ಅರಣ್ಯ ಇಲಾಖೆ ಇರಿಸಿದ್ದ  ಬೋನಿಗೆ ಬಿದ್ದ ಚಿರತೆ| ಕೊಪ್ಪಳ ಜಿಲ್ಲೆಯ ಗಂಗಾವತಿ ನಗರದ ದುರ್ಗಾಬೆಟ್ಟದಲ್ಲಿ ನಡೆದ ಘಟನೆ| ಕಳೆದ 20 ದಿನಗಳ ಹಿಂದೆ ಅಡುಗೆದಾರನನ್ನು ಭಕ್ಷಿಸಿದ್ದ ಚಿರತೆ| 

ಗಂಗಾವತಿ(ಡಿ.18): ಕಳೆದ ಕೆಲವು ದಿನಗಳಿಂದ ಜನರ ನಿದ್ದೆಡೆಸಿದ್ದ ಚಿರತೆಯೊಂದು ಅರಣ್ಯ ಇಲಾಖೆ ಇರಿಸಿದ್ದ ಬೋನಿಗೆ ಬಿದ್ದ ಘಟನೆ ಕೊಪ್ಪಳ ಜಿಲ್ಲೆಯ ಗಂಗಾವತಿ ನಗರದ ದುರ್ಗಾಬೆಟ್ಟದಲ್ಲಿ (ಇಂದು) ಶುಕ್ರವಾರ ನಡೆದಿದೆ.

Add Asianetnews Kannada as a Preferred SourcegooglePreferred

ದುರ್ಗಾಬೆಟ್ಟದಲ್ಲಿ ಕಳೆದ 20 ದಿನಗಳ ಹಿಂದೆ ಅಡುಗೆದಾರನನ್ನು ಚಿರತೆಯೊಂದು ಬಲಿ ತೆಗೆದುಕೊಂಡಿತ್ತು. ಹೀಗಾಗಿ ಇಲ್ಲಿನ ಜನರು ಮನೆ ಬಿಟ್ಟು ಹೊರಗಡೆ ಬರುವುದಕ್ಕೂ ಭಯಪಡುವಂತ ಸ್ಥಿತಿ ನಿರ್ಮಾಣವಾಗಿತ್ತು. 

ಬಿಗ್ 3 ನೆರವಿನಿಂದ ವಿದ್ಯಾರ್ಥಿಗೆ ಸಿಕ್ತು ಎಂಬಿಬಿಎಸ್ ಸೀಟು; ಇದು ಕನ್ನಡಿಗರ ತಾಕತ್ತು

ಹೀಗಾಗಿ ಚಿರತೆಯನ್ನ ಹಿಡಿಯಲು ಬಳ್ಳಾರಿ ಜಿಲ್ಲೆಯ ಕರಡಿ ಧಾಮ ಮತ್ತು ದಾಂಡೇಲಿ ಅರಣ್ಯ ಇಲಾಖೆಯ ತಜ್ಞರು ಎರಡು ದಿನಗಳಿಂದ ಬಿಡಾರ ಹೂಡಿದ್ದರು. ಕೊನೆಗೂ ಇಂದು ಬೆಳಿಗ್ಗೆ ಚಿರತೆ ಬೋನಿಗೆ ಬಿದ್ದಿದೆ. ಈ ಪ್ರದೇಶದಲ್ಲಿ ಇನ್ನು ಮೂರು ಚಿರತೆಗಳು ಇರುವ ಸಾಧ್ಯತೆಗಳಿವೆ ಅರಣ್ಯ ಇಲಾಖೆಯ ಅಧಿಕಾರಿಗಳು ಶಂಕೆ ವ್ಯಕ್ತಪಡಿಸಿದ್ದಾರೆ. ಚಿರತೆ ಬೀನಿಗೆ ಬಿದ್ದಿದ್ದರಿಂದ ಗ್ರಾಮಸ್ಥರು ಸ್ವಲ್ಪ ಮಟ್ಟಿಗೆ ನಿಟ್ಟುಸಿರು ಬಿಟ್ಟಿದ್ದಾರೆ.