ತಾಲೂಕಿನ ಹೊರಳವಾಡಿ ಗ್ರಾಪಂ ಮಾಜಿ ಅಧ್ಯಕ್ಷೆ ಜ್ಯೋತಿ ನಂದೀಶ್ ಅವರು ತಾಲೂಕು ಬಿಜೆಪಿ ಅಧ್ಯಕ್ಷ ಪಿ. ಮಹೇಶ್ ನೇತೃತ್ವದಲ್ಲಿ ಕಾಂಗ್ರೆಸ್ ತೊರೆದು ತಮ್ಮ ಬೆಂಬಲಿಗರೊಂದಿಗೆ ಬಿಜೆಪಿಗೆ ಸೇರ್ಪಡೆಯಾದರು.
ನಂಜನಗೂಡು: ತಾಲೂಕಿನ ಹೊರಳವಾಡಿ ಗ್ರಾಪಂ ಮಾಜಿ ಅಧ್ಯಕ್ಷೆ ಜ್ಯೋತಿ ನಂದೀಶ್ ಅವರು ತಾಲೂಕು ಬಿಜೆಪಿ ಅಧ್ಯಕ್ಷ ಪಿ. ಮಹೇಶ್ ನೇತೃತ್ವದಲ್ಲಿ ಕಾಂಗ್ರೆಸ್ ತೊರೆದು ತಮ್ಮ ಬೆಂಬಲಿಗರೊಂದಿಗೆ ಬಿಜೆಪಿಗೆ ಸೇರ್ಪಡೆಯಾದರು. ಜ್ಯೋತಿನಂದೀಶ್ ಮಾತನಾಡಿ, ಶಾಸಕ ಬಿ. ಹರ್ಷವರ್ಧನ್ ಅವರ ಅಭಿವೃದ್ದಿ ಕೆಲಸಗಳನ್ನು ಮೆಚ್ಚಿ ಅವರ ಕೈ ಬಲಪಡಿಸುವ ಸಲುವಾಗಿ ಬಿಜೆಪಿ ಸೇರ್ಪಡೆಗೊಂಡಿರುವುದಾಗಿ ಅವರು ತಿಳಿಸಿದರು. ಗುರು, ಅನುಷಾ, ಕಾಳಪ್ಪ, ನೀಲಮ್ಮ, ಮಹದೇವಮ್ಮ, ಅಶ್ವಿನಿ, ರಾಜಶೇಖರಪ್ಪ, ದೇವಮಣಿಗುರುಸ್ವಾಮಿ, ಎಚ್.ಜಿ. ನಂಜಯ್ಯ, ರಾಜೇಶ್, ಗಿರಿಜಾಂಬ, ಸೇರಿದಂತೆ ಸುಮಾರು 50ಕ್ಕೂ ಹೆಚ್ಚು ಮಂದಿ ಬಿಜೆಪಿಗೆ ಸೇರ್ಪಡೆಗೊಂಡರು. ತಾಲೂಕು ಬಿಜೆಪಿ ಅಧ್ಯಕ್ಷ ಪಿ. ಮಹೇಶ್, ಜಗದೀಶ್, ಮಂಜು, ಮಹದೇವಸ್ವಾಮಿ ಇದ್ದರು.
ಪಕ್ಷೇತರ ಅಭ್ಯರ್ಥಿ ಬಿಜೆಪಿ ಸೇರ್ಪಡೆ
ತುಮಕೂರು : ತುಮಕೂರು ನಗರದ ಪಕ್ಷೇತರ ಅಭ್ಯರ್ಥಿಯಾಗಿದ್ದ ನರಸೇಗೌಡ ಚುನಾವಣಾ ಕಣದಿಂದ ಹಿಂದೆ ಸರಿದು ಅಪಾರ ಬೆಂಬಲಿಗರೊಂದಿಗೆ ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡರು.
ಪಕ್ಷ ಸೇರ್ಪಡೆ ಬಳಿಕ ಮಾತನಾಡಿದ ನರಸೇಗೌಡ ಅವರು, ಪಕ್ಷ ಸಿದ್ಧಾಂತ ಮತ್ತು ಪ್ರಧಾನ ಮಂತ್ರಿ ನರೇಂದ್ರ ಮೋದಿ ರವರ ಆಡಳಿತ ಮೆಚ್ಚಿ ಹಾಗೂ ತುಮಕೂರು ನಗರದ ಬಿಜೆಪಿ ಅಭ್ಯರ್ಥಿಯಾದ ಜಿ.ಬಿ.ಜ್ಯೋತಿಗಣೇಶ್ರವರ ಸರಳತೆ-ಸಜ್ಜನಿಕೆ, ಆಡಳಿತ ವೈಖರಿಗೆ ಮೆಚ್ಚಿ ನಾನು ಇಂದು ಪಕ್ಷೇತರ ಅಭ್ಯರ್ಥಿಯಿಂದ ನಿವೃತ್ತಿಹೊಂದಿ ಬಿಜೆಪಿ ಪಕ್ಷಕ್ಕೆ ನನ್ನ ಬೆಂಬಲಿಗರೊಂದಿಗೆ ಸೇರ್ಪಡೆಗೊಂಡಿರುತ್ತೇನೆ. ಬಿಜೆಪಿ ಗೆಲುವಿಗೆ ನಾವೆಲ್ಲರೂ ಶ್ರಮಿಸೋಣ ಎಂದರು.
ಪತ್ರಿಕಾಗೋಷ್ಠಿಯಲ್ಲಿ ಸಂಸದರಾದ ಜಿ.ಎಸ್.ಬಸವರಾಜ್, ಜಿಲ್ಲಾಧ್ಯಕ್ಷರಾದ ಎಚ್.ಎಸ್.ರವಿಶಂಕರ್ ಹೆಬ್ಬಾಕ, ವಿಧಾನ ಪರಿಷತ್ ಸದಸ್ಯ ಚಿದಾನಂದಗೌಡ, ರಾಜ್ಯ ರೈತ ಮೋರ್ಚಾ ಪ್ರಧಾನ ಕಾರ್ಯದರ್ಶಿ ಎಸ್.ಶಿವಪ್ರಸಾದ್, ಮಾಧ್ಯಮ ಪ್ರಮುಖ್ ಟಿ.ಆರ್.ಸದಾಶಿವಯ್ಯ, ಸಹ ಪ್ರಮುಖ್ ಜೆ.ಜಗದೀಶ್, ತುಮಕೂರು ನಗರ ಮಂಡಲ ಕಾರ್ಯದರ್ಶಿ ರಾಧ ಗಂಗಾಧರ್ ಹಾಗೂ ಪ್ರಮುಖರು ಭಾಗವಹಿಸಿದ್ದರು.
7 ಬಾರಿ ಬಂದಾಗ 3 ಸಾವಿರ ಜನರೊಂದಿಗೆ ಭೇಟಿ
ನವದೆಹಲಿ (ಮೇ.9): ವಿಧಾನಸಭಾ ಚುನಾವಣೆಯ ಪ್ರಚಾರದ ಭಾಗವಾಗಿ ಕಳೆದ 15 ದಿನಗಳಲ್ಲಿ 7 ಬಾರಿ ಕರ್ನಾಟಕಕ್ಕೆ ಭೇಟಿ ನೀಡಿ ಹಲವು ರೋಡ್ ಶೋ, ಸಾರ್ವಜನಿಕ ರಾರಯಲಿಗಳಲ್ಲಿ ಭಾಗವಹಿಸಿದ್ದ ಪ್ರಧಾನಿ ನರೇಂದ್ರ ಮೋದಿ, ಈ ಬಿಡುವಿಲ್ಲದ ಕಾರ್ಯಕ್ರಮದ ನಡುವೆಯೂ ತೆರೆಮರೆಯಲ್ಲೇ 3000ಕ್ಕೂ ಹೆಚ್ಚು ಜನರನ್ನು ಭೇಟಿ ಮಾಡಿದ್ದಾರೆ. ಹೀಗೆ ಮೋದಿ ಭೇಟಿ ಮಾಡಿದವರಲ್ಲಿ ಪಕ್ಷದ ಹಿರಿಯ-ಕಿರಿಯ ಕಾರ್ಯಕರ್ತರು, ವಿವಿಧ ಕ್ಷೇತ್ರಗಳ ಸಾಧಕರು ಮತ್ತು ಸಮಾಜದ ಗಣ್ಯ ವ್ಯಕ್ತಿಗಳು ಸೇರಿದ್ದಾರೆ ಎಂದು ಪಕ್ಷದ ಮೂಲಗಳು ಹೇಳಿವೆ.
ಪ್ರಧಾನಿ ನರೇಂದ್ರ ಮೋದಿ(Narendra Modi) ಕರ್ನಾಟಕ(PM Modi arrived karnataka)ದಲ್ಲಿ ಏ.27ರಂದು ಪಕ್ಷದ 50 ಲಕ್ಷ ಕಾರ್ಯಕರ್ತರೊಂದಿಗೆ ವರ್ಚುವಲ್ ಆಗಿ ಸಂವಾದ ನಡೆಸಿದ್ದರು. ಅದನ್ನು ಹೊರತುಪಡಿಸಿ ರಾಜ್ಯದ ವಿವಿಧ ಭಾಗಳಲ್ಲಿ 18 ರಾರಯಲಿಗಳಲ್ಲಿ ಭಾಗಿಯಾಗಿದ್ದರು. ಜತೆಗೆ ಬೆಂಗಳೂರಲ್ಲಿ 3, ಮೈಸೂರು, ಕಲಬುರಗಿ ಮತ್ತು ತುಮಕೂರಿನಲ್ಲಿ ತಲಾ ಒಂದೊಂದು ರೋಡ್ ಶೋ ಕೂಡಾ ನಡೆಸಿದ್ದರು.
ರಣಕಣದಲ್ಲಿ ಮೂರು ಪಕ್ಷಗಳ ದಿಗ್ಗಜರ ಕ್ಯಾಂಪೇನ್ ಹವಾ: ಒಂದೇ ವಾರದಲ್ಲಿ ಇಡೀ ಕುರುಕ್ಷೇತ್ರವನ್ನೇ ಆವರಿಸಿದ ಮೋದಿ
ಆದರೆ ಇಂಥ ಬಿಡುವಿಲ್ಲದ ಕಾರ್ಯಕ್ರಮಗಳ ನಡುವೆಯೂ ಪ್ರತಿ ಬಾರಿ ಕರ್ನಾಟಕಕ್ಕೆ ಆಗಮಿಸಿದ ವೇಳೆ ಮತ್ತು ಕರ್ನಾಟಕದಿಂದ ನವದೆಹಲಿಗೆ ಮರಳುವ ವೇಳೆ ಹೆಲಿಪ್ಯಾಡ್/ವಿಮಾನ ನಿಲ್ದಾಣದಲ್ಲಿಯೇ ತಮ್ಮ ಸ್ವಾಗತ ಹಾಗೂ ಬೀಳ್ಕೊಡುಗೆಗೆ ಕಾದಿದ್ದ 3000 ಜನರನ್ನು ಮೋದಿ ಭೇಟಿ ಮಾಡಿದ್ದಾರೆ. ಇಂಥ ಭೇಟಿಗಾಗಿ ಪಕ್ಷಕ್ಕಾಗಿ ತೆರೆಮರೆಯಲ್ಲೇ ಶ್ರಮಿಸುತ್ತಿರುವ ಹಿರಿ-ಕಿರಿಯ ಬಿಜೆಪಿ ಕಾರ್ಯಕತರು, ಪದ್ಮ ಪ್ರಶಸ್ತಿ ಪುರಸ್ಕೃತರು ಮತ್ತು ಸಮಾಜದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದವರನ್ನು ಆಯ್ಕೆ ಮಾಡಲಾಗಿತ್ತು.
