- Home
- Karnataka Districts
- Karnataka News Live: ದಾವಣಗೆರೆಯಲ್ಲಿ ಬಹುಕೋಟಿ ಉದ್ಯೋಗ ವಂಚನೆ - ಹಿರೇಉಡ ತಾಂಡಾ ವಂಚಕರ ವಿರುದ್ಧ ಕ್ರಮಕ್ಕೆ 15 ದಿನಗಳ ಗಡುವು!
Karnataka News Live: ದಾವಣಗೆರೆಯಲ್ಲಿ ಬಹುಕೋಟಿ ಉದ್ಯೋಗ ವಂಚನೆ - ಹಿರೇಉಡ ತಾಂಡಾ ವಂಚಕರ ವಿರುದ್ಧ ಕ್ರಮಕ್ಕೆ 15 ದಿನಗಳ ಗಡುವು!

ಇಂದು ಯುಗಾದಿ ಹಬ್ಬದ ಸಂಭ್ರಮ. ರಾಜ್ಯದೆಲ್ಲೆಡೆ ಹಬ್ಬದ ವಾತಾವರಣ ಕಳೆಗೆಟ್ಟಿದೆ. ಬೆಂಗಳೂರಿನಲ್ಲಿ ಹಬ್ಬದ ಖರೀದಿ ಜೋರಾಗಿ ನಡೆಯುತ್ತಿದೆ. ಕೆಆರ್ ಮಾರುಕಟ್ಟೆಯಲ್ಲಿ ಕಿಕ್ಕಿರಿದು ಜನ ತುಂಬಿದ್ದಾರೆ. ಹೂವು,ಹಣ್ಣು, ಮಾವಿನ ಸೊಪ್ಪು, ಬೇವಿನಸೊಪ್ಪು ಖರೀದಿಸಲು ಜನರು ಮುಗಿಬಿದ್ದಿದ್ದಾರೆ. ಮಧ್ಯರಾತ್ರಿಯಿಂದಲೇ ಕೆ.ಆರ್ ಮಾರ್ಕೆಟ್ ನಲ್ಲಿ ವ್ಯಾಪಾರ ಆರಂಭಗೊಂಡಿದೆ. ಮತ್ತೊಂದೆಡೆ ರಾಜ್ಯದಲ್ಲಿ ರಾಜಕೀಯ ರಂಗು ಪಡೆದುಕೊಂಡಿದೆ. ಒಂದೆಡೆ ಉಪ ಚುನಾವಣೆ ಕಾವು ಏರತೊಡಗಿದರೆ ಮತ್ತೊಂದೆಡೆ ಮಂಡ್ಯದಲ್ಲಿ ಬಿಜೆಪಿ ಹಾಗೂ ಜೆಡಿಎಸ್ ನಡುವಿನ ಮೈತ್ರಿ ಬಿಕ್ಕಟ್ಟು ತೀವ್ರಗೊಳ್ಳುತ್ತಿದೆ.
Karnataka News Live 19 March 2026ದಾವಣಗೆರೆಯಲ್ಲಿ ಬಹುಕೋಟಿ ಉದ್ಯೋಗ ವಂಚನೆ - ಹಿರೇಉಡ ತಾಂಡಾ ವಂಚಕರ ವಿರುದ್ಧ ಕ್ರಮಕ್ಕೆ 15 ದಿನಗಳ ಗಡುವು!
Karnataka News Live 19 March 20268 ವರ್ಷಗಳ ಬಳಿಕ ಕೃಷಿ ಇಲಾಖೆಯಲ್ಲಿ ನೇಮಕಾತಿ - 945 ಹುದ್ದೆಗಳ ಭರ್ತಿಗೆ ಮೂರು ತಿಂಗಳೊಳಗೆ ಮುಹೂರ್ತ - ಚಲುವರಾಯ
Karnataka News Live 19 March 2026ಬಾಗಲಕೋಟೆ, ದಾವಣಗೆರೆಯಲ್ಲಿ ಬಿಜೆಪಿ ಗೆಲುವು ಖಚಿತ - ಸಂಸದ ಗೋವಿಂದ ಕಾರಜೋಳ
ಎರಡೂ ಕ್ಷೇತ್ರಗಳಲ್ಲಿ ಯಾವುದೇ ಬಂಡಾಯ ಇಲ್ಲ.ಬಾಗಲಕೋಟೆ ಹಾಗೂ ದಾವಣಗೆರೆ ಉಪ ಚುನಾವಣೆಯಲ್ಲಿ ಬಿಜೆಪಿ ಸ್ಪಷ್ಟ ಗೆಲುವು ಸಾಧಿಸಲಿದೆ ಎಂದು ಸಂಸದ ಗೋವಿಂದ ಕಾರಜೋಳ ವಿಶ್ವಾಸ ವ್ಯಕ್ತಪಡಿಸಿದರು.
Karnataka News Live 19 March 2026ಅಮೆರಿಕಾದ F-35 ಯುದ್ಧ ವಿಮಾನಕ್ಕೂ ಹೊಡೆಯಿತಾ ಇರಾನ್ - ಅಮೆರಿಕಾ ಹೇಳಿದ್ದೇನು?
ಇರಾನ್-ಅಮೆರಿಕಾ-ಇಸ್ರೇಲ್ ನಡುವಿನ ಸಂಘರ್ಷ ತೀವ್ರಗೊಂಡಿದ್ದು, ಅಮೆರಿಕದ ಎಫ್-35 ಫೈಟರ್ ಜೆಟ್ ಮೇಲೆ ಇರಾನ್ ದಾಳಿ ನಡೆಸಿದೆ ಎನ್ನಲಾಗಿದೆ. ಅಲ್ಲದೇ ತನ್ನ ಮೂಲಸೌಕರ್ಯಗಳ ಮೇಲೆ ಮತ್ತೊಮ್ಮೆ ದಾಳಿಯಾದರೆ ಸಂಯಮ ತೋರುವುದಿಲ್ಲ ಎಂದು ಇರಾನ್ ತನ್ನ ಶತ್ರುರಾಷ್ಟ್ರಗಳಾದ ಅಮೆರಿಕಾ ಹಾಗೂ ಇಸ್ರೇಲ್ಗೆ ಎಚ್ಚರಿಸಿದೆ.
Karnataka News Live 19 March 2026ರೀಲ್ಸ್ ಹುಚ್ಚಿಗೆ ಬಿಜೆಪಿ ನಾಯಕನ ಪುತ್ರ ಬಲಿ, ಘಟನೆ ಒಂದು ಪಾಠ ಎಂದ ಶಾಸಕ ಮಹೇಶ್ ಟೆಂಗಿನಕಾಯಿ, ಜಾಲತಾಣ ಬ್ಯಾನ್ ಯಾರಿಗೆ?
Karnataka News Live 19 March 2026ಬೆಂಗಳೂರು ಮನೆ ಮಾಲೀಕರ 'ಡೆಪಾಸಿಟ್' ವಂಚನೆ - ₹70 ಸಾವಿರ ಪಡೆದು ₹18 ಸಾವಿರ ವಾಪಸ್; ಯುವತಿಯ ಆಕ್ರೋಶ ವೈರಲ್!
ಬೆಂಗಳೂರಿನ ಯಶವಂತಪುರದಲ್ಲಿ, ಮನೆ ಮಾಲೀಕರು ಆಸ್ತಿ ಮಾರಾಟದ ನಂತರ ಯುವತಿಯೊಬ್ಬರಿಗೆ ನೀಡಬೇಕಿದ್ದ ₹70,000 ಸೆಕ್ಯೂರಿಟಿ ಡೆಪಾಸಿಟ್ನಲ್ಲಿ ₹52,000 ಕಡಿತಗೊಳಿಸಿ ವಂಚಿಸಿದ್ದಾರೆ ಎಂದು ಆರೋಪಿಸಲಾಗಿದೆ. ತಮಗಾದ ಅನ್ಯಾಯದ ಬಗ್ಗೆ ಯುವತಿ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡ ವಿಡಿಯೋ ವೈರಲ್ ಆಗಿದೆ.
Karnataka News Live 19 March 2026ಬೆಂಗಳೂರು - ಪ್ರೀತ್ಸೇ..ಪ್ರೀತ್ಸೇ.. 3 ಮಕ್ಕಳ ತಾಯಿ ಹಿಂದೆ ಬಿದ್ದ ಯುವಕ, ಒಪ್ಪದ್ದಕ್ಕೆ ಮಹಿಳೆಯನ್ನು ಕೊಂದೇ ಬಿಟ್ಟ!
Karnataka News Live 19 March 2026ಹಾವೇರಿ - ದನದ ಕೊಟ್ಟಿಗೆಗೆ ಆಕಸ್ಮಿಕ ಬೆಂಕಿ; 10ಕ್ಕೂ ಅಧಿಕ ಎಮ್ಮೆಗಳು ಸಜೀವ ದಹನ, ರೈತ ಕಂಗಾಲು!
Karnataka News Live 19 March 2026ಹುಬ್ಬಳ್ಳಿಯಲ್ಲಿ ಭೀಕರ ಅಪಘಾತ - ರೀಲ್ಸ್ ಹುಚ್ಚಿಗೆ ಬಿಜೆಪಿ ಮುಖಂಡ ವೀರೇಶ್ ಸಂಗಳದ ಪುತ್ರ ಬಲಿ!
Karnataka News Live 19 March 2026ಸರ್ಕಾರಿ ನೌಕರರ ವರ್ಗಾವಣೆಗೆ 'ಸಿಎಂ ಹಸ್ತಕ್ಷೇಪ' ಸಲ್ಲದು, ಮಾಡಲು ಇದಕ್ಕಿಂತ ದೊಡ್ಡ ಕೆಲಸಗಳಿವೆ - ಹೈಕೋರ್ಟ್ ತರಾಟೆ!
ಸರ್ಕಾರಿ ನೌಕರರ ವರ್ಗಾವಣೆಯಲ್ಲಿ ಮುಖ್ಯಮಂತ್ರಿಗಳ ಕಚೇರಿಯ ನೇರ ಹಸ್ತಕ್ಷೇಪಕ್ಕೆ ಕರ್ನಾಟಕ ಹೈಕೋರ್ಟ್ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ವರ್ಗಾವಣೆ ವಿಚಾರಗಳನ್ನು ಆಯಾ ಇಲಾಖೆಗಳಿಗೆ ಬಿಡಬೇಕು ಮತ್ತು ಸಿಎಂ ಇಂತಹ ಸಣ್ಣ ವಿಚಾರಗಳಲ್ಲಿ ಸಮಯ ವ್ಯಯಿಸಬಾರದು ಎಂದು ನ್ಯಾಯಪೀಠ ಅಭಿಪ್ರಾಯಪಟ್ಟಿದೆ.
Karnataka News Live 19 March 2026ಕೊಡಗಿನಲ್ಲಿ ಆನೆ-ಮಾನವ ಸಂಘರ್ಷಕ್ಕೆ ಕಟ್ಟುನಿಟ್ಟಿನ ಕ್ರಮ - ಸಚಿವ ಈಶ್ವರ್ ಖಂಡ್ರೆ ಸೂಚನೆ
ಮಾನವ-ಆನೆ ಸಂಘರ್ಷ ನಿಯಂತ್ರಣಕ್ಕೆ ತೋಡಲಾಗಿರುವ ಆನೆ ಕಂದಕ ಮತ್ತು ಅಳವಡಿಸಿರುವ ತೂಗು ಸೌರಬೇಲಿಯ ಸಮರ್ಪಕ ನಿರ್ವಹಣೆ ಮಾಡುವಂತೆ ಅರಣ್ಯ ಸಚಿವ ಈಶ್ವರ್ ಖಂಡ್ರೆ ಸ್ಪಷ್ಟ ಸೂಚನೆ ನೀಡಿದ್ದಾರೆ.
Karnataka News Live 19 March 2026ಯುಗಾದಿಗೆ ರಿಷಬ್ ಶೆಟ್ಟಿ ಭರ್ಜರಿ ನ್ಯೂಸ್ - 'ಅಧ್ಯಾಯ 2' ಘೋಷಿಸಿದ ಡಿವೈನ್ ಸ್ಟಾರ್; ಯಾವ ಸಿನಿಮಾ ಇದು?
Karnataka News Live 19 March 20261948ರ ಮುಸ್ಲಿಂ ವಿವಾಹ ಆಮಂತ್ರಣ ಪತ್ರಿಕೆ ವೈರಲ್ - ಕನ್ನಡದಲ್ಲಿ ಏನು ಬರೆದಿದ್ದಾರೆ ನೋಡಿ
Karnataka News Live 19 March 2026ಕರಾವಳಿಯಲ್ಲಿ ನಾಳೆ 'ಈದುಲ್ ಫಿತ್ರ್' ಸಂಭ್ರಮ - ಚಂದ್ರದರ್ಶನ ಹಿನ್ನೆಲೆ ಶುಕ್ರವಾರ ಈದ್ ಆಚರಣೆಗೆ ಖಾಝಿಗಳ ಘೋಷಣೆ
Karnataka News Live 19 March 2026'ಸೆರಗ ಸರ್ಸೆ' ವಿವಾದದ ಬೆನ್ನಲ್ಲೇ ಸೋಷಿಯಲ್ ಮೀಡಿಯಾದ ಎಲ್ಲಾ ಖಾತೆ ಡಿಲೀಟ್ ಮಾಡಿದ ಗಾಯಕಿ- ಆಗಿದ್ದೇನು
ಕೆಡಿ ಚಿತ್ರದ 'ಸೆರಗ ಸರ್ಸೆ' ಹಾಡಿನ ಅಶ್ಲೀಲ ಸಾಹಿತ್ಯದ ವಿವಾದ ಭುಗಿಲೆದ್ದಿದೆ. ನಿರ್ದೇಶಕ ಪ್ರೇಮ್ ಕ್ಷಮೆಯಾಚಿಸಿದ್ದರೆ, ನಟಿ ನೋರಾ ಫತೇಹಿ ಸಾಹಿತ್ಯದ ಅರ್ಥ ತಿಳಿದಿರಲಿಲ್ಲ ಎಂದಿದ್ದಾರೆ. ಈ ನಡುವೆ, ಗಾಯಕಿ ಐಶ್ವರ್ಯಾ ರಂಗರಾಜನ್ ತಮ್ಮ ಇನ್ಸ್ಟಾಗ್ರಾಮ್ ಖಾತೆಯನ್ನೇ ಡಿಲೀಟ್ ಮಾಡಿದ್ದಾರೆ.
Karnataka News Live 19 March 20265000 ಅಂಗನವಾಡಿಗಳಲ್ಲಿ ಎಲ್ಕೆಜಿ, ಯುಕೆಜಿ - ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಘೋಷಣೆ
ಪ್ರಸಕ್ತ ವರ್ಷದಲ್ಲಿ ರಾಜ್ಯದ ಐದು ಸಾವಿರ ಅಂಗನವಾಡಿ ಕೇಂದ್ರಗಳಲ್ಲಿ ಸರ್ಕಾರಿ ಮಾಂಟೆಸ್ಸರಿ (ಎಲ್ಕೆಜಿ-ಯುಕೆಜಿ) ಆರಂಭಿಸಲು ತೀರ್ಮಾನಿಸಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ತಿಳಿಸಿದ್ದಾರೆ.
Karnataka News Live 19 March 2026ಒಂದೇ ಫ್ರೇಮ್ನಲ್ಲಿ ಸ್ಟಾರ್ ನಟರ ಯುಗಾದಿ ವಿಷ್ - ರಾಜ್, ಅಪ್ಪು, ವಿಷ್ಣು, ಅಂಬಿ ಕಂಡು ಫ್ಯಾನ್ಸ್ ಪುಳಕ- AI Video Viral
Karnataka News Live 19 March 2026ದಿನವಿಡೀ ಕುಡೀತಿದ್ರಾ ರಾಮ ಶ್ಯಾಮ ಭಾಮ ನಟಿ ಊರ್ವಶಿ? ರಂಗನಾಥನ್ ಹೇಳಿದ ಆ ಶಾಕಿಂಗ್ ಸತ್ಯವೇನು?
ಕನ್ನಡ, ತಮಿಳು, ತೆಲುಗು, ಮಲಯಾಳಂ ಸೇರಿದಂತೆ ಹಲವು ಭಾಷೆಗಳಲ್ಲಿ ನಟಿಸಿರುವ ಹಿರಿಯನಟಿ ಊರ್ವಶಿ ಅವರಿಗೆ ವಿಪರೀತ ಕುಡಿಯುವ ಅಭ್ಯಾಸವಿತ್ತು ಎಂದು ನಟ ಹಾಗೂ ಪತ್ರಕರ್ತ ಬಯಿಲ್ವಾನ್ ರಂಗನಾಥನ್ ಸ್ಫೋಟಕ ಹೇಳಿಕೆಯೊಂದನ್ನು ನೀಡಿದ್ದಾರೆ.
Karnataka News Live 19 March 2026ಈ ಕನ್ನಡ ಸೀರಿಯಲ್ಸ್ ನಟರ ಬದಲಾವಣೆಗೆ ದೇವರ ಮೊರೆ ಹೋದ ವೀಕ್ಷಕರು! ಅಷ್ಟಕ್ಕೂ ಆಗಿದ್ದೇನು?
ಬಹುತೇಕ ಕನ್ನಡ ಧಾರಾವಾಹಿಗಳು ಮಹಿಳಾ ಪ್ರಧಾನವಾಗಿದ್ದು, ಇದರಲ್ಲಿನ ನಾಯಕ ಪಾತ್ರಗಳನ್ನು ಪೆದ್ದು ಮತ್ತು ಮುಗ್ಧರೆಂದು ಚಿತ್ರಿಸಲಾಗುತ್ತದೆ. ಬ್ರಹ್ಮಗಂಟು, ಅಣ್ಣಯ್ಯ, ನಾ ನಿನ್ನ ಬಿಡಲಾರೆ ಸೀರಿಯಲ್ಗಳ ನಾಯಕರು ವಿಲನ್ಗಳ ಅಸಲಿಯತ್ತನ್ನು ತಿಳಿಯದೇ ಇರುವುದು ಪ್ರೇಕ್ಷಕರನ್ನು ಕೆರಳಿಸಿದೆ.
Karnataka News Live 19 March 2026ಧಾರವಾಡದಲ್ಲಿ ಯುಗಾದಿ ದಿನವೇ ರಕ್ತಪಾತ - ಆಸ್ತಿಗಾಗಿ ಹುಟ್ಟಿದ ತಂಗಿಯನ್ನೇ ಬರ್ಬರವಾಗಿ ಕೊಚ್ಚಿ ಕೊಂದ ಅಣ್ಣ!
ಧಾರವಾಡದ ಅಮ್ಮಿನಬಾವಿ ಗ್ರಾಮದಲ್ಲಿ ಯುಗಾದಿ ಹಬ್ಬದ ದಿನ ಆಸ್ತಿ ವಿವಾದಕ್ಕೆ ಸಂಬಂಧಿಸಿದಂತೆ ಅಣ್ಣನೇ ತನ್ನ ತಂಗಿಯನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ್ದಾನೆ. ಜಮೀನಿನಲ್ಲಿ ಪಾಲು ಕೇಳಿದ್ದಕ್ಕೆ ಶುರುವಾದ ಜಗಳವು ಕೊಲೆಯಲ್ಲಿ ಅಂತ್ಯಗೊಂಡಿದ್ದು, ಪೊಲೀಸರು ಆರೋಪಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ.