ಮೈಸೂರು ಜಿಲ್ಲೆಯ ಟಿ.ನರಸೀಪುರ ತಾಲೂಕಿನ ನೆರೆಗ್ಯಾತನಹಳ್ಳಿಯಲ್ಲಿ ಬೋನಿಗೆ ಬಿದ್ದ ಚಿರತೆ, ಚಿರತೆಯನ್ನು ಸ್ಥಳದಲ್ಲೇ ಕೊಲ್ಲುವಂತೆ ಗ್ರಾಮಸ್ಥರಿಂದ ಪ್ರತಿಭಟನೆ. 

ಟಿ.ನರಸೀಪುರ(ಜ.27): ಮೈಸೂರು ಜಿಲ್ಲೆ ಟಿ.ನರಸೀಪುರ ತಾಲೂಕಿನ ಸೋಸಲೆ ಹೋಬಳಿಯಲ್ಲಿ ನಾಲ್ವರ ಪ್ರಾಣಹಾನಿಗೆ ಕಾರಣವಾಗಿದ್ದ ನರಭಕ್ಷಕ ಚಿರತೆಯನ್ನು ಸೆರೆ ಹಿಡಿಯುವಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ಯಶಸ್ವಿಯಾಗಿದ್ದಾರೆ. ಗುರುವಾರ ಮುಂಜಾನೆ ನೆರೆಗ್ಯಾತನಹಳ್ಳಿ ಗ್ರಾಮದ ಸತ್ಯಪ್ಪ ಅವರ ತೋಟದ ಬಳಿ ಇಟ್ಟಿದ್ದ ಬೋನಿಗೆ 6 ವರ್ಷದ ಗಂಡು ಚಿರತೆ ಸೆರೆ ಸಿಕ್ಕಿದೆ. ಅರಣ್ಯ ಅಧಿಕಾರಿಗಳು ಚಿರತೆಯನ್ನು ಬೇರೆಡೆ ಸಾಗಿಸಲು ಪ್ರಯತ್ನ ಪಟ್ಟಾಗ ಗ್ರಾಮಸ್ಥರು ತಡೆದು ಚಿರತೆಯನ್ನು ಸ್ಥಳದಲ್ಲೇ ಕೊಲ್ಲುವಂತೆ ಒತ್ತಾಯಿಸಿದರು. ಚಿರತೆಯನ್ನು ಕೊಂಡೊಯ್ಯುತ್ತಿದ್ದ ವಾಹನವನ್ನು ಸುತ್ತುವರಿದು ಅಡ್ಡ ಮಲಗಿ ಪ್ರತಿಭಟಿಸಿದರು.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಈ ವೇಳೆ, ಗ್ರಾಮಸ್ಥರು ಮತ್ತು ಅರಣ್ಯ ಇಲಾಖೆ ಅಧಿಕಾರಿಗಳ ನಡುವೆ ಮಾತಿನ ಚಕಮಕಿ ನಡೆಯಿತು. ನಂತರ ಅಧಿಕಾರಿಗಳು ಗ್ರಾಮಸ್ಥರ ಮನವೊಲಿಸಿ, ಸೆರೆ ಸಿಕ್ಕ ಚಿರತೆಯನ್ನು ಬೇರೆಡೆಗೆ ಸಾಗಿಸಿದರು. ಸೆರೆ ಸಿಕ್ಕ ಚಿರತೆಯನ್ನು ಬನ್ನೇರುಘಟ್ಟಮೃಗಾಲಯಕ್ಕೆ ಬಿಡುವ ಸಾಧ್ಯತೆಯಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಮೈಸೂರು: ತಿ.ನರಸೀಪುರದಲ್ಲಿ ನಿಲ್ಲದ ಚಿರತೆ ಉಪಟಳ, ಆತಂಕದಲ್ಲಿ ಜನತೆ..!

ಕಳೆದ 3 ತಿಂಗಳಲ್ಲಿ ನಾಲ್ವರು ಚಿರತೆ ದಾಳಿಗೆ ಬಲಿಯಾಗಿದ್ದರು. ಜ.21ರಂದು ಹೊರಳಹಳ್ಳಿಯ ಜಯಂತ್‌ (11), ಜ.20ರಂದು ಕನ್ನಾಯಕನಹಳ್ಳಿಯ ಸಿದ್ದಮ್ಮ (60), ಅ.30ರಂದು ಉಕ್ಕಲಗೆರೆ ಮಂಜುನಾಥ್‌, ಡಿ.1ರಂದು ಎಂ.ಕೆಬ್ಬೆಹುಂಡಿಯ ಮೇಘನಾ ಎಂಬುವರನ್ನು ಚಿರತೆ ಆಹುತಿ ಪಡೆದಿತ್ತು.