ದ್ರೌಪದಿ' ಯಶಸ್ಸಿನ ನಂತರ, ನಿರ್ದೇಶಕ ಮೋಹನ್ ಜಿ ಅವರ 'ದ್ರೌಪದಿ 2' ಬಿಡುಗಡೆಗೆ ಸಜ್ಜಾಗಿದೆ. ಹೊಯ್ಸಳ ಚಕ್ರವರ್ತಿ ವೀರ ಬಲ್ಲಾಳ III ಮತ್ತು ಮೊಘಲ್ ಆಕ್ರಮಣದ ನೈಜ ಇತಿಹಾಸ ಆಧಾರಿತ ಈ ಐತಿಹಾಸಿಕ ಚಿತ್ರದಲ್ಲಿ, ಚಿರಾಗ್ ಜಾನಿ ಮೊಹಮ್ಮದ್ ಬಿನ್ ತುಘಲಕ್ ಎಂಬ ಕ್ರೂರ ಖಳನಾಯಕನಾಗಿ ಕಾಣಿಸಿಕೊಂಡಿದ್ದಾರೆ.
- Home
- Karnataka Districts
- Karnataka News Live: ಸಿನೆಮಾ ಅಲ್ಲ, ಇದು ರಣರಂಗ! ಹೊಯ್ಸಳ ಸಾಮ್ರಾಜ್ಯದ ಕಥೆ ಗೊತ್ತೇ? ಮೊಘಲರ ಆಕ್ರಮಣದ ಕರಾಳ ಇತಿಹಾಸ ಹೇಳಲು ಬರ್ತಿದೆ 'ದ್ರೌಪದಿ 2'
Karnataka News Live: ಸಿನೆಮಾ ಅಲ್ಲ, ಇದು ರಣರಂಗ! ಹೊಯ್ಸಳ ಸಾಮ್ರಾಜ್ಯದ ಕಥೆ ಗೊತ್ತೇ? ಮೊಘಲರ ಆಕ್ರಮಣದ ಕರಾಳ ಇತಿಹಾಸ ಹೇಳಲು ಬರ್ತಿದೆ 'ದ್ರೌಪದಿ 2'

ಬಳ್ಳಾರಿ: ಶನಿವಾರ ಪ್ರತಿಷ್ಠಾಪನೆ ಆಗಲಿರುವ ವಾಲ್ಮೀಕಿ ಪ್ರತಿಮೆ ಸಂಬಂಧ ಬ್ಯಾನರ್ ಕಟ್ಟುವ ವಿಚಾರವಾಗಿ ಬಳ್ಳಾರಿಯಲ್ಲಿ ರಾದ್ಧಾಂತವೇ ನಡೆದು ಹೋಗಿದೆ. ಕಾಂಗ್ರೆಸ್ ಶಾಸಕ ನಾರಾ ಭರತ್ ರೆಡ್ಡಿ ಹಾಗೂ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ ಅವರ ಸಾವಿರಾರು ಬೆಂಬಲಿಗರು ಬಡಿಗೆ, ಕಬ್ಬಿಣದ ರಾಡ್, ಕಲ್ಲು ಹಿಡಿದು ಬಡಿದಾಡಿಕೊಂಡಿದ್ದಾರೆ. ಶಾಸಕ ನಾರಾ ಭರತ್ ರೆಡ್ಡಿ ಆಪ್ತ ಸತೀಶ್ ರೆಡ್ಡಿ ಖಾಸಗಿ ಅಂಗರಕ್ಷಕರು ಗುಂಡು ಹಾರಿಸಿದ್ದಾರೆ. ಪರಿಸ್ಥಿತಿ ನಿಯಂತ್ರಿಸಲು ಪೊಲೀಸರು ಆರು ಸುತ್ತುಗಾಳಿಯಲ್ಲಿ ಗುಂಡು ಹಾರಿಸಿ ಬಳಿಕ ಗೋಲಿಬಾರ್ ನಡೆಸಿದ್ದಾರೆ. ಈ ವೇಳೆ ಗುಂಡೇಟಿಗೆ ಓರ್ವಯುವಕ ಬಲಿಯಾಗಿದ್ದಾನೆ. ಹಲವಾರು ಮಂದಿ ಗಾಯಗೊಂಡಿದ್ದಾರೆ. ನಗರದಲ್ಲಿ 144 ಸೆಕ್ಷನ್ ಜಾರಿ ಮಾಡಲಾಗಿದೆ.
ಮೃತಪಟ್ಟ ವ್ಯಕ್ತಿಯನ್ನು ಬಳ್ಳಾರಿ ಹುಸೇನ ನಗರದ ರಾಜಶೇಖರ (28) ಎಂದು ಹೇಳಲಾಗಿದೆ. ಆತ ತಮ್ಮ ಬೆಂಬಲಿಗ ಎಂದು ಕಾಂಗ್ರೆಸ್ ಶಾಸಕ ನಾರಾ ಭರತರೆಡ್ಡಿ ಮಾಧ್ಯಮಗಳಿಗೆ ಖಚಿತಪಡಿಸಿದ್ದಾರೆ. ಬಿಜೆಪಿ ಶಾಸಕ ಜನಾರ್ದನ ರಡ್ಡಿ ಮನೆ ಬಳಿ ಈ ಘಟನೆ ನಡೆದಿದೆ. ಆದರೆ ಈತ ಬಲಿಯಾಗಿದ್ದು ಪೊಲೀಸರ ಗುಂಡೇಟಿಗೋ? ಸತೀಶ್ ರೆಡ್ಡಿ ಖಾಸಗಿ ಅಂಗರಕ್ಷಕರ ಗುಂಡೇಟಿಗೋ ಎಂಬುದು ಗೊತ್ತಾಗಿಲ್ಲ.
Karnataka News Liveಸಿನೆಮಾ ಅಲ್ಲ, ಇದು ರಣರಂಗ! ಹೊಯ್ಸಳ ಸಾಮ್ರಾಜ್ಯದ ಕಥೆ ಗೊತ್ತೇ? ಮೊಘಲರ ಆಕ್ರಮಣದ ಕರಾಳ ಇತಿಹಾಸ ಹೇಳಲು ಬರ್ತಿದೆ 'ದ್ರೌಪದಿ 2'
Karnataka News Liveಜನವರಿ 30ರ ಒಳಗೆ ಸಿಎಂ ಖುರ್ಚಿ ಯಾರ ಪಾಲಾಗಲಿದೆ? ಖ್ಯಾತ ಜ್ಯೋತಿಷಿ ದ್ವಾರಕನಾಥ್ ಭವಿಷ್ಯವೇನು?
ಕರ್ನಾಟಕದ ಮುಖ್ಯಮಂತ್ರಿ ಹುದ್ದೆಯ ಆಕಾಂಕ್ಷಿಯಾಗಿರುವ ಡಿ.ಕೆ.ಶಿವಕುಮಾರ್ ಅವರ ರಾಜಕೀಯ ಭವಿಷ್ಯದ ಬಗ್ಗೆ ಅನಿಶ್ಚಿತತೆ ಮುಂದುವರೆದಿದೆ. ಈ ನಡುವೆ, ಪ್ರಭಾವಿ ಜ್ಯೋತಿಷಿ ದ್ವಾರಕಾನಾಥ್ ಅವರು ಜನವರಿ 5 ರಿಂದ 30ರೊಳಗೆ ಡಿಕೆಶಿ ಜೀವನದಲ್ಲಿನ ಬದಲಾವಣೆ ಬಗ್ಗೆ ಹೇಳಿದ್ದಾರೆ.
Karnataka News Liveಮನೆಯೆಂದು ಮಸೀದಿ ಕಟ್ಟಿದ್ರಾ ಸಾರವಾಡ್ ಬ್ರದರ್ಸ್? ಹುಬ್ಬಳ್ಳಿಯಲ್ಲಿ ಹಿಂದೂಗಳ ಬೃಹತ್ ಪ್ರತಿಭಟನೆ, ಸ್ಫೋಟಕ ತಿರುವು!
ಹುಬ್ಬಳ್ಳಿಯ ನೇಕಾರ ನಗರದಲ್ಲಿ ವಸತಿ ಉದ್ದೇಶಕ್ಕೆ ಅನುಮತಿ ಪಡೆದ ಕಟ್ಟಡವನ್ನು ಅಕ್ರಮವಾಗಿ ಪ್ರಾರ್ಥನಾ ಮಂದಿರವಾಗಿ ಪರಿವರ್ತಿಸಲಾಗಿದೆ ಎಂದು ಆರೋಪಿಸಿ ಸ್ಥಳೀಯರು ಮತ್ತು ಹಿಂದೂ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸುತ್ತಿವೆ. ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ತೆರವಿಗೆ ಗಡುವು
Karnataka News LiveBigg Bossನಿಂದ ಇದನ್ನೆಲ್ಲಾ ಕಲಿತೆ ಎಂದ ಕಿಚ್ಚ ಸುದೀಪ್, ಕೆಲ ವೀಕ್ಷಕರ ಬಗ್ಗೆ ಮರುಕ ಪಟ್ಟುಕೊಂಡದ್ದೇಕೆ?
ಬಿಗ್ಬಾಸ್ ಷೋ ಬಗ್ಗೆ ಹಲವು ಅಭಿಪ್ರಾಯಗಳಿದ್ದರೂ, ನಿರೂಪಕ ಕಿಚ್ಚ ಸುದೀಪ್ ಅವರಿಗಾಗಿ ನೋಡುವವರೇ ಹೆಚ್ಚು. ಈ ಷೋ ತನಗೆ ತಾಳ್ಮೆಯನ್ನು ಕಲಿಸಿದೆ ಎಂದು ಸುದೀಪ್ ಅವರೇ ಹೇಳಿಕೊಂಡಿದ್ದಾರೆ. ಅಲ್ಲದೆ, ಇದನ್ನು ಟೀಕಿಸುವವರನ್ನು ಪ್ರಶ್ನಿಸಿದ್ದಾರೆ.
Karnataka News Liveವಿದ್ಯಾರ್ಥಿ ರಾಜಕಾರಣಕ್ಕೆ ಗ್ರೀನ್ ಸಿಗ್ನಲ್? ಪಠ್ಯದ ಜೊತೆ ರಾಜಕೀಯ ಪಾಠ? ಉನ್ನತ ಶಿಕ್ಷಣ ಸಚಿವರ ಸ್ಫೋಟಕ ಸುಳಿವು, ಹೇಳಿದ್ದೇನು?
ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣಪ್ರಕಾಶ್ ಪಾಟೀಲ್ ಅವರು ಕಾಲೇಜು ಹಂತದಲ್ಲಿ ಚುನಾವಣೆ ನಡೆಸುವ ಇಚ್ಛೆ ವ್ಯಕ್ತಪಡಿಸಿದ್ದಾರೆ. ಈ ನಿಟ್ಟಿನಲ್ಲಿ ಕೆಪಿಸಿಸಿ ಅಧ್ಯಕ್ಷರು ರಚಿಸಿರುವ ಸಮಿತಿಯ ಮೊದಲ ಸಭೆ ಜನವರಿ 13 ರಂದು ನಡೆಯಲಿದ್ದು, ಚುನಾವಣೆ ರೂಪುರೇಷೆಗಳ ಬಗ್ಗೆ ಚರ್ಚಿಸಲಾಗುವುದು ಎಂದರು.
Karnataka News Liveಅಮೂಲ್ಗೆ ಗೇಟ್ಪಾಸ್, ಆರ್ಸಿಬಿಗೆ ಬಲಗಾಲಿಟ್ಟು ಬರುವ ಹಾದಿಯಲ್ಲಿ ಕೆಎಂಎಫ್ ನಂದಿನಿ!
KMF Nandini Likely to Sponsor RCB in IPL 2026: Replaces Amul ಕರ್ನಾಟಕ ಹಾಲು ಒಕ್ಕೂಟವು ಐಪಿಎಲ್ 2026 ಗಾಗಿ ತನ್ನ ನಂದಿನಿ ಬ್ರ್ಯಾಂಡ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ನಡುವೆ ಪ್ರಾಯೋಜಕತ್ವದ ಒಪ್ಪಂದದ ಬಗ್ಗೆ ಯೋಚನೆ ಮಾಡಿದೆ.
Karnataka News Liveಬಳ್ಳಾರಿ ಗಲಭೆಗೆ ಎಸ್ಪಿ ತಲೆದಂಡ; ಅಧಿಕಾರ ಸ್ವೀಕರಿಸಿ 1 ದಿನಕ್ಕೆ ವರಿಷ್ಠಾಧಿಕಾರಿ ಪವನ್ ನೆಜ್ಜೂರು ಸಸ್ಪೆಂಡ್!
ಬಳ್ಳಾರಿಯಲ್ಲಿ ವಾಲ್ಮೀಕಿ ಪ್ರತಿಮೆ ಪ್ರತಿಷ್ಠಾಪನೆ ವೇಳೆ ನಡೆದ ಹಿಂಸಾಚಾರ ಮತ್ತು ಕಲ್ಲು ತೂರಾಟಕ್ಕೆ ಸಂಬಂಧಿಸಿದಂತೆ, ಕರ್ತವ್ಯ ಲೋಪದ ಆರೋಪದ ಮೇಲೆ ಜಿಲ್ಲಾ ಎಸ್ಪಿ ಪವನ್ ನೆಜ್ಜೂರು ಅವರನ್ನು ಅಮಾನತುಗೊಳಿಸಲಾಗಿದೆ. ಇನ್ನು ಅಧಿಕಾರ ಸ್ವೀಕರಿಸಿ 1 ದಿನಕ್ಕೆ ಅಮಾನತ್ತಾಗಿದ್ದಾರೆ.
Karnataka News Liveಕೋಗಿಲು ಲೇಔಟ್ನಲ್ಲಿ 167 ಮನೆಗಳು ನೆಲಸಮ - ಆದ್ರೆ ಹೊಸ ಫ್ಲ್ಯಾಟ್ ಪಡೆಯಲು 250 ಅರ್ಜಿ ಸಲ್ಲಿಕೆ!
ಬೆಂಗಳೂರಿನ ಕೋಗಿಲು ಲೇಔಟ್ನಲ್ಲಿ 167 ಮನೆ ತೆರವು ಕಾರ್ಯಾಚರಣೆ ಬಳಿಕ ಪರಿಹಾರಕ್ಕಾಗಿ 250ಕ್ಕೂ ಹೆಚ್ಚು ಅರ್ಜಿಗಳು ಬಂದಿವೆ! ನಿಜವಾದ ಸಂತ್ರಸ್ತರು ಯಾರು? ಈ ಗೊಂದಲದ ಸಂಪೂರ್ಣ ವರದಿ ಓದಿ.
Karnataka News LiveBallari Banner row - ಬಿಜೆಪಿಯವರಿಂದಲೇ ಬಳ್ಳಾರಿ ಬಿಹಾರವಾಗಿದೆ! - ಜನಾರ್ದನ ರೆಡ್ಡಿ ವಿರುದ್ಧ ನಾಗೇಂದ್ರ ಕಿಡಿ
ಬಳ್ಳಾರಿಯಲ್ಲಿ ವಾಲ್ಮೀಕಿ ಪುತ್ಥಳಿ ಅನಾವರಣದ ಬ್ಯಾನರ್ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ಯುವಕನೊಬ್ಬ ಮೃತಪಟ್ಟಿದ್ದಾನೆ. ಈ ಹಿಂಸಾಚಾರಕ್ಕೆ ಬಿಜೆಪಿಯೇ ಕಾರಣ ಎಂದು ಶಾಸಕ ಬಿ. ನಾಗೇಂದ್ರ ಆರೋಪಿಸಿದ್ದು, ಬಳ್ಳಾರಿಯನ್ನು ಮತ್ತೆ 'ರಿಪಬ್ಲಿಕ್ ಆಫ್ ಬಳ್ಳಾರಿ' ಮಾಡಲು ಸಂಚು ರೂಪಿಸಲಾಗಿದೆ ಎಂದು ಗಂಭೀರ ಆರೋಪ
Karnataka News Liveಬ್ಯಾಂಕ್ಗೆ ಬಂದ ವೃದ್ಧನ ನಡವಳಿಕೆಯಿಂದ ಅನುಮಾನ; ಜೀವ, ಜೀವನಮಾನದ ಹಣ ಉಳಿಸಿದ ಮ್ಯಾನೇಜರ್!
ಸೈಬರ್ ವಂಚಕರ ವರ್ಚುವಲ್ ಅರೆಸ್ಟ್ನಲ್ಲಿದ್ದ 74 ವರ್ಷದ ವೃದ್ಧನನ್ನು ಪೊಲೀಸರು ರಕ್ಷಿಸಿದ್ದಾರೆ. ಮುಂಬೈ ಪೊಲೀಸರ ಸೋಗಿನಲ್ಲಿ ವಂಚಕರು, 10 ಲಕ್ಷ ರೂ. ವರ್ಗಾಯಿಸಲು ಯತ್ನಿಸಿದಾಗ ಬ್ಯಾಂಕ್ ಮ್ಯಾನೇಜರ್ ಅನುಮಾನದಿಂದ ಪೊಲೀಸರಿಗೆ ಮಾಹಿತಿ ನೀಡಿದರು. ಮಧ್ಯಸ್ಥಿಕೆಯಿಂದ ವೃದ್ಧರ ಪ್ರಾಣ, ಹಣ ಎರಡೂ ಉಳಿದಿದೆ.
Karnataka News Liveಸಿದ್ದರಾಮಯ್ಯ ರಾಜಕೀಯ ಶತ್ರು, ಆದರೆ ಇವರು ಕೊಲೆಗೂ ಎಸದ ಕ್ರಿಮಿನಲ್ಸ್ - ಭರತ್ ರೆಡ್ಡಿ ವಿರುದ್ಧ ಜನಾರ್ದನ ರೆಡ್ಡಿ ಕಿಡಿ
ಬಳ್ಳಾರಿಯಲ್ಲಿ ಶಾಸಕ ಗಾಲಿ ಜನಾರ್ದನ ರೆಡ್ಡಿ ಅವರ ಮೇಲೆ ಹಲ್ಲೆ ಹಾಗೂ ಕೊಲೆ ಯತ್ನ ನಡೆದಿದೆ ಎಂದು ಅವರು ಗಂಭೀರ ಆರೋಪ ಮಾಡಿದ್ದಾರೆ. ಈ ಘಟನೆಯು ರಾಜಕೀಯ ವೈಷಮ್ಯದಿಂದ ನಡೆದಿದೆ ಎಂದು ಆರೋಪಿಸಿ, ಅವರು ಪೊಲೀಸರಿಗೆ ಎರಡು ಪ್ರತ್ಯೇಕ ದೂರುಗಳನ್ನು ದಾಖಲಿಸಿದ್ದಾರೆ.
Karnataka News Liveಕೊನೆಗೂ ನಾಂದೇಡ-ಬೆಂಗಳೂರು ರೈಲು ನಿಲುಗಡೆ, ಕಮಲನಗರಕ್ಕೆ ಸಂಭ್ರಮ, ಕಲಬುರ್ಗಿಗೆ ವಿಮಾನ ಚಿಂತೆ
ಸಾರ್ವಜನಿಕರ ನಿರಂತರ ಹೋರಾಟ ಮತ್ತು ಪತ್ರಿಕಾ ವರದಿಯ ಫಲವಾಗಿ ಕಮಲನಗರದಲ್ಲಿ ನಾಂದೇಡ-ಬೆಂಗಳೂರು ಎಕ್ಸ್ಪ್ರೆಸ್ ರೈಲು ನಿಲುಗಡೆ ಆರಂಭವಾಗಿದೆ. ಮತ್ತೊಂದೆಡೆ, ಕೋಟ್ಯಂತರ ರೂಪಾಯಿ ವೆಚ್ಚದಲ್ಲಿ ನಿರ್ಮಿಸಲಾದ ಕಲಬುರ್ಗಿ ವಿಮಾನ ನಿಲ್ದಾಣದಲ್ಲಿ ವಿಮಾನ ಸೇವೆಗಳು ಸ್ಥಗಿತಗೊಂಡಿದೆ.
Karnataka News Liveಕಬ್ಜಾ ಶರಣುಗೆ ಮಾಗಡಿ ಜನರ ಗೂಸಾ - ಕಣ್ಣೀರುಡುತ್ತಲೇ 200K ಫಾಲೋವರ್ಸ್ ಇರುವ ಸೋಶಿಯಲ್ ಮಿಡಿಯಾಗೆ ಗುಡ್ಬೈ!
Karnataka News Liveಇನ್ನೂ ಸ್ಪಂದನಾ ಸೋಮಣ್ಣ Bigg Boss ಮನೇಲಿ ಇರೋದ್ಯಾಕೆ? ಗುಟ್ಟು ಬಿಚ್ಚಿಟ್ಟ Rakshita Shetty
ಬಿಗ್ ಬಾಸ್ ಕನ್ನಡ ಸೀಸನ್ 12 ಶೋನಲ್ಲಿ ವಾರ-ವಾರವೂ ಎಲಿಮಿನೇಶನ್ ಇದ್ದೇ ಇರುತ್ತದೆ. ಕಳೆದ ಬಾರಿ ಮಾಳು ನಿಪನಾಳ ಅವರು ಎಲಿಮಿನೇಟ್ ಆಗಿದ್ದರು, ಆದರೆ ಸ್ಪಂದನಾ ಸೋಮಣ್ಣ ಹೊರಬೇಕಿತ್ತು ಎಂಬ ಅಭಿಪ್ರಾಯ ವ್ಯಕ್ತವಾಗಿತ್ತು. ಆದರೆ ಸ್ಪಂದನಾ ಯಾಕೆ ಹೊರಹೋಗಲಿಲ್ಲ ಎಂದು ರಕ್ಷಿತಾ ಕಾರಣ ನೀಡಿದ್ದಾರೆ.
Karnataka News LiveBengaluru - ಚಲ್ಲಘಟ್ಟ ಮೆಟ್ರೋ ಸ್ಟೇಷನ್ ಬಳಿಕ ಸ್ಕೈಡೆಕ್ಗೆ 45 ಎಕರೆ ಜಾಗ ಫಿಕ್ಸ್ ಮಾಡಿದ ಬಿಡಿಎ!
BDA Finalises 45-Acre Land Near Challaghatta for Bengaluru Skydeck ಮೇಜರ್ ಆರ್ಟೀರಿಯಲ್ ರಸ್ತೆ (MAR) ಗೆ ಹತ್ತಿರದಲ್ಲಿರುವ ನಾಡಪ್ರಭು ಕೆಂಪೇಗೌಡ ಲೇಔಟ್ನಲ್ಲಿ ಪ್ರಾಧಿಕಾರವು 46 ಎಕರೆ ಭೂಮಿಯನ್ನು ಗುರುತಿಸಿದೆ.
Karnataka News Liveರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ, ಭರತ್ ತಂದೆ ಶ್ರೀರಾಮುಲು ಕೊಲೆಗೆ ಯತ್ನಿಸಿದ್ರು ಜನಾರ್ದನ ರೆಡ್ಡಿ ಗಂಭೀರ ಆರೋಪ!
ಬಳ್ಳಾರಿ ಫೈರಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ, ಮಾಜಿ ಸಚಿವ ಜನಾರ್ದನ ರೆಡ್ಡಿ ತಮ್ಮ ಮೇಲೆ ನಡೆದಿದ್ದು ಪೂರ್ವನಿಯೋಜಿತ ದಾಳಿ ಎಂದು ಆರೋಪಿಸಿದ್ದಾರೆ. ತಮ್ಮ ನಿವಾಸದ ಬಳಿ ಪತ್ತೆಯಾದ ಮತ್ತೊಂದು ಬುಲೆಟ್ ಪ್ರದರ್ಶಿಸಿ, ಶಾಸಕ ಭರತ್ ರೆಡ್ಡಿ ವಿರುದ್ಧ ಗಂಭೀರ ಆರೋಪಗಳನ್ನು ಮಾಡಿದ್ದಾರೆ.
Karnataka News Liveಬಳ್ಳಾರಿ ಸಂಸ್ಕೃತಿ ಹಾಳು ಮಾಡಬೇಡಿ - ಗಲಭೆಕೋರರ ವಿರುದ್ಧ ಸಚಿವ ಸಂತೋಷ್ ಲಾಡ್ ಗರಂ, ದಮ್ ಬ್ಯಾಲೆಟ್ ಪೇಪರ್ನಲ್ಲಿ ಚುನಾವಣೆ ಮಾಡಿ ಸವಾಲು
Karnataka News Liveಬಳ್ಳಾರಿ ಫೈರಿಂಗ್ ಖಂಡಿಸಿದ ಸಿಎಂ, ಭರತ್ ರೆಡ್ಡಿ ಜತೆ ಮಾತಾಡಿ ಎಂದಿದ್ದಕ್ಕೆ ಸಚಿವ ಜಮೀರ್ ಮೇಲೆ ಸಿದ್ದರಾಮಯ್ಯ ಗರಂ
ಬಳ್ಳಾರಿ ಫೈರಿಂಗ್ ಮತ್ತು ಕಾರ್ಯಕರ್ತನ ಸಾವಿನ ಬಗ್ಗೆ ಸಿಎಂ ಸಿದ್ದರಾಮಯ್ಯ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವ ಜಮೀರ್ ಅಹಮದ್ ತರಾಟೆ ತೆಗೆದುಕೊಂಡ ಅವರು, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಆದೇಶಿಸಿದ್ದಾರೆ ಮತ್ತು ಪರಿಸ್ಥಿತಿ ನಿಯಂತ್ರಿಸುವಂತೆ ಸೂಚನೆ ನೀಡಿದ್ದಾರೆ.
Karnataka News Liveಗಿಲ್ಲಿ ನಟನಿಂದ ಬಿಗ್ ಬಾಸ್ ಮನೆ ಮಂದಿಗೆಲ್ಲಾ ಅಂಟಿದ ರೋಗ; ಯಾರಿಗೂ ನೆಟ್ಟಗೆ ಕೂತ್ಕೋಳಕ್ಕಾಗ್ತಿಲ್ಲ!
ಬಿಗ್ ಬಾಸ್ ಮನೆ ಅಂದಮೇಲೆ ಅಲ್ಲಿ ಕಿತ್ತಾಟ, ಪ್ರೀತಿ, ಕುತಂತ್ರಗಳ ಜೊತೆಗೆ ವಿಚಿತ್ರ ವರ್ತನೆಗಳೂ ಸುದ್ದಿಯಾಗುವುದು ಸಾಮಾನ್ಯ. ಆದರೆ ಈ ಬಾರಿ ಸಾಮಾಜಿಕ ಜಾಲತಾಣಗಳಲ್ಲಿ 'ಸಹವಾಸ ದೋಷ' ಎಂಬ ಪೋಸ್ಟರ್ ಒಂದು ಭಾರಿ ವೈರಲ್ ಆಗುತ್ತಿದೆ.
Karnataka News Liveಬಳ್ಳಾರಿ ಫೈರಿಂಗ್ ಕೇಸ್ - ಇವರು ಹೇಳಿಬಿಟ್ರೆ ಆಯ್ತಾ? ಜನಾರ್ದನ ರೆಡ್ಡಿ ಟಾರ್ಗೆಟ್ ಆರೋಪಕ್ಕೆ ಸಚಿವ ಮಹದೇವಪ್ಪ ತಿರುಗೇಟು
ಬಳ್ಳಾರಿಯಲ್ಲಿ ನಡೆದ ಬ್ಯಾನರ್ ವಿವಾದ ಮತ್ತು ಸಂಘರ್ಷದ ಕುರಿತು ಸಚಿವ ಎಚ್.ಸಿ. ಮಹದೇವಪ್ಪ ಪ್ರತಿಕ್ರಿಯಿಸಿದ್ದಾರೆ. ತನಿಖೆಯಾಗದೆ ಯಾವುದೇ ತೀರ್ಮಾನಕ್ಕೆ ಬರಲು ಸಾಧ್ಯವಿಲ್ಲವೆಂದು ಸ್ಪಷ್ಟಪಡಿಸಿದ ಅವರು, ಕಾನೂನು ಸುವ್ಯವಸ್ಥೆ ಕುರಿತ ಬಿಜೆಪಿಯ ಟೀಕೆಗಳಿಗೆ ತಿರುಗೇಟು ನೀಡಿದ್ದಾರೆ.