Asianet Suvarna News Asianet Suvarna News

ಸರ್ಕಾರದ ನಿಯಮ ಪಾಲಿಸಿ : ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್

ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ತಮ್ಮ ಹುಟ್ಟೂರಿನಲ್ಲಿ ಗಣೇಶ ಚತುರ್ಥಿಯಂದು ತಮ್ಮ ಪೂರ್ವಜರಿಗೆ ಪೂಜೆ ಸಲ್ಲಿಸಿದರು.

Kpcc President DK Shivakumar Pooja At His Native
Author
Bengaluru, First Published Aug 24, 2020, 12:51 PM IST

 ಕನ​ಕ​ಪುರ (ಆ.24): ತಾಲೂಕಿನ ದೊಡ್ಡಾಲಹಳ್ಳಿ ಗ್ರಾಮದಲ್ಲಿ ತಂದೆ ಡಿ.ಕೆ. ಕೆಂಪೇಗೌಡರು ಮತ್ತು ಪೂರ್ವಜರ ಸಮಾ​ಧಿಗಳಿಗೆ ಕೆಪಿ​ಸಿಸಿ ಅಧ್ಯಕ್ಷ ಡಿ.ಕೆ.​ಶಿ​ವ​ಕು​ಮಾರ್‌ ಕುಟುಂಬ ಸಮೇ​ತ​ರಾಗಿ ಗಣೇ​ಶನ ಹಬ್ಬದ ದಿನ​ದಂದು ಪೂಜೆ ಸಲ್ಲಿಸಿದರು.

ಬೆಂಗ​ಳೂ​ರಿ​ನಿಂದ ಆಗ​ಮಿ​ಸಿದ ಕೆಪಿ​ಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಅವರು ತಾಯಿ ಗೌರಮ್ಮ, ಪತ್ನಿ ಉಷಾ ಶಿವಕುಮಾರ್‌ ಅವ​ರೊಂದಿಗೆ ಸೇರಿ ಹಿರಿಯರ ಸಮಾಧಿಗೆ ಪೂಜೆ ಸಲ್ಲಿಸಿ ಎಡೆ ಇಟ್ಟರು.

ಈ ವೇಳೆ ಮಾತ​ನಾ​ಡಿದ ಡಿ.ಕೆ.​ಶಿ​ವ​ಕು​ಮಾರ್‌, ಪ್ರತಿವರ್ಷ ಗಣೇಶನ ಹಬ್ಬದ ದಿನ ನಮ್ಮ ತಂದೆ ಮತ್ತು ಪೂರ್ವಜರಿಗೆ ಪೂಜೆ ಸಲ್ಲಿಸುತ್ತಾ ಬಂದಿ​ದ್ದೇವೆ. ಇದು ಹಿಂದಿನಿಂದಲೂ ನಡೆದು ಬಂದಿರುವ ಪದ್ಧತಿ ಹಾಗಾಗಿ ಇವತ್ತು ಕುಟುಂಬದವರ ಜೊತೆಗೆ ಬಂದು ಪೂಜೆ ಸಲ್ಲಿಸಿದ್ದೇನೆ. ಹಿರಿ​ಯ​ರಿಗೆ ಎಡೆ ಇಟ್ಟು ಆತ್ಮಕ್ಕೆ ಶಾಂತಿ ಕೋರಿ ಅವರ ಆಶೀ​ರ್ವಾದ ಬೇಡಿದ್ದೇವೆ ಎಂದ​ರು.

ಕಾಂಗ್ರೆಸ್‌ನಲ್ಲಿ ಆಂತರಿಕ ಬೆಳವಣಿಗೆ: ಸೋನಿಯಾಗೆ ಪತ್ರ ಬರೆದ ಡಿಕೆಶಿ...

ಈ ಬಾರಿ ಕೊರೋನಾ ಇರುವ ಹಿನ್ನೆಲೆ ಜನರು ಗಣೇಶ ಮೂರ್ತಿಗಳನ್ನು ಪ್ರತಿಷ್ಠಾಪನೆ ಮಾಡುವಾಗ ಎಚ್ಚರಿಕೆ ವಹಿ​ಸ​ಬೇಕು. ಸರ್ಕಾರದ ನಿಯಮಗಳನ್ನು ಕಡ್ಡಾ​ಯ​ವಾಗಿ ಪಾಲನೆ ಮಾಡಬೇಕು. ನಮ್ಮ ಸಂಪ್ರದಾಯಗಳು ಮುಖ್ಯ, ಆದರೆ, ಕೊರೋನಾ ಬಗ್ಗೆಯೂ ನಿಗಾ ಇರಲಿ ಎಂದು ಹೇಳಿ​ದರು.

ಫೋನ್‌ ಟ್ಯಾಪಿಂಗ್‌ ನಡೆದಿಲ್ಲ ಎಂಬ ಗೃಹ ಸಚಿವ ಬಸವರಾಜ್‌ ಬೊಮ್ಮಾಯಿ ಹೇಳಿಕೆ ವಿಚಾರಕ್ಕೆ ಪ್ರತಿಕ್ರಿಯಿಸಿ ನನಗೆ ನನ್ನ ಫೋನ್‌ ಟ್ಯಾಪ್‌ ಆಗುತ್ತಿದೆ ಎಂದು ಅನುಮಾನವಿದೆ. ಹಾಗಾಗಿ ದೂರು ಕೊಟ್ಟಿದ್ದೇನೆ. ಈ ಬಗ್ಗೆ ತನಿಖೆ ನಡೆಯಲಿ, ಆಮೇಲೆ ಮಾತನಾ​ಡು​ತ್ತೇನೆ ಎಂದು ಡಿ.ಕೆ.​ಶಿ​ವ​ಕು​ಮಾರ್‌ ಪ್ರಶ್ನೆ​ಯೊಂದಕ್ಕೆ ಉತ್ತ​ರಿ​ಸಿ​ದರು.

Follow Us:
Download App:
  • android
  • ios