Asianet Suvarna News Asianet Suvarna News

ಕೆ.ಆರ್.ಎಸ್ ಪಕ್ಷದ ಅಭ್ಯರ್ಥಿಯಾಗಿ ಮಾ.ಸ. ಪ್ರವೀಣ್ ಸ್ಪರ್ಧೆ

  ಮೈಸೂರು- ಕೊಡಗು ಲೋಕಸಭಾ ಕ್ಷೇತ್ರದಿಂದ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ಅಭ್ಯರ್ಥಿಯಾಗಿ ಮಾ.ಸ. ಪ್ರವೀಣ್ ಅವರನ್ನು ಕಣಕ್ಕೆ ಇಳಿಸಲಾಗುತ್ತಿದೆ ಎಂದು ಪಕ್ಷದ ರಾಜ್ಯ ಉಪಾಧ್ಯಕ್ಷ ಎಚ್.ಎಸ್. ಲಿಂಗೇಗೌಡ ತಿಳಿಸಿದರು.

KRS party candidate Praveen competition snr
Author
First Published Mar 21, 2024, 10:50 AM IST

 ಮೈಸೂರು :  ಮೈಸೂರು- ಕೊಡಗು ಲೋಕಸಭಾ ಕ್ಷೇತ್ರದಿಂದ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ಅಭ್ಯರ್ಥಿಯಾಗಿ ಮಾ.ಸ. ಪ್ರವೀಣ್ ಅವರನ್ನು ಕಣಕ್ಕೆ ಇಳಿಸಲಾಗುತ್ತಿದೆ ಎಂದು ಪಕ್ಷದ ರಾಜ್ಯ ಉಪಾಧ್ಯಕ್ಷ ಎಚ್.ಎಸ್. ಲಿಂಗೇಗೌಡ ತಿಳಿಸಿದರು.

ರಾಜ್ಯದಲ್ಲಿ ಇರುವ ಏಕೈಕ ಪ್ರಾದೇಶಿಕ, ಪ್ರಾಮಾಣಿಕ ರಾಜಕೀಯ ಪಕ್ಷ ತಮ್ಮದಾಗಿದೆ. ಜನಸಾಮಾನ್ಯರ ಕಷ್ಟ ಕಾರ್ಪಣ್ಯದ ಅರಿವು ಇರುವ ಕಾರಣ ಸಾಮಾನ್ಯ ಜನರು ರಾಜಕಾರಣಕ್ಕೆ ಬರಬೇಕು, ಅವರನ್ನು ಮತದಾರರು ಆಯ್ಕೆ ಮಾಡಬೇಕು ಎಂಬುದು ಪಕ್ಷದ ಉದ್ದೇಶವಾಗಿದೆ. ಹೀಗಾಗಿ, ಸಂದರ್ಶನ ಮೂಲಕ ಮಾ.ಸ. ಪ್ರವೀಣ್ ಅವರನ್ನು ಆಯ್ಕೆ ಮಾಡಿದ್ದು, ಮತದಾರರು ಬೆಂಬಲಿಸಬೇಕು ಎಂದು ಅವರು ಬುಧವಾರ ಸುದ್ದಿಗೋಷ್ಠಿಯಲ್ಲಿ ಮನವಿ ಮಾಡಿದರು.

ಅಭ್ಯರ್ಥಿ ಮಾ.ಸ. ಪ್ರವೀಣ್, ಮುಖಂಡರಾದ ಶಿವಾರಿ ನಾಗರಾಜ್, ರಾಜೇಗೌಡ, ಲಕ್ಷ್ಮಮ್ಮ ಇದ್ದರು.

ಮತದಾರರೆಷ್ಟು..?

ಕೊಡಗು (ಮಾ.17): ಲೋಕಸಭಾ ಚುನಾವಣೆ ಘೋಷಣೆಯಾಗಿದ್ದು ಎರಡನೇ ಹಂತದಲ್ಲಿ ಮೈಸೂರು ಕೊಡಗು ಲೋಕಸಭಾ ಕ್ಷೇತ್ರದಲ್ಲಿ ಏಪ್ರಿಲ್ 26 ರಂದು ಮತದಾನ ನಡೆಯಲಿದೆ. ಆದರೆ ಕೊಡಗು ಜಿಲ್ಲೆಯಲ್ಲಿ ಇದೀಗ ವಿಶೇಷ ಹಬ್ಬ ಹರಿದಿನಗಳು ನಡೆಯುತ್ತಿವೆ. ಹಬ್ಬ, ಉತ್ಸವ, ಜಾತ್ರೆಗಳಲ್ಲಿ ಮನೆಗಳಲ್ಲಿ ಹೆಚ್ಚಿನ ಮದ್ಯ ಬಳಕೆ ಸಾಮಾನ್ಯ ವಾಡಿಕೆ. ಆದರೆ ಹೆಚ್ಚಿನ ಮದ್ಯ ಖರೀದಿಸಬೇಕೆಂದರೆ ಕಡ್ಡಾಯವಾಗಿ ಅನುಮತಿ ಪಡೆಯಬೇಕು. ಮದುವೆ ಹಾಗೂ ಇತರೆ ಸಮಾರಂಭಗಳಲ್ಲಿ ಮದ್ಯ ಸರಬರಾಜು ಮಾಡುವುದಕ್ಕೆ ಕಡ್ಡಾಯವಾಗಿ ಅಬಕಾರಿ ಇಲಾಖೆಯಿಂದ ಅನುಮತಿ ಪಡೆದಿರಬೇಕು. ಹೆಚ್ಚು ಜನ ಸೇರುವ ಯಾವುದೇ ಕಾರ್ಯಕ್ರಮವಾಗಲಿ ಚುನಾವಣಾಧಿಕಾರಿಗಳಿಗೆ ಮಾಹಿತಿ ನೀಡಬೇಕು. ಜನರು ಈ ನಿಯಮಗಳನ್ನು ಪಾಲಿಸುವ ಮೂಲಕ ಮುಕ್ತ ಮತ್ತು ನ್ಯಾಯಸಮ್ಮತ ಚುನಾವಣೆ ನಡೆಸಲು ಅನುವು ಮಾಡಿಕೊಡಬೇಕು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ಹೇಳಿದ್ದಾರೆ. 

ಕೊಡಗು: ಚುನಾವಣಾ ಪ್ರಚಾರ ಅಖಾಡಕ್ಕಿಳಿದ ಯದುವೀರ್ ಒಡೆಯರ್; ಜನಸಾಮಾನ್ಯರಂತೆ ಸರದಿ ನಿಂತು ಊಟ ಮಾಡಿದ ರಾಜ ವಂಶಸ್ಥ!

ಜೊತೆಗೆ ಸುಳ್ಳು ಸುದ್ದಿಗಳನ್ನು ಹರಡುವುದು, ಕೋಮುಸೌಹಾರ್ದತೆ ಹಾಳಾಗುವಂತಹ ಸಂದೇಶಗಳನ್ನು ಹರಡುವುದನ್ನು ನಿಷೇಧಿಸಲಾಗಿದೆ. ಇಂತಹ ಕೃತ್ಯಗಳು ಕಂಡು ಬಂದರೆ ಅವರ ವಿರುದ್ಧ ಪ್ರಕರಣ ದಾಖಲಿಸಲಾಗುವುದು ಎಂದಿದ್ದಾರೆ. 

ಇನ್ನು ಜಿಲ್ಲೆಯಲ್ಲಿ ಜಮ್ಮಾ ಹಿಡುವಳಿದಾರರ ಬಳಿ ಬಂದೂಕುಗಳಿದ್ದು ಕಳೆದ 5 ವರ್ಷಗಳಲ್ಲಿ ಯಾವುದಾದರೂ ಕ್ರಿಮಿನಲ್ ಪ್ರಕರಣದಲ್ಲಿ ಭಾಗಿಯಾಗಿರುವವರು ಕಡ್ಡಾಯವಾಗಿ ಕೋವಿಗಳನ್ನು ಠೇವಣಿ ಇಡಬೇಕು ಎಂದು ತಿಳಿಸಿದರು. ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ಮಾತನಾಡಿ, ಭಾರತ ಚುನಾವಣಾ ಆಯೋಗವು ‘ಸಿ ವಿಜಿಲ್’ ಎಂಬ ಮೊಬೈಲ್ ಆ್ಯಪ್ನ್ನು ಅಭಿವೃದ್ಧಿಪಡಿಸಿದ್ದು, ಚುನಾವಣೆಯಲ್ಲಿ ಮತದಾರರಿಗೆ ಅಕ್ರಮವಾಗಿ ಹಣ, ಗೃಹ ಬಳಕೆ ಸಾಮಗ್ರಿಗಳನ್ನು, ಮದ್ಯವನ್ನು ಹಂಚಿಕೆ ಮಾಡುವ ಬಗ್ಗೆ ಹಾಗೂ ಯಾವುದೇ ಮಾದರಿ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣಗಳ ಬಗ್ಗೆ ಆ್ಯಪ್ನಲ್ಲಿ ವಿಡಿಯೊ ಮತ್ತು ಚಿತ್ರಗಳ ಮೂಲಕ ದೂರು ಸಲ್ಲಿಸಬಹುದು ಎಂದರು. 

ಟೀಕೆ, ಸವಾಲುಗಳನ್ನು ಎದುರಿಸಿಯೇ ರಾಜಕಾರಣ ಮಾಡುವೆ: ಬಿಜೆಪಿ ಅಭ್ಯರ್ಥಿ ಯದುವೀರ್

ಕೊಡಗು ಜಿಲ್ಲಾ ವ್ಯಾಪ್ತಿಯಲ್ಲಿ 2 ವಿಧಾನಸಭಾ ಕ್ಷೇತ್ರಗಳು ಸೇರಲಿದ್ದು, ಮಡಿಕೇರಿ ಕ್ಷೇತ್ರದಲ್ಲಿ 2,36,562 ಹಾಗೂ ವಿರಾಜಪೇಟೆ ಕ್ಷೇತ್ರದಲ್ಲಿ 2,29,592 ಮತದಾರರು ಇದ್ದಾರೆ. ಜಿಲ್ಲೆಯಲ್ಲಿ ಒಟ್ಟು ಪುರುಷ ಮತದಾರರ ಸಂಖ್ಯೆ 2,28,478, ಮಹಿಳಾ ಮತದಾರರ ಸಂಖ್ಯೆ 2,37,660 ಹಾಗೂ ತೃತೀಯ ಲಿಂಗಿ ಮತದಾರರ ಸಂಖ್ಯೆ 16 ಆಗಿದ್ದು, ಒಟ್ಟು 4,66,154 ಮತದಾರರು ಇದ್ದಾರೆ. ಮತದಾರರ ಪಟ್ಟಿಗೆ ಸೇರ್ಪಡೆ ಮಾಡಿಕೊಳ್ಳುವ ಅರ್ಹರು ಈಗಲೂ ಹೆಸರು ಸೇರ್ಪಡೆ ಮಾಡಿಕೊಳ್ಳಬಹುದು ಎಂದರು. ಜಿಲ್ಲೆಯಲ್ಲಿ ಒಟ್ಟು 1,357 ಸೇವಾ ಮತದಾರರು, 4,411 ಅಂಗವಿಕಲ ಮತದಾರರು ಹಾಗೂ 85 ವರ್ಷ ದಾಟಿದ 5,686 ಮತದಾರರು ಇದ್ದಾರೆ. 85 ವರ್ಷ ದಾಟಿದವರು ಬಯಸಿದರೆ ಮನೆಯಲ್ಲೆ ಮತದಾನ ಮಾಡುವ ಅವಕಾಶವೂ ಇದೆ ಎಂದು ಹೇಳಿದರು.

Follow Us:
Download App:
  • android
  • ios