ಪ್ರೀತಿಯ ಅಕ್ಕಾ ನನಗೆ ಹೇಳಿದ ಆ ಮಾತುಗಳನ್ನು ಕನ್ನಡಿ ಮುಂದೆ ನಿಂತು ನೀವೆ ಹೇಳಿಕೊಳ್ಳಿ ಎಂದು ಕುಸುಮಾ ಶೋಭಾ ಕರಂದ್ಲಾಜೆ ಮಾತಿಗೆ ಪ್ರತಿಕ್ರಿಯಿಸಿದ್ದಾರೆ

ಬೆಂಗಳೂರು (ಅ.12): ರಾಜ್ಯದಲ್ಲಿ ಉಪ ಚುನಾವಣೆ ರಂಗೆರುತ್ತಿದೆ. ಇದೇ ಸಂದರ್ಭದಲ್ಲಿ ಪಕ್ಷಗಳ ನಡುವೆ ಪರಸ್ಪರ ವಾಕ್ಸಮರಗಳು ಜೋರಾಗುತ್ತಿದೆ. ದಿವಂಗತ ಐಎಎಸ್ ಅಧಿಕಾರಿ ಡಿಕೆ ರವಿ ಪತ್ನಿ ಕುಸುಮಾ ಕಾಂಗ್ರೆಸ್ ಅಭ್ಯರ್ಥಿಯಾಗಿ ಆರ್‌ ಆರ್‌ ನಗರದಿಂದ ಸ್ಪರ್ಧೆ ಮಾಡುತ್ತಿದ್ದಾರೆ. 

Add Asianetnews Kannada as a Preferred SourcegooglePreferred

ಡಿಕೆ ರವಿ ಹೆಸರು ಉಪಯೋಗಿಸಿಕೊಳ್ಳುವ ಬಗ್ಗೆ ಶೋಭಾ ಕರಂದ್ಲಾಜೆ ನೀಡಿದ್ದ ಹೇಳಿಕೆಗೆ ಸಾಮಾಜಿಕ ಜಾಲತಾಣದಲ್ಲಿ ಕುಸುಮಾ ಟಾಂಗ್ ಕೊಟ್ಟಿದ್ದಾರೆ. ತಮ್ಮ ಫೇಸ್ ಬುಕ್ ಖಾತೆಯಲ್ಲಿ ಹೀಗೆ ಬರೆದುಕೊಂಡಿದ್ದಾರೆ. 

ಡಿ.ಕೆ. ರವಿ ಹೆಸರು ಚರ್ಚೆ ಮಾಡಿದ್ರೆ ಒಳ್ಳೆಯದಾಗಲ್ಲ : ಎಚ್ಚರಿಕೆ .

ಪ್ರೀತಿಯ ಅಕ್ಕ

ನನ್ನ ಗಂಡನ ಹೆಸರಿನಲ್ಲಿ ರಾಜಕೀಯ ಮಾಡಿದವರು ಯಾರು.. ಮಾಡುತ್ತಿರುವವರು ಯಾರು ಎನ್ನುವುದನ್ನು ಇಡೀ ದೇಶವೇ ನೋಡಿದೆ ನೋಡುತ್ತಿದೆ. ಈ ಸಂದರ್ಭದಲ್ಲಿ ನನಗೆ ಅಕ್ಕ ಮಹಾದೇವಿಯವರ ನೊಂದವರ ನೋವ ನೋಯದವರೆತ್ತ ಬಲ್ಲರೋ ? ಎಂಬ ವಚನ ನೆನಪಿಗೆ ಬರುತಿದೆ.

ರವಿ ಅವರ ಹೆಸರನ್ನು ಬಳಸಿಕೊಂಡವರಿಗೆ ಒಳ್ಳೆಯದಾಗುವುದಿಲ್ಲ ಎಂದಿದ್ದೀರಿ. 

 ಇದು ನಿಮಗೆ ನೀವೆ ಹೇಳಿದಂತೆ ಇದೆ. ಕನ್ನಡಿ ಮುಂದೆ ನಿಂತು ಇನ್ನೊಮ್ಮೆ ಈ ಹೇಳಿಕೆ ಕೊಟ್ಟು ನೋಡಿ. ಸತ್ಯ ಮನದಟ್ಟಾಗುತ್ತದೆ ಎಂದು ಬರೆದುಕೊಂಡಿದ್ದಾರೆ.