KSRTC Bus Turns Bar; ಕೊಡಗಿನ ಕುಶಾಲನಗರದಿಂದ ಮೈಸೂರಿಗೆ ತೆರಳುತ್ತಿದ್ದ ಕೆಎಸ್ಆರ್ ಟಿಸಿ ಬಸ್ಸಿನಲ್ಲಿ ಮೂವರು ಪ್ರಯಾಣಿಕರು ಸಾರ್ವಜನಿಕವಾಗಿ ಮದ್ಯ ಸೇವನೆ ಮಾಡಿದ್ದಾರೆ. ಈ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಸಾರ್ವಜನಿಕರಿಂದ ತೀವ್ರ ಆಕ್ರೋಶ ವ್ಯಕ್ತವಾಗಿದೆ.
- Home
- Karnataka Districts
- Karnataka News Live: ಬಾರ್ ಆಗಿ ಮಾರ್ಪಟ್ಟ KSRTC ಬಸ್ - ಪ್ರಯಾಣದ ಮಧ್ಯೆಯೇ ಮದ್ಯ ಸೇವನೆ!
Karnataka News Live: ಬಾರ್ ಆಗಿ ಮಾರ್ಪಟ್ಟ KSRTC ಬಸ್ - ಪ್ರಯಾಣದ ಮಧ್ಯೆಯೇ ಮದ್ಯ ಸೇವನೆ!

ಬೆಂಗಳೂರು: ರಾಜ್ಯದಲ್ಲಿ ಅನಧಿಕೃತ ಜಾನುವಾರು ಸಾಗಣೆ ಸಮಯದಲ್ಲಿ ವಶಪಡಿಸಿಕೊಂಡ ವಾಹನಗಳನ್ನು ಬ್ಯಾಂಕ್ ಖಾತರಿ ಬದಲು ನಷ್ಟ ಭರ್ತಿ ಮುಚ್ಚಳಿಕೆ (ಇಂಡೆಮ್ನಿಟಿ ಬಾಂಡ್) ನೀಡಿ ಬಿಡಿಸಿಕೊಳ್ಳಲು ಅನುವಾಗುವಂತೆ ಕರ್ನಾಟಕ ಜಾನುವಾರು ಹತ್ಯೆ ಪ್ರತಿಬಂಧಕ ಮತ್ತು ಸಂರಕ್ಷಣಾ ವಿಧೇಯಕ- 2020ಕ್ಕೆ ತಿದ್ದುಪಡಿ ತರಲು ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ನಿರ್ಧರಿಸಲಾಗಿದೆ. ಈಗ ಇರುವ ನಿಯಮದ ಪ್ರಕಾರ ಜಾನುವಾರುಗಳ ಅನಧಿಕೃತ ಸಾಗಣೆ ವೇಳೆ ಸಿಕ್ಕಿಬಿದ್ದ ವಾಹನಗಳನ್ನೂ ಬ್ಯಾಂಕ್ ಗ್ಯಾರಂಟಿ ನೀಡಿ ಮಾತ್ರ ಬಿಡಿಸಿಕೊಳ್ಳಬೇಕು. 3 ರಿಂದ 5 ಲಕ್ಷ ರು. ಅಥವಾ ಅದಕ್ಕಿಂತ ಹೆಚ್ಚಿನ ಮೌಲ್ಯದ ಬ್ಯಾಂಕ್ ಖಾತರಿ ನೀಡುವುದು ಕಡ್ಡಾಯವಾಗಿತ್ತು. ಇದರಿಂದ ಸಣ್ಣಪುಟ್ಟ ವಾಹನ ಮಾಲೀಕರಿಗೆ ಸಮಸ್ಯೆಯಾಗುತ್ತಿತ್ತು. ವಾಹನಗಳ ಬಾಡಿಗೆಯಿಂದಲೇ ಜೀವನ ನಡೆಸುತ್ತಿರುವ ಕುಟುಂಬಗಳಿಗೆ ಕಷ್ಟವಾಗುತ್ತದೆ ಎಂಬ ಕಾರಣದಿಂದ ವಿಧೇಯಕಕ್ಕೆ ತಿದ್ದುಪಡಿ ತರಲು ಸಂಪುಟದಲ್ಲಿ ತೀರ್ಮಾನಿಸಲಾಗಿದೆ.
Karnataka News Live:ಬಾರ್ ಆಗಿ ಮಾರ್ಪಟ್ಟ KSRTC ಬಸ್ - ಪ್ರಯಾಣದ ಮಧ್ಯೆಯೇ ಮದ್ಯ ಸೇವನೆ!
Karnataka News Live:ಬೆಳಗಾವಿ ಅಧಿವೇಶನ - ವಿರೋಧ ಪಕ್ಷಗಳು ಅವಿಶ್ವಾಸ ಮಂಡಿಸಿದರೆ ಕಾಂಗ್ರೆಸ್ ಒಗ್ಗಟ್ಟಿನ ಹೋರಾಟ
ಚಳಿಗಾಲದ ಅಧಿವೇಶನದಲ್ಲಿ ವಿರೋಧ ಪಕ್ಷಗಳು ಮಂಡಿಸಬಹುದಾದ ಅವಿಶ್ವಾಸ ನಿರ್ಣಯವನ್ನು ಒಗ್ಗಟ್ಟಾಗಿ ಎದುರಿಸುವ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಸಚಿವರ ಸಭೆ ನಡೆಸಿದರು. ಸರ್ಕಾರದ ಸಾಧನೆಗಳನ್ನು ಮುಂದಿಟ್ಟು ಸಮರ್ಥವಾಗಿ ಎದುರಿಸಲು, ನಾಯಕತ್ವದ ಬಗ್ಗೆ ಯಾವುದೇ ಗೊಂದಲ ಬೇಡವೆಂದು ಸಭೆಯಲ್ಲಿ ನಿರ್ಧರಿಸಲಾಯಿತು.
Karnataka News Live:ದ್ವೇಷ ಭಾಷಣಕ್ಕೆ ₹1 ಲಕ್ಷವರೆಗೆ ದಂಡ, 2 ವರ್ಷ ಜೈಲು!
ದ್ವೇಷ ಭಾಷಣ, ದ್ವೇಷ ಹರಡುವಿಕೆ ಅಥವಾ ಹಿಂಸೆಗೆ ಪ್ರಚೋದಿಸುವವರಿಗೆ ಒಂದು ಲಕ್ಷ ರು.ವರೆಗೆ ದಂಡ ಹಾಗೂ 2 ವರ್ಷದವರೆಗೆ ಜೈಲು ಶಿಕ್ಷೆ ವಿಧಿಸುವ ‘ದ್ವೇಷ ಭಾಷಣ ಮತ್ತು ದ್ವೇಷ ಅಪರಾಧ ನಿಯಂತ್ರಣ ವಿಧೇಯಕ-2025’ ಸಂಪುಟ ಸಭೆಯಲ್ಲಿ ಒಪ್ಪಿಗೆ ನೀಡಲಾಗಿದೆ
Karnataka News Live:ಡಿಕೆಶಿ ಕಾರ್ಟಿಯರ್ ವಾಚ್ ಕದ್ದದ್ದಾ? ಚುನಾವಣಾ ಅಫಿಡವಿಟ್ನಲ್ಲಿ ಘೋಷಿಸಿಲ್ಲವೇಕೆ? - ಛಲವಾದಿ
ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಧರಿಸಿರುವ ದುಬಾರಿ ಕಾರ್ಟಿಯರ್ ವಾಚ್ ಅನ್ನು ಚುನಾವಣಾ ಅಫಿಡವಿಟ್ನಲ್ಲಿ ಘೋಷಿಸಿಲ್ಲ ಎಂದು ವಿಧಾನಪರಿಷತ್ತಿನ ಪ್ರತಿಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಆರೋಪಿಸಿದ್ದಾರೆ. ಸುಮಾರು ₹43 ಲಕ್ಷ ಮೌಲ್ಯದ ಈ ವಾಚ್ನ ಖರೀದಿ ದಾಖಲೆಗಳನ್ನು ಬಿಡುಗಡೆ ಮಾಡುವಂತೆ ಆಗ್ರಹ.
Karnataka News Live:ಪರಮೇಶ್ವರ್ ಮುಂದಿನ ಸಿಎಂಗೆ ಆಗ್ರಹಿಸಿ ರಕ್ತದಲ್ಲಿ ನೂರಾರು ಜನರಿಂದ ಸಹಿ ಸಂಗ್ರಹ
ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರನ್ನು ಮುಖ್ಯಮಂತ್ರಿಯನ್ನಾಗಿ ಮಾಡಲು ಒತ್ತಾಯಿಸಿ ತುಮಕೂರಿನಲ್ಲಿ ಅಖಿಲ ಕರ್ನಾಟಕ ಡಾ.ಜಿ.ಪರಮೇಶ್ವರ್ ಯುವ ಸೇನೆ ಪ್ರತಿಭಟನೆ ದಲಿತ ಸಮುದಾಯಕ್ಕೆ ಅವಕಾಶ ನೀಡಬೇಕೆಂದು ಆಗ್ರಹಿಸಿ, ಕಾರ್ಯಕರ್ತರು ರಕ್ತದಲ್ಲಿ ಸಹಿ ಸಂಗ್ರಹಿಸಿ ಎಐಸಿಸಿಗೆ ಮನವಿ ರವಾನಿಸಿದ್ದಾರೆ.