Asianet Suvarna News Asianet Suvarna News

ಸ್ವಾಮೀಜಿ ಪ್ರಯಾಣಿಸುತ್ತಿದ್ದ ಕಾರಿಗೆ KSRTC ಬಸ್ ಡಿಕ್ಕಿ : ಕಾರು ಜಖಂ

ಪ್ರಯಾಣಿಸುತ್ತಿದ್ದ ಕಾರಿಗೆ ಕೆಎಸ್‌ಆರ್‌ಟಿಸಿ ಬಸ್ ಹಿಂದಿನಿಂದ ಡಿಕ್ಕಿಯಾಗಿದ್ದು  ಬಸ್ ಸಂಪೂರ್ಣ ಜಖಂ ಆಗಿದೆ.

KSRTC bus Collied into Swamiji Car in Davanagere
Author
Bengaluru, First Published Dec 27, 2019, 11:58 AM IST

ದಾವಣಗೆರೆ [ಡಿ.27] : ಶ್ರೀ ಮಹೇಶ ಶಿವಾಚಾರ್ಯ ಸ್ವಾಮೀಜಿ ಪ್ರಯಾಣಿಸುತ್ತಿದ್ದ ಇನೋವಾ ಕಾರಿಗೆ KSRTC ಬಸ್ ಡಿಕ್ಕಿಯಾಗಿ ಅಪಘಾತವಾಗಿದೆ. 

ದಾವಣಗೆರೆಯ ಬಾತಿ ಕೆರೆ ಸಮೀಪದಲ್ಲಿ ಅಪಘಾತವಾಗಿದ್ದು, ಅದೃಷ್ಟವಶಾತ್ ಯಾವುದೇ ರೀತಿ ಪ್ರಾಣಹಾನಿ ಸಂಭವಿಸಿಲ್ಲ. ಆದರೆ ಕಾರಿನ ಹಿಂಬಾಗ ಸಂಪೂರ್ಣ ಜಖಂ ಆಗಿದೆ. 

ಬಳ್ಳಾರಿ ಜಿಲ್ಲೆ ಕೊಟ್ಟೂರಿನ ನುಗ್ಗೆಹಳ್ಳಿ ಅಯ್ಯನಹಳ್ಳಿ ಹಿರೇಮಠದ ಸ್ವಾಮೀಜಿಗಳಾದ ಮಹೇಶ ಸ್ವಾಮೀಜಿಗಳು ಬೆಂಗಳೂರಿನಿಂದ ಹುಬ್ಬಳ್ಳಿ ಕಡೆಗೆ ತೆರಳುತ್ತಿದ್ದ ವೇಳೆ ಅಪಘಾತವಾಗಿದೆ. 

ಹೆಚ್ಚಿನ ಜಿಲ್ಲಾ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

ವೇಗವಾಗಿ ಬಂದ ಬಸ್ ನಿಯಂತ್ರಣ ಸಿಗದೇ ಸ್ವಾಮೀಜಿ ಇದ್ದ ಕಾರಿಗೆ ಡಿಕ್ಕಿಯಾಗಿದೆ. 

ತಪೋವನದಲ್ಲಿರುವ ಶ್ರೀ ಶೈಲ ಜಗದ್ಗುರುಗಳ ದರ್ಶನಕ್ಕೆ ಹೊರಟಿದ್ದ ವೇಳೆ  ಹಿಂದಿನಿಂದ ಕಾರಿಗೆ ಬಸ್ ಡಿಕ್ಕಿಯಾಗಿದೆ. ಈ ಸಂಬಂಧ ದಾವಣಗೆರೆ ಟ್ರಾಫಿಕ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

Follow Us:
Download App:
  • android
  • ios