10:58 PM (IST) Dec 06

Karnataka News Liveಅಂಧರ ವಿಶ್ವಕಪ್ ಹೀರೋಯಿನ್ಸ್‌ಗಳಿಗೆ ದೊಡ್ಮನೆಯಿಂದ ಗೌರವ - ರಾಜ್ ಕುಟುಂಬದ ಆತಿಥ್ಯಕ್ಕೆ ಮೈಮರೆತ ಚಾಂಪಿಯನ್ನರು!

ಇತ್ತೀಚೆಗೆ ನಡೆದ ಅಂಧರ ಮಹಿಳಾ ವಿಶ್ವಕಪ್ ಟೂರ್ನಿಯಲ್ಲಿ ಐತಿಹಾಸಿಕ ಜಯ ಸಾಧಿಸಿ, ವಿಶ್ವ ಚಾಂಪಿಯನ್ ಪಟ್ಟ ಅಲಂಕರಿಸಿರುವ ಭಾರತೀಯ ಮಹಿಳಾ ಕ್ರಿಕೆಟ್ ತಂಡದ ಆಟಗಾರ್ತಿಯರಿಗೆ ಸ್ಯಾಂಡಲ್‌ವುಡ್‌ ದಿಗ್ಗಜ ಡಾ. ರಾಜ್‌ಕುಮಾರ್ ಅವರ ನಿವಾಸದಲ್ಲಿ ಅಭೂತಪೂರ್ವ ಸ್ವಾಗತ ಸನ್ಮಾನ ಗೌರವ ಲಭಿಸಿತು.

Read Full Story
10:57 PM (IST) Dec 06

Karnataka News LiveBBK 12 - ಪದೇ ಪದೇ ಕಿಚ್ಚ ಸುದೀಪ್‌ ಹೇಳ್ತಿರುವಂತೆ ರಜತ್‌ ವಿಡಿಯೋ ಅಸಲಿ ವಿಷಯ ಏನು? ಅಂಥದ್ದೇನಿದೆ?

Bigg Boss Kannada Season 12 Episode Update: ಬಿಗ್‌ ಬಾಸ್‌ ಮನೆಯಲ್ಲಿ ರಜತ್‌ ಅವರನ್ನು ನೋಡಿದಾಗೆಲ್ಲ ಕಿಚ್ಚ ಸುದೀಪ್‌ ಅವರು, “ವಿಡಿಯೋ ಪ್ಲೇ ಮಾಡಲಾ?” ಎಂದು ಪ್ರಶ್ನೆ ಮಾಡುತ್ತಲೇ ಇದ್ದಾರೆ. ಕಳೆದ ವೀಕೆಂಡ್‌ ಎಪಿಸೋಡ್‌ನಲ್ಲಿ ಕೂಡ ಕೇಳಿದ್ದುಂಟು. ಈ ವಿಡಿಯೋ ಹಿಂದಿನ ಕಥೆ ಏನು?

Read Full Story
10:49 PM (IST) Dec 06

Karnataka News LiveVastu Shastra - ನೆನಪಿಡಿ, ಅದೃಷ್ಟ ಕೈಹಿಡಿಯಲು ದೇವಸ್ಥಾನಕ್ಕೆ ಈ ಮೂರು ವಸ್ತುಗಳನ್ನ ಗುಟ್ಟಾಗಿ ದಾನ ಮಾಡ್ಬೇಕು!

ವಾಸ್ತು ಶಾಸ್ತ್ರವು ವಾಸ್ತು ದೋಷಗಳನ್ನು ತೆಗೆದುಹಾಕಲು ಅನೇಕ ಪರಿಹಾರಗಳನ್ನು ಒದಗಿಸುವ ವಿಜ್ಞಾನ. ವಾಸ್ತು ಶಾಸ್ತ್ರದ ಪ್ರಕಾರ, ದಾನವು ಬಹಳ ಮುಖ್ಯ, ನೀವು ಏನನ್ನಾದರೂ ದಾನ ಮಾಡಿದಾಗ, ಅದರ ಪುಣ್ಯ ಸಿಗುತ್ತದೆ ಮತ್ತು ನಿಮ್ಮ ದೋಷಗಳು ನಿವಾರಣೆಯಾಗುತ್ತವೆ.

Read Full Story
10:26 PM (IST) Dec 06

Karnataka News Liveಪುಟಿನ್‌ಗೆ ಇಲ್ಲೇ ಎಲೆಕ್ಷನ್‌ ನಿಲ್ಲೋಕೆ ಟಿಕೆಟ್‌ ಕೊಡ್ತಾರೆ ಅಂದ್ಕೊಂಡಿದ್ದೆ.. ಸಂತೋಷ್‌ ಲಾಡ್‌ ಲೇವಡಿ

ಕಾರ್ಮಿಕ ಸಚಿವ ಸಂತೋಷ್ ಲಾಡ್, ಮೋದಿ-ಪುಟಿನ್ ಸ್ನೇಹ ಮತ್ತು ಆರ್ಥಿಕ ನೀತಿಗಳ ಬಗ್ಗೆ ಕೇಂದ್ರ ಸರ್ಕಾರವನ್ನು ಟೀಕಿಸಿದ್ದಾರೆ. ಇದರೊಂದಿಗೆ, ಹುಬ್ಬಳ್ಳಿ ನಗರದಲ್ಲಿನ ಸಮಸ್ಯೆಗಳನ್ನು ಪರಿಹರಿಸಲು 6 ಸಾವಿರ ಕೋಟಿ ವೆಚ್ಚದ ಹೊಸ ಯೋಜನೆ ಚರ್ಚಿಸಲಾಗಿದೆ ಎಂದಿದ್ದಾರೆ.

Read Full Story
09:57 PM (IST) Dec 06

Karnataka News Liveಗಡುವು ಮೀರಿಸಿದರೆ ಮುಂದೆ ಕೆಲಸವಿಲ್ಲ - ಮೆಟ್ರೋ ಗುತ್ತಿಗೆದಾರರಿಗೆ ಡಿ.ಕೆ.ಶಿವಕುಮಾರ್‌ ಎಚ್ಚರಿಕೆ

ನಮ್ಮ ಮೆಟ್ರೋ ನೀಲಿ ಮಾರ್ಗದ ಕಾಮಗಾರಿಗೆ ವೇಗ ನೀಡಲು ಸೂಚಿಸಲಾಗಿದ್ದು, ನಿಗದಿತ ಗಡುವಿನಲ್ಲಿ ಪೂರ್ಣಗೊಳಿಸದಿದ್ದರೆ ಗುತ್ತಿಗೆದಾರರಿಗೆ ಮುಂದೆ ಯಾವುದೇ ಕಾಮಗಾರಿಯನ್ನೂ ನೀಡುವುದಿಲ್ಲ ಎಂದು ಡಿ.ಕೆ.ಶಿವಕುಮಾರ್‌ ಸ್ಪಷ್ಟಪಡಿಸಿದರು.

Read Full Story
09:53 PM (IST) Dec 06

Karnataka News Liveಏನೂ ಮಾಡದೆ ಸ್ಪಂದನಾ ಸೋಮಣ್ಣ Bigg Boss ಮನೇಲಿ ಇರೋದು ಹೇಗೆ? ಕಿಚ್ಚ ಸುದೀಪ್‌ ಬಿಚ್ಚಿಟ್ಟ ಸತ್ಯ ಏನು?

Bigg Boss Kannada Season 12 Episode Update: ಬಿಗ್‌ ಬಾಸ್‌ ಮನೆಯಲ್ಲಿ ಸ್ಪಂದನಾ ಸೋಮಣ್ಣ ಅವರು ಹೇಗೆ ಉಳಿದುಕೊಂಡಿದ್ದಾರೆ ಎಂದು ಕೆಲ ಸ್ಪರ್ಧಿಗಳು ಹೇಳಿದ್ದೂ ಇದೆ. ಈಗ ವೀಕ್ಷಕರು ಕೂಡ ಇದೇ ಅಭಿಪ್ರಾಯಪಟ್ಟಿದ್ದರು. ಕಿಚ್ಚ ಸುದೀಪ್‌ ಅವರು ಈ ಬಗ್ಗೆ ಮಾತನಾಡಿದ್ದಾರೆ.

Read Full Story
09:15 PM (IST) Dec 06

Karnataka News Liveನಾನು ಲಂಚ ಪಡೆದಿದ್ದು ಸಾಬೀತಾದರೆ ರಾಜೀನಾಮೆ - ಗೃಹ ಸಚಿವ ಪರಮೇಶ್ವರ್‌

ನಾನು ಯಾರಿಂದಲೂ ಒಂದು ಪೈಸೆ ಲಂಚ ಪಡೆದಿಲ್ಲ. ನಾನು ಲಂಚ ಪಡೆದಿರುವುದು ಸಾಬೀತುಪಡಿಸಿದರೆ ಆ ಕ್ಷಣವೇ ಪದವಿಗೆ ರಾಜೀನಾಮೆ ನೀಡುತ್ತೇನೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್‌ ಹೇಳಿದ್ದಾರೆ.

Read Full Story
09:01 PM (IST) Dec 06

Karnataka News Liveದಲಿತ ಸಮುದಾಯಕ್ಕೆ ಸಿಎಂ ಹುದ್ದೆ ಕೊಡಿ ಎಂದು ಸಮಯ ಬಂದಾಗ ಕೇಳುವೆ - ಸಚಿವ ಮಹದೇವಪ್ಪ

ದಲಿತ ಸಮುದಾಯಕ್ಕೆ ಸಿಎಂ ಹುದ್ದೆ ನೀಡಿ ಎಂಬುದನ್ನು ಸಮಯ ಬಂದಾಗ ಕೇಳುವೆ, ಆದರೆ ಎಲ್ಲೊ ನಿಂತು ಮಾಧ್ಯಮದವರ ಮುಂದೆ ಇದನ್ನ ಪ್ರಶ್ನಿಸಲಾಗಲ್ಲ. ಕಾಲ ಕೂಡಿ ಬಂದಾಗ ಎಲ್ಲವೂ ಆಗುತ್ತೆ ಎಂದು ಸಚಿವ ಮಹದೇವಪ್ಪ ಹೇಳಿದರು.

Read Full Story
08:51 PM (IST) Dec 06

Karnataka News Liveಸುಳ್ಳು ಆರೋಪ ಮಾಡಿದರೆ ಒದ್ದು ಒಳಗೆ ಹಾಕಬೇಕಾಗುತ್ತದೆ - ಸಚಿವ ಎಂ.ಬಿ.ಪಾಟೀಲ್‌

ಕೆಎಸ್‌ಡಿಎಲ್‌ ಭ್ರಷ್ಟಾಚಾರ ಕುರಿತು ಶಾಸಕ ಎಚ್‌.ಟಿ.ಮಂಜು ಮಾಡಿರುವ ಆರೋಪ ಸುಳ್ಳಾಗಿದ್ದರೆ, ಮಾನನಷ್ಟ ಮೊಕದ್ದಮೆ ಮತ್ತು ಕ್ರಿಮಿನಲ್‌ ಮೊಕದ್ದಮೆ ದಾಖಲಿಸಲಾಗುವುದು ಎಂದು ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್‌ ತಿಳಿಸಿದ್ದಾರೆ.

Read Full Story
08:44 PM (IST) Dec 06

Karnataka News Liveಸೀನು ಯಾಕೆ ಬರುತ್ತೆ ಗೊತ್ತಾ? ಇಲ್ಲಿದೆ ಅದರ ಹಿಂದಿರುವ ಕುರಿತ ಅಚ್ಚರಿಯ ಸಂಗತಿಗಳು!

ಸೀನು ದೇಹದಲ್ಲಿ ನಡೆಯುವ ಅತ್ಯಂತ ಸಹಜ ಪ್ರಕ್ರಿಯೆ. ಸಾಮಾನ್ಯವಾಗಿ ಸೀನು ಬಂದರೆ ಅದೊಂದು ಅನಾರೋಗ್ಯ ಎಂದು ಭಾವಿಸುತ್ತೇವೆ. ಆದರೆ ಸೀನು ಒಂದು ವೇಗದ ರಕ್ಷಣಾ ವ್ಯವಸ್ಥೆ. ಅಷ್ಟಕ್ಕೂ ಸೀನು ಯಾಕೆ ಬರುತ್ತೆ, ಅದರ ಹಿಂದಿನ ವೈಜ್ಞಾನಿಕ ಕಾರಣ ಏನು ಅಂತ ನೋಡೋಣ.

Read Full Story
07:54 PM (IST) Dec 06

Karnataka News Liveಶಾಲೆಯಿಂದ ಮರಳುತ್ತಿದ್ದ ವೇಳೆ ಬೀದಿ ನಾಯಿ ದಾಳಿ, 5 ವರ್ಷದ LKG ಬಾಲಕಿಗೆ ಗಂಭೀರ ಗಾಯ

ಶಾಲೆಯಿಂದ ಮರಳುತ್ತಿದ್ದ ವೇಳೆ ಬೀದಿ ನಾಯಿ ದಾಳಿ, 5 ವರ್ಷದ LKG ಬಾಲಕಿಗೆ ಗಂಭೀರ ಗಾಯ, ರಾಜ್ಯದಲ್ಲಿ ನಾಯಿ ದಾಳಿ ಪ್ರಕರಣ ಗಂಭೀರ ಸ್ವರೂಪ ಪಡೆದುಕೊಳ್ಳುತ್ತಿದೆ. ದಾವಣಗೆರೆಯಲ್ಲ ನಾಯಿ ದಾಳಿಗೆ ಮಹಿಳೆ ಮೃತಪಟ್ಟ ಬೆನ್ನಲ್ಲೇ ಈ ಘಟನೆ ನಡೆದಿದೆ.

Read Full Story
07:50 PM (IST) Dec 06

Karnataka News LiveBigg Boss - ದುಷ್ಮನ್‌ಗೂ ಯಾರೂ ಹೀಗೆ ಮಾಡಲ್ಲ- ಕೊನೆಗೂ ರಿವೀಲ್‌ ಆಯ್ತು ರಘು ದ್ವೇಷದ ಕಾರಣ

ಮ್ಯೂಟೆಂಟ್‌ ರಘು ಅವರು ಗಿಲ್ಲಿ ನಟನ ಮೇಲೆ ಗಂಭೀರ ಆರೋಪ ಮಾಡಿದ್ದಾರೆ. ತನ್ನ ಎತ್ತರ ಮತ್ತು ದೇಹದ ಬಗ್ಗೆ ನಿರಂತರವಾಗಿ ಮಾತನಾಡಿ, ಕೋಟ್ಯಂತರ ಜನರ ಮುಂದೆ ತನ್ನ ವರ್ಚಸ್ಸನ್ನು ಹಾಳುಮಾಡುತ್ತಿದ್ದಾನೆ ಎಂದು ರಘು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Read Full Story
07:43 PM (IST) Dec 06

Karnataka News Liveವೃತ್ತಿಜೀವನದಲ್ಲಿ 2 ಬಾರಿ ದೊಡ್ಡ ತಪ್ಪು ಮಾಡಿದ ರಾಮ್ ಚರಣ್.. ಚಿರಂಜೀವಿಯೂ ಏನೂ ಮಾಡಲಾಗಲಿಲ್ಲವೇ?

ರಾಮ್ ಚರಣ್ ತಮ್ಮ ವೃತ್ತಿಜೀವನದಲ್ಲಿ 2 ಬಾರಿ ದೊಡ್ಡ ತಪ್ಪುಗಳನ್ನು ಮಾಡಿದ್ದಾರೆ. ಎರಡು ಚಿತ್ರಗಳ ವಿಷಯದಲ್ಲಿ ಚರಣ್ ತೆಗೆದುಕೊಂಡ ನಿರ್ಧಾರವು ಹಿನ್ನಡೆಯಾಯಿತು. ಅದೇನು ಎಂದು ಈ ಲೇಖನದಲ್ಲಿ ತಿಳಿಯಿರಿ.

Read Full Story
07:24 PM (IST) Dec 06

Karnataka News Live10 ಭಾಷೆಗಳಲ್ಲಿ 90 ಸಿನಿಮಾಗಳು, ಗಂಗೂಲಿ ಜೊತೆ ಅಫೇರ್ ವದಂತಿ.. 50 ವರ್ಷವಾದರೂ ಮದುವೆಯಾಗದ ನಟಿ ಯಾರು?

ಒಂದು ಕಾಲದಲ್ಲಿ ಸ್ಟಾರ್ ನಟಿಯಾಗಿದ್ದ ಈಕೆ, 10 ಭಾಷೆಗಳಲ್ಲಿ 90ಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಟಿಸಿದ್ದಾರೆ. 50 ವರ್ಷವಾದರೂ ಇನ್ನೂ ಮದುವೆಯಾಗದೆ ಒಂಟಿ ಜೀವನ ನಡೆಸುತ್ತಿರುವ ಈ ನಟಿ ಯಾರು ಗೊತ್ತಾ?

Read Full Story
07:19 PM (IST) Dec 06

Karnataka News Liveಮಾಂಸದ ಮುದ್ದೆಯಂಥಾದ ಮೃತದೇಹದ ಮುಂದೆ ಮಗನ ಕಣ್ಣೀರು, ಪಂಚಭೂತದಲ್ಲಿ ಲೀನರಾದ ಲೋಕಾಯುಕ್ತ ಸಿಪಿಐ ಪಂಚಾಕ್ಷರಿ ಸಾಲಿಮಠ!

ಹಾವೇರಿ ಲೋಕಾಯುಕ್ತ ಸಿಪಿಐ ಪಂಚಾಕ್ಷರಿ ಸಾಲಿಮಠ ಅವರು ಕಾರು ಡಿವೈಡರ್‌ಗೆ ಡಿಕ್ಕಿಯಾಗಿ ಬೆಂಕಿ ಹೊತ್ತಿಕೊಂಡ ಪರಿಣಾಮ ಸಜೀವ ದಹನವಾಗಿದ್ದಾರೆ. ಗುರುತು ಸಿಗದಷ್ಟು ಸುಟ್ಟು ಕರಕಲಾಗಿದ್ದ ಅವರ ದೇಹವನ್ನು ಕೈಯಲ್ಲಿದ್ದ ಉಂಗುರ ಮತ್ತು ಕಾರ್ ನಂಬರ್ ಪ್ಲೇಟ್‌ನಿಂದ ಪತ್ತೆಹಚ್ಚಲಾಗಿತ್ತು.

Read Full Story
06:51 PM (IST) Dec 06

Karnataka News Liveರೈತರ ಬೆಳೆಗಳಿಗೆ ಮಾರುಕಟ್ಟೆ ಕಲ್ಪಿಸಲು 'ಅಂತಾರಾಷ್ಟ್ರೀಯ ಸ್ಯಾಂಡ್‌ವಿಚ್ ಸ್ನಾತಕೋತ್ತರ ಕೋರ್ಸ್' - ಸಿಎಂ ಸಿದ್ದರಾಮಯ್ಯ

ರೈತರು ಬೆಳೆದ ಬೆಳೆಗಳಿಗೆ ಮಾರುಕಟ್ಟೆ ವ್ಯವಸ್ಥೆಯನ್ನು ಹೇಗೆ ಕಲ್ಪಿಸಬಹುದು ಎಂಬುದರ ಕುರಿತಂತೆ ಅಂತಾರಾಷ್ಟ್ರೀಯ ಸ್ಯಾಂಡ್‌ವಿಚ್ ಸ್ನಾತಕೋತ್ತರ ಪದವಿ ಕೋರ್ಸ್ ಆರಂಭಿಸಲು ಗಂಭೀರ ಚಿಂತನೆ ನಡೆಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

Read Full Story
06:37 PM (IST) Dec 06

Karnataka News Liveಕರ್ನಾಟಕದಲ್ಲಿ ನಿಮ್ಹಾನ್ಸ್ ಮಾದರಿಯ ಮತ್ತಷ್ಟು ಸಂಸ್ಥೆಗಳು ಅಗತ್ಯ - ಸಚಿವ ಶರಣ ಪ್ರಕಾಶ್ ಪಾಟೀಲ್

ಹೆಚ್ಚುತ್ತಿರುವ ಮನೋವೈದ್ಯಕೀಯ ಮತ್ತು ಮಾನಸಿಕ ಅಸ್ವಸ್ಥತೆಗಳ ಸವಾಲು ಎದುರಿಸಲು ವಿಶೇಷ ನವೀಕೃತ ಮತ್ತು ನಾವೀನ್ಯತಾ ಪ್ರಯತ್ನಗಳನ್ನು ಕೈಗೊಳ್ಳಬೇಕಾದ ಅಗತ್ಯವಿದೆ ಎಂದು ಸಚಿವ ಡಾ.ಶರಣ ಪ್ರಕಾಶ್ ಪಾಟೀಲ್ ತಿಳಿಸಿದ್ದಾರೆ.

Read Full Story
05:58 PM (IST) Dec 06

Karnataka News Liveಭಾರತೀಯ ಸಂಸ್ಕೃತಿಯನ್ನು ಎತ್ತಿ ಹಿಡಿಯುವ ಸಿನಿಮಾ - ‘45’ ಟ್ರೇಲರ್ ಬಿಡುಗಡೆಗೆ ಕೌಂಟ್‌ಡೌನ್

ಮುಂಗಡವಾಗಿ ಪಾಸ್‌ ಪಡೆದುಕೊಂಡವರಿಗೆ ಮಾತ್ರ ಚಿತ್ರಮಂದಿರ ಪ್ರವೇಶ ದೊರೆಯಲಿದೆ. ಅರ್ಜುನ್‌ ಜನ್ಯ ನಿರ್ದೇಶಿಸಿ, ರಮೇಶ್‌ ರೆಡ್ಡಿ ನಿರ್ಮಿಸಿರುವ ‘45’ ಚಿತ್ರವು ಡಿ.25ರಂದು ತೆರೆಗೆ ಬರುತ್ತಿದೆ.

Read Full Story
05:42 PM (IST) Dec 06

Karnataka News Liveಸಿದ್ಧರಾಮಯ್ಯ ಮಾತು ಎತ್ತಿದ್ರೆ ಸಾಬ್ರು ಸಾಬ್ರು ಅಂತ ಜಪ ಮಾಡ್ತಾರೆ - ಶಾಸಕ ಯತ್ನಾಳ್ ವ್ಯಂಗ್ಯ!

ಸಿಎಂ ಸಿದ್ಧರಾಮಯ್ಯ, ಡಿಸಿಎಂ ಇಬ್ಬರು ಸೇರಿ ರಾಜ್ಯ ಲೂಟಿ ಮಾಡುತ್ತಿದ್ದಾರೆ. ಕೈಗಾರಿಕೆ ತರುವುದು ಸೇರಿದಂತೆ ಯಾವುದೇ ಅಭಿವೃದ್ದಿ ಬಗ್ಗೆ ಮಾತಾಡಲ್ಲ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದರು.

Read Full Story
05:39 PM (IST) Dec 06

Karnataka News LiveChanakya Niti - ಇಂಥಾ ಮಹಿಳೆಯರ ಕೈ ಹಿಡಿದ್ರೆ ಜೀವನ ಪರ್ಯಂತ ಅಳೋದು ಗ್ಯಾರಂಟಿ - ಮದುವೆ ಬಗ್ಗೆ ಪುರುಷರಿಗೆ ಕಿವಿಮಾತು

ಸಾಂಸಾರಿಕ ಜೀವನ ಶಾಂತಿಯುತವಾಗಿರಬೇಕಾದ್ರೆ ಎಂತಹ ಹೆಣ್ಣನ್ನು ಮದುವೆ ಮಾಡಿಕೊಳ್ಳಬೇಕು ಎಂಬುದನ್ನು ಚಾಣಕ್ಯರು ತಿಳಿಸಿದ್ದಾರೆ. ತಮ್ಮ ನೀತಿಯಲ್ಲಿ 6 ರೀತಿಯ ಮಹಿಳೆಯರನ್ನು ಮದುವೆ ಆಗಬಾರದು ಎಂದು ಹೇಳಿದ್ದಾರೆ.

Read Full Story