ಪದಗ್ರಹಣ ಕಾರ್ಯಕ್ರದ ವೀಕ್ಷಣೆಗಾಗಿ ಸಾಮಾಜಿಕ ಜಾಲತಾಣವನ್ನು ಬಳಸಿಕೊಳ್ಳಲಾಗುವುದು| ದೇಶವೇ ಕೊರೋನಾ ಸಂಕಷ್ಟದಲ್ಲಿದೆ| ಈ ಹಿನ್ನೆಲೆಯಲ್ಲಿ ಅತ್ಯಂತ ಸರಳ ಮತ್ತು ವಿಭಿನ್ನವಾಗಿ ಕಾರ್ಯಕ್ರಮ ಆಯೋಜನೆ| ಒಂದೇ ಬಾರಿ 4 ಲಕ್ಷ ಮಂದಿ ಕಾರ್ಯಕ್ರಮ ವೀಕ್ಷಣೆಗೆ ಅವಕಾಶ|
ಗದಗ(ಮೇ.29): ಕರ್ನಾಟಕ ರಾಜ್ಯ ಕಾಂಗ್ರೆಸ್ ಅಧ್ಯಕ್ಷರಾಗಿ ಡಿ.ಕೆ.ಶಿವಕುಮಾರ್ ಹಾಗೂ ಮೂವರು ಕಾರ್ಯಾಧ್ಯಕ್ಷರ ಪದಗ್ರಹಣ ಕಾರ್ಯಕ್ರಮ ಜೂ.7 ರಂದು ಜರುಗಲಿದೆ ಎಂದು ಕೆಪಿಸಿಸಿ ರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ತಿಳಿಸಿದ್ದಾರೆ.
Add Asianetnews Kannada as a Preferred Source

ನಗರದಲ್ಲಿ ಗುರುವಾರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದನ ಅವರು, ಪದಗ್ರಹಣ ಕಾರ್ಯಕ್ರದ ವೀಕ್ಷಣೆಗಾಗಿ ಸಾಮಾಜಿಕ ಜಾಲತಾಣವನ್ನು ಬಳಸಿಕೊಳ್ಳಲಾಗುವುದು ಎಂದು ಹೇಳಿದ್ದಾರೆ.
ಕೆಪಿಸಿಸಿ ಅಧ್ಯಕ್ಷರಾಗಿ ಜೂ.7ರಂದು ಡಿಕೆಶಿ ಅಧಿಕಾರ ಸ್ವೀಕಾರ..?
ದೇಶವೇ ಕೊರೋನಾ ಸಂಕಷ್ಟದಲ್ಲಿದೆ. ಈ ಹಿನ್ನೆಲೆಯಲ್ಲಿ ಅತ್ಯಂತ ಸರಳ ಮತ್ತು ವಿಭಿನ್ನವಾಗಿ ಕಾರ್ಯಕ್ರಮ ಆಯೋಜಿಸಲಾಗಿದೆ. ರಾಜ್ಯದ 800 ಸ್ಥಳಗಳಲ್ಲಿ 50 ಜನ ಕಾರ್ಯಕರ್ತರು ಸೇರಲಿದ್ದು, ಆಯಾ ಗ್ರಾಮಗಳಲ್ಲಿ ಸಣ್ಣದಾಗಿ ಕಾರ್ಯಕ್ರಮ ಮಾಡಲಿದ್ದಾರೆ. ಒಂದೇ ಬಾರಿ 4 ಲಕ್ಷ ಮಂದಿ ಕಾರ್ಯಕ್ರಮ ವೀಕ್ಷಣೆಗೆ ಅವಕಾಶ ಮಾಡಲಾಗಿದೆ. ಸಾಮಾಜಿಕ ಜಾಲತಾಣವನ್ನು ಸಮರ್ಥವಾಗಿ ಬಳಸಿಕೊಂಡು, ವಿಭಿನ್ನವಾಗಿ ಕಾರ್ಯಕ್ರಮ ಮಾಡಲಾಗುವುದು ಎಂದು ಹೇಳಿದ್ದಾರೆ.
