Asianet Suvarna News Asianet Suvarna News

ಹಾಸನ: ರೈಲ್ವೆ ಹಳಿಯ ಮೇಲೆ ಮಣ್ಣು ಕುಸಿತ, ಬೆಂಗಳೂರು- ಮಂಗಳೂರು ರೈಲು ಸಂಚಾರ ಬಂದ್..!

ಬೆಂಗಳೂರು-ಹಾಸನ-ಮಂಗಳೂರು ಮಾರ್ಗ ಮಧ್ಯೆ ಸಂಚರಿಸುವ ಎಲ್ಲಾ ರೈಲುಗಳ ಸಂಚಾರವನ್ನ ಬಂದ್ ಮಾಡಲಾಗಿದೆ. ಸ್ಥಳಕ್ಕೆ ರೈಲ್ವೆ ಇಲಾಖೆ ಸಿಬ್ಬಂದಿ ದೌಡಾಯಿಸಿದ್ದಾರೆ. ರೈಲ್ವೆ ಇಲಾಖೆ ಅಧಿಕಾರಿಗಳು ರೈಲು ಮಾರ್ಗ ಬದಲಿಸಿದ್ದಾರೆ. 

landslide on railway track due to heavy rain in hassan grg
Author
First Published Jul 26, 2024, 10:53 PM IST | Last Updated Jul 27, 2024, 10:06 AM IST

ಹಾಸನ(ಜು.26):  ಮಲೆನಾಡು ‌ಭಾಗದಲ್ಲಿ ವರುಣನ ಆರ್ಭಟ ಮುಂದುವರಿದ ಹಿನ್ನಲೆಯಲ್ಲಿ ರೈಲ್ವೆ ಹಳಿಯ ಮೇಲೆ ಮಣ್ಣು ಕುಸಿತವಾದ ಘಟನೆ ಜಿಲ್ಲೆಯ ಸಕಲೇಶಪುರ ತಾಲ್ಲೂಕಿನ, ಕಡಗರವಳ್ಳಿ-ಯಡಕುಮರಿ ಮಧ್ಯೆ ಇಂದು(ಶುಕ್ರವಾರ) ನಡೆದಿದೆ. 

ರೈಲ್ವೆ ಹಳಿಯ ಮೇಲೆ ಮಣ್ಣು ಕುಸಿದಿದ್ದರಿಂದ ಈ ಮಾರ್ಗದ ಎಲ್ಲಾ ರೈಲುಗಳ‌ ಸಂಚಾರ ಬಂದ್ ಮಾಡಲಾಗಿದೆ. ಕಿಲೋಮೀಟರ್ ನಂಬರ್ 63 ರಲ್ಲಿ ರೈಲ್ವೆ ಹಳಿಯ ಮೇಲೆ‌ ಮಣ್ಣು ಕುಸಿದಿದೆ. 

ಚಿಕ್ಕಮಗಳೂರು: ಭಾರೀ ಮಳೆಗೆ ಧರೆಗುರುಳಿದ ಬೃಹತ್‌ ಮರ, ಪವಾಡ ಸದೃಶ ರೀತಿಯಲ್ಲಿ ಚಾಲಕರು ಪಾರು..!

ಬೆಂಗಳೂರು-ಹಾಸನ-ಮಂಗಳೂರು ಮಾರ್ಗ ಮಧ್ಯೆ ಸಂಚರಿಸುವ ಎಲ್ಲಾ ರೈಲುಗಳ ಸಂಚಾರವನ್ನ ಬಂದ್ ಮಾಡಲಾಗಿದೆ. ಸ್ಥಳಕ್ಕೆ ರೈಲ್ವೆ ಇಲಾಖೆ ಸಿಬ್ಬಂದಿ ದೌಡಾಯಿಸಿದ್ದಾರೆ. ರೈಲ್ವೆ ಇಲಾಖೆ ಅಧಿಕಾರಿಗಳು ರೈಲು ಮಾರ್ಗ ಬದಲಿಸಿದ್ದಾರೆ. 

Latest Videos
Follow Us:
Download App:
  • android
  • ios