Asianet Suvarna News Asianet Suvarna News

ಗ್ರಾಮ ಪಂಚಾಯತ್ ಅಧ್ಯಕ್ಷ ಕೋವಿಡ್‌ಗೆ ಬಲಿ

ಕೊರೋನಾ ಮಹಾಮಾರಿ ಅಟ್ಟಹಾಸ ದಿನದಿಂದ ದಿನಕ್ಕೆ ಎರಿಕೆಯಾಗುತ್ತಲೇ ಇದ್ದು  ಸಾವು ನೋವುಗಳು ಏರಿಕೆಯಾಗುತ್ತಿದೆ. ಮಂಡ್ಯದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷರೋರ್ವರು ಕೋವಿಡ್‌ಗೆ ಬಲಿಯಾಗಿದ್ದಾರೆ. 

KR Pete Grama Panchayat President Dies From Covid 19 snr
Author
Bengaluru, First Published May 5, 2021, 7:44 AM IST

ಕೆ.ಆರ್‌.ಪೇಟೆ (ಮೇ.05): ಕೊರೋನಾ ಸೋಂಕಿನಿಂದ ಮಂಡ್ಯ ಜಿಲ್ಲೆ ಕೆ.ಆರ್‌.ಪೇಟೆ ತಾಲೂಕಿನ ಬಳ್ಳೇಕೆರೆ ಗ್ರಾಮ ಪಂಚಾಯಿತಿ ಅಧ್ಯಕ್ಷ ಎನ್‌.ವಿ.ವೆಂಕಟರಾಮು(45) ಸಾವನ್ನಪ್ಪಿದ್ದಾರೆ.

ಕಳೆದ 5-6 ದಿನಗಳ ಹಿಂದೆ ಕೊರೋನಾ ಸೋಂಕಿಗೆ ಒಳಗಾಗಿದ್ದ ವೆಂಕಟರಾಮು ಅವರನ್ನು ಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಇವರಿಗೆ ಉಸಿರಾಟದ ಸಮಸ್ಯೆ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಮೈಸೂರಿಗೆ ಕಳುಹಿಸಲು ಏರ್ಪಾಡು ಮಾಡಲಾಗಿತ್ತು.

ಮಂಗಳೂರು : ಏಳು ತಿಂಗಳ ಗರ್ಭಿಣಿ ವೈದ್ಯೆ ಕೋವಿಡ್‌ಗೆ ಬಲಿ ...

 ಆದರೆ, ಮೈಸೂರಿಗೆ ಹೋಗುವಷ್ಟರಲ್ಲಿ ನಿಧನರಾಗಿದ್ದಾರೆ. ಮೃತರು ಪತ್ನಿ ಹಾಗೂ ಪುತ್ರನನ್ನು ಅಗಲಿದ್ದಾರೆ. ಅಂತ್ಯಕ್ರಿಯೆ ಸ್ವಗ್ರಾಮ ನಾರ್ಗೊನಹಳ್ಳಿಯಲ್ಲಿ ಸೋಮವಾರ ರಾತ್ರಿ ನಡೆಯಿತು.

ಸೂಚನೆ: ಕೊರೋನಾ ಮಹಾಮಾರಿ ಎಲ್ಲೆಡೆ ಹರಡುತ್ತಿದೆ. ಹೀಗಿರುವಾಗ ಎಲ್ಲರೂ ತಪ್ಪದೇ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ ಹಾಗೂ ಲಸಿಕೆ ಪಡೆಯಿರಿ ಎಂಬುವುದು ಏಷ್ಯಾನೆಟ್‌ ನ್ಯೂಸ್‌ ಕಳಕಳಿಯ ವಿನಂತಿ. ಒಗ್ಗಟ್ಟಿನಿಂದ ನಾವು ಈ ಕೊರೋನಾ ಸರಪಳಿ ಮುರಿಯೋಣ #ANCares #IndiaFightsCorona

Follow Us:
Download App:
  • android
  • ios