ಮೈಸೂರು ರಸ್ತೆಯ ದೀಪಾಂಜಲಿ ನಗರ ಜಂಕ್ಷನ್ನಿಂದ ಹೊಸಕೆರೆಹಳ್ಳಿ ಪಿಇಎಸ್ ಕಾಲೇಜು ಸಮೀಪದ ನೈಸ್ ರಸ್ತೆಗೆ ಸಂಪರ್ಕ ಕಲ್ಪಿಸುವ ನಾಲ್ಕು ಪಥದ ಹೊಸ ಲಿಂಕ್ ರಸ್ತೆ ಸಂಚಾರಕ್ಕೆ ಮುಕ್ತಗೊಂಡಿದೆ.
Karnataka News Live: ದೀಪಾಂಜಲಿ ನಗರ ಜಂಕ್ಷನ್ನಿಂದ ನೈಸ್ ರಸ್ತೆಗೆ ಇನ್ನು ನೇರ ಸಂಚಾರ

ಕರ್ನಾಟಕ ಉಪ ಚುನಾವಣೆ ಕಣ ರಂಗೇರಿದೆ. ಕಾಂಗ್ರೆಸ್ ಇಂದು ಅಭ್ಯರ್ಥಿಗಳ ಘೋಷಣೆ ಮಾಡಲಿದೆ. ಬಾಗಲಕೋಟೆ ಹಾಗೂ ದಾವಣೆಗೆರೆ ದಕ್ಷಿಣ ಕ್ಷೇತ್ರಗಳಲ್ಲಿ ಕಾಂಗ್ರೆಸ್ಗೆ ಅಭ್ಯರ್ಥಿ ಆಯ್ಕೆ ಕಗ್ಗಂಟಾಗಿದೆ. ಅಲ್ಪಸಂಖ್ಯಾತ ಸಮುದಾಯಕ್ಕೆ ಟಿಕೆಟ್ ನೀಡುವಂತೆ ಸಚಿವ ಜಮೀರ್ ಅಹಮ್ಮದ್ ಬಿಗಿಪಟ್ಟು ಹಿಡಿದಿದ್ದಾರೆ. ಇತ್ತ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಖಾಸಗಿ ಹೊಟೆಲ್ನಲ್ಲಿ ಸತತ ಸಭೆಗಳನ್ನು ನಡೆಸುತ್ತಿದ್ದಾರೆ. ರಾಜ್ಯದ ಚುನಾವಣಾ ಅಪ್ಡೇಟ್ ಸೇರಿದಂತೆ ಕ್ಷಣ ಕ್ಷಣದ ಲೈವ್ ನ್ಯೂಸ್ ಇಲ್ಲಿದೆ.
Karnataka News Live 21 March 2026ದೀಪಾಂಜಲಿ ನಗರ ಜಂಕ್ಷನ್ನಿಂದ ನೈಸ್ ರಸ್ತೆಗೆ ಇನ್ನು ನೇರ ಸಂಚಾರ
Karnataka News Live 21 March 2026ಯುದ್ಧದಿಂದ ಜನರು ಕಂಗಾಲು, ಬೆಂಗಳೂರು ಸೇರಿ ರಾಜ್ಯದ ಎಲ್ಲಾ ಬಂಕ್ನಲ್ಲಿ ಪೆಟ್ರೋಲ್ ಬೆಲೆ ಏರಿಕೆ
ಯುದ್ಧದಿಂದ ಜನರು ಕಂಗಾಲು, ಬೆಂಗಳೂರು ಸೇರಿ ರಾಜ್ಯದ ಎಲ್ಲಾ ಬಂಕ್ನಲ್ಲಿ ಪೆಟ್ರೋಲ್ ಬೆಲೆ ಏರಿಕೆ, ಪ್ರೀಮಿಯಂ ಪೆಟ್ರೋಲ್ ಬೆಲೆಯಲ್ಲಿ ಏರಿಕೆಯಾಗಿದೆ. ಮೊದಲು ಶೆಲ್ ಪೆಟ್ರೋಲ್ ದರ ಏರಿಕೆಯಾಗಿದ್ದು, ಇದೀಗ ಎಲ್ಲಾ ಬಂಕ್ನಲ್ಲಿ ಬೆಲೆ ಏರಿಕೆಯಾಗಿದೆ.
Karnataka News Live 21 March 2026ಮನುಷ್ಯನ ಬದುಕಿಗೆ ರಂಜಾನ್ ಮಾಸದ ಪಾಠಗಳು - ಆತ್ಮಶುದ್ಧಿಯ ಈ ಪವಿತ್ರ ತಿಂಗಳ ಮಹತ್ವ ತಿಳಿಯಿರಿ
Karnataka News Live 21 March 2026ಚಿಕ್ಕಮಗಳೂರು ಬಳಿ ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿ ಸರ್ಕಾರಿ ಬಸ್ ಪಲ್ಟಿ, 8 ಜನರಿಗೆ ಗಾಯ
ಚಿಕ್ಕಮಗಳೂರು ಬಳಿ ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿ ಸರ್ಕಾರಿ ಬಸ್ ಪಲ್ಟಿ, 8 ಜನರಿಗೆ ಗಾಯ, ಕುಕ್ಕನೂರಿನಿಂದ-ಧರ್ಮಸ್ಥಳಕ್ಕೆ ತೆರಳುತ್ತಿದ್ದ ಬಸ್ ನಿಯಂತ್ರಣ ತಪ್ಪಿ ಅಪಘಾತಗೊಂಡಿದೆ. ಬಸ್ನಲ್ಲಿ 40 ಪ್ರಯಾಣಕರಿದ್ದರು.
Karnataka News Live 21 March 2026Karnataka By-Polls - ದಾವಣಗೆರೆಗೆ ಬಿಜೆಪಿಯಿಂದ ಅಚ್ಚರಿ ಅಭ್ಯರ್ಥಿ, ಎಸ್ಟಿ ಸಮುದಾಯದ ಶ್ರೀನಿವಾಸಗೆ ಟಿಕೆಟ್ ಯಾಕೆ?
ರಾಜ್ಯದ ಬಾಗಲಕೋಟೆ ಮತ್ತು ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ನಿರೀಕ್ಷೆಯಂತೆ ಬಾಗಲಕೋಟೆಗೆ ವೀರಣ್ಣ ಚರಂತಿಮಠಗೆ ಟಿಕೆಟ್ ನೀಡಲಾಗಿದ್ದು, ದಾವಣಗೆರೆ ದಕ್ಷಿಣಕ್ಕೆ ಶ್ರೀನಿವಾಸ ದಾಸಕರಿಯಪ್ಪ ಅವರನ್ನ ಆಯ್ಕೆ ಮಾಡುವ ಮೂಲಕ ಅಚ್ಚರಿ ಮೂಡಿಸಿದೆ.
Karnataka News Live 21 March 2026ಬೆಂಗಳೂರು ರಸ್ತೆ ಬದಿಯಲ್ಲಿ ಬೇಕಾಬಿಟ್ಟಿ ವಾಹನ ನಿಲ್ಲಿಸ್ತೀರಾ - ಹುಷಾರ್ !
ನಗರದಲ್ಲಿ ಸಂಚಾರ ದಟ್ಟಣೆ ಸಮಸ್ಯೆಯಿಂದಾಗಿ ನಗರದ ಹೆಸರು ಹಾಳಾಗುತ್ತಿದೆ. ಇದಕ್ಕಾಗಿ ಸೂಕ್ತ ವಾಹನ ನಿಲುಗಡೆ ನೀತಿ ರೂಪಿಸಬೇಕಾಗಿದೆ. ರಸ್ತೆ ಬದಿಯಲ್ಲಿ ಬೇಕಾಬಿಟ್ಟಿಯಾಗಿ ವಾಹನಗಳನ್ನು ನಿಲುಗಡೆ ಮಾಡಿದರೆ ಟೋಯಿಂಗ್ ವ್ಯವಸ್ಥೆ ತರಲು ನಿರ್ಧಾರಿಸಲಾಗಿದೆ
Karnataka News Live 21 March 2026Karnataka Bypolls - ಕರ್ನಾಟಕ ಜನರು ನಮ್ಮ ಪರ ಇದ್ದಾರೆ, ಎರಡೂ ಕ್ಷೇತ್ರದಲ್ಲೂ ಕಾಂಗ್ರೆಸ್ ಗೆಲ್ಲುತ್ತೆ - ಸುರ್ಜೇವಾಲಾ ವಿಶ್ವಾಸ
ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವು ನಿಶ್ಚಿತ ಎಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಪಕ್ಷದ ಆಂತರಿಕ ಸಮೀಕ್ಷೆ ಆಧರಿಸಿ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು ಎಂದರು.
Karnataka News Live 21 March 2026ದಾವಣಗೆರೆ ದಕ್ಷಿಣ ಕ್ಷೇತ್ರದ ಅಭ್ಯರ್ಥಿ ಟೆನ್ಶನ್
ದಾವಗಣೆಗೆರೆ ದಕ್ಷಿಣ ಕ್ಷೇತ್ರದ ಅಭ್ಯರ್ಥಿ ಆಯ್ಕೆ ಕಾಂಗ್ರೆಸ್ಗೆ ಕಗ್ಗಂಟಾಗಿದೆ. ಈಗಾಗಲೇ ಶಾಮನೂರು ಶಿವಶಂಕರಪ್ಪ ಮೊಮ್ಮಗ ನಾಮಪತ್ರ ಸಲ್ಲಿಕೆ ಮಾಡಿದ್ದು, ಕಾಂಗ್ರೆಸ್ ಹೈಕಮಾಂಡ್ನ ಇಕ್ಕಟ್ಟಿಗೆ ಸಿಲುಕಿಸಿದೆ. ಮತ್ತೊಂದೆಡೆ ಅಲ್ಪಸಂಖ್ಯಾತ ಸಮುದಾಯವೂ ಟಿಕೆಟ್ಗೆ ಬೇಡಿಕೆ ಇಟ್ಟಿದೆ.