ಕೊರೋನಾ ಸೋಂಕಿನ ಬಗ್ಗೆ ಕೋಡಿ ಮಠದ ಸ್ವಾಮೀಜಿಯಿಂದ ಭವಿಷ್ಯ ಇದು ಆತಂಕ ದೂರ ಮಾಡುವಂತಹ ಭವಿಷ್ಯ ಶೀಘ್ರವೇ ದೂರಾಗಲಿದೆ ಮಹಾಮಾರಿ ಸೋಂಕು

ಅರಸೀಕೆರೆ (ಜೂ.04): ಕೊರೋನಾ ಎಂಬ ವೈರಸ್‌ನಿಂದ ವಿಶ್ವ ಸಮುದಾಯವೇ ನಲುಗುತ್ತಿದೆ. ಇದರಿಂದ ಶೀಘ್ರವೇ ಮುಕ್ತಿ ದೊರೆಯಲಿದೆ ಎಂದು ಸುಕ್ಷೇತ್ರ ಹಾರನಹಳ್ಳಿ ಕೋಡಿಮಠದ ಡಾ. ಶಿವಾನಂದ ಶಿವಯೋಗಿ ಸ್ವಾಮೀಜಿ ಹೇಳಿದರು. 

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಶ್ರೀಮಠದಲ್ಲಿ ಮೃತ್ಯುಂಜಯ ಹೋಮ, ಮುಂಜಾನೆ ಶಿವಲಿಂಗಜ್ಜಯ್ಯನವರ ಗದ್ದುಗೆಗೆ ಹಾಗೂ ಕ್ಷೇತ್ರ ದೇವತೆಗಳಿಗೆ ವಿಶೇಷ ಪೂಜೆ ನಡೆದ ಬಳಿಕ ಕಿರಣ್ ಹಾಗೂ ಅರುಣ್ ಶಾಸ್ತ್ರಿಗಳ ನೇತೃತ್ವದಲ್ಲಿ ಗಣಪತಿ ಹಾಗೂ ಮೃತ್ಯುಂಜಯ ಹೋಮ ನಡೆಸಲಾಯಿತು. 

ಕೋಡಿಮಠದ ಶ್ರೀಗಳಿಂದ ಸ್ಫೋಟಕ ಭವಿಷ್ಯ : ಕೊರೋನಾ ಕೊನೆಯಾಗುತ್ತಾ-ಮತ್ತೇನು ಕಾದಿದೆ ಜಗಕೆ..?

ಬಳಿಕ ಶ್ರೀ ಕ್ಷೇತ್ರದ ಪೀಟಾಧಿಪತಿ ಡಾ. ಶಿವಾನಂದ ಶಿವಯೋಗಿ ಸ್ಚಾಮೀಜಿ ಮಾತನಾಡಿ ಜಪ ತಪ ಹೋಮ ಹವನಾದಿಗಳಿಗೆ ಅವುಗಳದ್ದೇ ಮಹತ್ವವಿದೆ ಎಂದರು. 

ಪ್ರಸ್ತುತ ದಿನಗಳಲ್ಲಿ ಕೊರೋನಾ ಎಂಬ ಸಾಂಕ್ರಾಮಿಕ ರೋಗದಿಮದ ಲಕ್ಷಾಂತರ ಮಂದಿ ಸಾವು ನೋವಿಗೆ ತುತ್ತಾಗುತ್ತಿದ್ದಾರೆ. ಇದರಿಂದ ಮುಕ್ತಿ ದಯಪಾಲಿಸುವಂತೆ ಭಗವಂತನಲ್ಲಿ ಪ್ರಾರ್ಥಿಸಿ ಶ್ರೀ ಮಠದ ಭಕ್ತರ ಸಹಕಾರದೊಂದಿಗೆ ಮಠದಲ್ಲಿ ನಿತ್ಯ ಹೋಮ ಹವನ ನಡೆಸಲಾಗುತ್ತದೆ ಎಂದರು. 

ಸೂಚನೆ: ಕೊರೋನಾ ಮಹಾಮಾರಿ ಎಲ್ಲೆಡೆ ಹರಡುತ್ತಿದೆ. ಹೀಗಿರುವಾಗ ಎಲ್ಲರೂ ತಪ್ಪದೇ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ ಹಾಗೂ ಲಸಿಕೆ ಪಡೆಯಿರಿ ಎಂಬುವುದು ಏಷ್ಯಾನೆಟ್‌ ನ್ಯೂಸ್‌ ಕಳಕಳಿಯ ವಿನಂತಿ. ಒಗ್ಗಟ್ಟಿನಿಂದ ನಾವು ಈ ಕೊರೋನಾ ಸರಪಳಿ ಮುರಿಯೋಣ #ANCares #IndiaFightsCorona