ಕಳೆದ ಕೆಲ ದಿನಗಳಿಂದ ಕಾವೇರಿ ಜಲಾನಯನ ಪ್ರದೇಶದಲ್ಲಿ ಮುಂಗಾರು ಚುರುಕು ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲೂಕಿನಲ್ಲಿರುವ ಕೆಆರ್‌ಎಸ್‌ ಜಲಾಶಯದ ನೀರಿನ ಮಟ್ಟ100 ಅಡಿ 

ಮಂಡ್ಯ (ಜು.21): ಕಳೆದ ಕೆಲ ದಿನಗಳಿಂದ ಕಾವೇರಿ ಜಲಾನಯನ ಪ್ರದೇಶದಲ್ಲಿ ಮುಂಗಾರು ಚುರುಕುಗೊಂಡಿರುವುದರಿಂದ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲೂಕಿನಲ್ಲಿರುವ ಕೆಆರ್‌ಎಸ್‌ ಜಲಾಶಯದ ನೀರಿನ ಮಟ್ಟ100 ಅಡಿ ತಲುಪಿದೆ.

Add Asianetnews Kannada as a Preferred SourcegooglePreferred

 ಕಳೆದ ಕೆಲ ದಿನಗಳ ಮಳೆಯಿಂದಾಗಿ ಜಲಾಶಯಕ್ಕೆ 12 ಸಾವಿರಕ್ಕೂ ಹೆಚ್ಚು ಕ್ಯೂಸೆಕ್ ನೀರು ಹರಿದು ಬರುತ್ತಿದೆ. 

'KRS ಅಣೆಕಟ್ಟೆಯಲ್ಲಿ ನೀರಿನ ಸೋರಿಕೆ ಆರಂಭ'

124.80 ಅಡಿಗೆ ಗರಿಷ್ಠ ಮಟ್ಟ ಹೊಂದಿರುವ ಜಲಾಶಯದಲ್ಲಿ ಮಂಗಳವಾರ ಸಂಜೆ 6 ಗಂಟೆ ವೇಳೆ 100.05 ಅಡಿ ನೀರು ಸಂಗ್ರಹವಾಗಿತ್ತು. 

ಇನ್ನು ಕೆಆರ್‌ಎಸ್‌ ಬಿರುಕು ಬಿಟ್ಟಿದೆ ಎನ್ನುವ ವಿಚಾರವೂ ಇತ್ತೀಚೆಗೆ ಸಾಕಷ್ಟು ಸದ್ದಾಗುತ್ತಿದ್ದು,ಈ ಬಗ್ಗೆ ವಿಶೇಷ ಪರಿಶೀಲನೆಯೂ ನಡೆಯುತ್ತಿದೆ.