Asianet Suvarna News Asianet Suvarna News

ಅಪಘಾತ ಪ್ರಕರಣ: ಶಾಸಕ ಸಿ.ಟಿ. ರವಿ ಕಾರು ಚಾಲಕ ಅರೆಸ್ಟ್

ಶಾಸಕ ಸಿ ಟಿ ರವಿ ಕಾರು ಡಿಕ್ಕಿ ಪ್ರಕರಣದಲ್ಲಿ ಚಾಲಕನನ್ನು ಕುಣಿಗಲ್ ಪೊಲೀಸರು ಬಂಧಿಸಿದ್ದಾರೆ. ತುಮಕೂರು ಜಿಲ್ಲೆಯ ಕುಣಿಗಲ್ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 75 ಊರ್ಕೇನಹಳ್ಳಿ ಬಳಿ ನಡೆದಿದ್ದ ಕಾರು ಅಪಘಾತ.

Kunigal police arrests BJP MLA CT Ravi Car Driver In accident Case
Author
Bengaluru, First Published Feb 19, 2019, 6:13 PM IST

ತುಮಕೂರು, [ಫೆ.19]: ಚಿಕ್ಕಮಗಳೂರು ಬಿಜೆಪಿ ಶಾಸಕ ಸಿ.ಟಿ.ರವಿ ಕಾರು ಡಿಕ್ಕಿ ಪ್ರಕರಣದಲ್ಲಿ ಚಾಲಕನನ್ನು ಪೊಲೀಸರು ಬಂಧಿಸಿದ್ದಾರೆ.

 ಸಿ. ಟಿ. ರವಿ ಕಾರು ಚಾಲಕ ರುದ್ರೇಗೌಡ ಅಲಿಯಾಸ್ ಆಕಾಶ್ ನನ್ನು ಇಂದು [ಮಂಗಳವಾರ] ಮಧ್ಯಾಹ್ನ ಕುಣಿಗಲ್ ಪೊಲೀಸರು ಬಂಧಿಸಿ ವಿಚಾರಣೆ ನಡೆಸಿದ್ದಾರೆ. ಸೋಮವಾರ ತಡರಾತ್ರಿ ತುಮಕೂರು ಜಿಲ್ಲೆಯ ಕುಣಿಗಲ್ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 75 ಊರ್ಕೇನಹಳ್ಳಿ ಬಳಿ ನಿಂತಿದ್ದ ಕಾರಿಗೆ ಸಿ.ಟಿ ರವಿ ಕಾರು ಡಿಕ್ಕಿ ಹೊಡೆದಿದೆ.

ಅಪಘಾತ ದುರದೃಷ್ಟಕರ, ನಾನು ಮಲಗಿದ್ದೆ: ಸಿ.ಟಿ. ರವಿ ಪ್ರತಿಕ್ರಿಯೆ

ಈ ಘಟನೆಯಲ್ಲಿ ಕನಕಪುರದ ಶಶಿಕುಮಾರ್ ಹಾಗೂ ಸುನೀಲಕುಮಾರ ಅವರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದು, ಪುನೀತಗೌಡ ಎಂಬುವರು ಸೇರಿದಂತೆ ಮೂರು ಜನ ಗಂಭೀರವಾಗಿ ಗಾಯಗೊಂಡಿದ್ದಾರೆ.

ದೂರಿನಲ್ಲಿ ಸಿ.ಟಿ. ರವಿ ಹೆಸರಿಲ್ಲ; ಚಾಲಕನ ವಿರುದ್ಧ ಮಾತ್ರ FIR!

ಸ್ಥಳಕ್ಕೆ ಕುಣಿಗಲ್ ಪೊಲೀಸರು ಆಗಮಿಸಿ ಜಾಗವನ್ನು ಮಹಜರು ಮಾಡಿದ್ದು, ಕಾರು ಚಾಲಕ ರುದ್ರೇಗೌಡ ಅಲಿಯಾಸ್ ಆಕಾಶ್ ವಿರುದ್ಧ ಐಪಿಸಿ ಸೆಕ್ಷನ್ 279. 337. 304[ಆ] ಅಡಿ ದೂರು ದಾಖಲಾಗಿತ್ತು.  

ಆದ್ರೆ ಅಪಘಾತಕ್ಕೆ ಸಂಬಂಧಿಸಿಂತೆ ಶಾಸಕ ಸಿ.ಟಿ. ರವಿ ವಿರುದ್ಧ ದೂರು ದಾಖಲಾಗಿಲ್ಲ. ಸಿ.ಟಿ.ರವಿ ಅವರು ಕೆಲಸದ ಮೇಲೆ ಚೆನ್ನೈಗೆ ತೆರಳುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ.
 

Follow Us:
Download App:
  • android
  • ios