮಕ್ಕೂ ಧಕ್ಕೆಯಾಗಬಾರದು. ನಾವೆಲ್ಲಾ ಅಣ್ಣ ತಮ್ಮಂದಿರಂತೆ ಇರೋಣ. 

ಕೆ.ಜಿ. ಹಳ್ಳಿ ಆರೋಪಿಗಳನ್ನ ಸುಮ್ನೆ ಬಿಡಲ್ಲ: ಸಚಿವ ಅಶೋಕ್‌ ಶಪಥ

ಈ ಘಟನೆ ಬಗ್ಗೆ ವಿಷಾದ ವ್ಯಕ್ತಪಡಿಸುತ್ತೇನೆ. ಪೊಲೀಸ್‌ ಅಧಿಕಾರಿಗಳು ಗಲಾಟೆಯನ್ನು ಸಂಪೂರ್ಣ ನಿಯಂತ್ರಿಸಿದ್ದಾರೆ. ಶಾಂತಿಯಿಂದ ಇರಿ ಎಂದು ಎಲ್ಲರಿಗೂ ಮನವಿ ಮಾಡುತ್ತೇನೆ’ ಎಂದು ಹೇಳಿದ್ದಾರೆ.

Scroll to load tweet…