Asianet Suvarna News Asianet Suvarna News

ಪಂಚಮಸಾಲಿ ಸಮಾಜಕ್ಕೆ ಡಿಸಿಎಂ ಸ್ಥಾನ ನೀಡಲಿ: ಕೂಡಲ ಶ್ರೀ

ನೂತನ ಕಾಂಗ್ರೆಸ್‌ ಸರ್ಕಾರ ರಚನೆಯಲ್ಲಿ ಪಂಚಮಸಾಲಿ ಸಮುದಾಯದ ಪಾತ್ರ ಅನನ್ಯ. ಈ ಸಮಾಜದ ಋಣ ತೀರಿಸಲು ನೂತನ ಸರ್ಕಾರ ಒಂದು ಹೆಜ್ಜೆ ಮುಂದೆ ಇರಿಸಬೇಕು. ಈಗ ನಮಗೆ ಹಸಿವಾಗಿದೆ. ಮೀಸಲಾತಿ ಎಂಬ ಪ್ರಸಾದವನ್ನು ನಮಗೆ ಕೊಡಿ ಎಂದು ಕೇಳಿದ್ದೇವೆ. ಅದನ್ನು ಯಾವ ರೀತಿ ಕೊಡುತ್ತದೆಯೋ ಅದನ್ನು ಸರ್ಕಾರಕ್ಕೆ ಬಿಟ್ಟ ಕೊಟ್ಟ ವಿಷಯ: ಕೂಡಲಸಂಗಮದ ಪಂಚಮಸಾಲಿ ಬಸವಜಯ ಮೃತ್ಯುಂಜಯ ಮಹಾಸ್ವಾಮೀಜಿ 

Let Panchmasali Community be Given DCM Post in Karnataka Says Jayamrutunjaya Swamiji grg
Author
First Published Sep 21, 2023, 9:03 PM IST

ವಿಜಯಪುರ(ಸೆ.21):  ಪಂಚಮಸಾಲಿ ಸಮುದಾಯಕ್ಕೆ 2ಎಗೆ ಸೇರ್ಪಡೆ ಮಾಡುವ ನಿಟ್ಟಿನಲ್ಲಿ ಬಜೆಟ್ ಅಧಿವೇಶನದ ನಂತರ ಸಭೆ ಕರೆಯಲಾಗುವುದು ಎಂದು ಮುಖ್ಯಮಂತ್ರಿಗಳು ಭರವಸೆ ನೀಡಿದ್ದರು. ಈಗ ಎರಡು ತಿಂಗಳಾದರೂ ಯಾವುದೇ ಸಭೆ ಕರೆದಿಲ್ಲ. ಆದ್ದರಿಂದ ಮತ್ತೊಮ್ಮೆ ಸರ್ಕಾರದ ಗಮನ ಸೆಳೆಯಲು ಪಂಚಮಸಾಲಿ ಹೋರಾಟ ಮುಂದುವರೆಸಲಾಗುವುದು ಎಂದು ಕೂಡಲಸಂಗಮದ ಪಂಚಮಸಾಲಿ ಬಸವಜಯ ಮೃತ್ಯುಂಜಯ ಮಹಾಸ್ವಾಮೀಜಿ ಹೇಳಿದರು.

ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಹೋರಾಟದ ಭಾಗವಾಗಿ ಸೆ.24ರಂದು ಚಡಚಣ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಾಮೂಹಿಕ ಇಷ್ಟಲಿಂಗ ಪೂಜೆ ಮಾಡುವ ಮೂಲಕ ಹೋರಾಟ ನಡೆಸಲು ನಿರ್ಧರಿಸಲಾಗಿದೆ. ಈ ಹೋರಾಟದಲ್ಲಿ ಸರಿಸುಮಾರು 15 ಸಾವಿರಕ್ಕೂ ಹೆಚ್ಚು ಪಂಚಮಸಾಲಿ ಸಮಾಜ ಬಾಂಧವರು ಪಾಲ್ಗೊಳ್ಳಲಿದ್ದಾರೆ ಎಂದು ಹೇಳಿದರು.

ಉಪಮುಖ್ಯಮಂತ್ರಿ ಸ್ಥಾನ ನೀಡಿದ್ರೆ ನಾ ಬೇಡಾ ಅಂತೀನಾ?: ಸತೀಶ್ ಜಾರಕಿಹೊಳಿ

ನೂತನ ಕಾಂಗ್ರೆಸ್‌ ಸರ್ಕಾರ ರಚನೆಯಲ್ಲಿ ಪಂಚಮಸಾಲಿ ಸಮುದಾಯದ ಪಾತ್ರ ಅನನ್ಯ. ಈ ಸಮಾಜದ ಋಣ ತೀರಿಸಲು ನೂತನ ಸರ್ಕಾರ ಒಂದು ಹೆಜ್ಜೆ ಮುಂದೆ ಇರಿಸಬೇಕು. ಈಗ ನಮಗೆ ಹಸಿವಾಗಿದೆ. ಮೀಸಲಾತಿ ಎಂಬ ಪ್ರಸಾದವನ್ನು ನಮಗೆ ಕೊಡಿ ಎಂದು ಕೇಳಿದ್ದೇವೆ. ಅದನ್ನು ಯಾವ ರೀತಿ ಕೊಡುತ್ತದೆಯೋ ಅದನ್ನು ಸರ್ಕಾರಕ್ಕೆ ಬಿಟ್ಟ ಕೊಟ್ಟ ವಿಷಯ. ಹಾಲುಮತ ಸಮುದಾಯದ ಬಾಂಧವರಿಗೆ ಎಸ್.ಟಿ. ಶಿಫಾರಸು ಮಾಡಿದ್ದು ಸ್ವಾಗತಾರ್ಹ. ಅದೇ ತೆರನಾಗಿ 2ಎ ಮೀಸಲಾತಿ ಕಲ್ಪಿಸಿ ಎಂದು ಕೇಳುತ್ತಿದ್ದೇವೆ. ಇನ್ನೊಬ್ಬರ ಮೀಸಲಾತಿ ತೆಗೆದು ಕೊಟ್ಟಿರುವುದು ಬಿಟ್ಟಿರುವುದು ನಮಗೆ ಸಂಬಂಧಿಸಿದ ವಿಷಯವಲ್ಲ. ಅದು ಸರ್ಕಾರಕ್ಕೆ ಬಿಟ್ಟ ವಿಷಯ ಎಂದು ತಿಳಿಸಿದರು.

ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ, ವಿಜಯಾನಂದ ಕಾಶಪ್ಪನವರ, ಸಚಿವರಾದ ಶಿವಾನಂದ ಪಾಟೀಲ ಸೇರಿದಂತೆ ಎಲ್ಲರ ಬೆಂಬಲ ಇದೆ. ಇದು ಸಮಾಜ ಪರವಾದ ಹೋರಾಟ. ರಾಜ್ಯಮಟ್ಟದಲ್ಲಿ ನಡೆಯುವ ಧರಣಿಯಲ್ಲಿ ಎಲ್ಲರೂ ಭಾಗವಹಿಸಲಿದ್ದಾರೆ ಎಂಬ ಸಂಪೂರ್ಣ ವಿಶ್ವಾಸವಿದೆ ಎಂದರು.

ವರ್ಷಾಂತ್ಯದಲ್ಲಿ ಮೀಸಲಾತಿಯನ್ನು ಸರ್ಕಾರ ಕಲ್ಪಿಸಲೇಬೇಕು. ಈ ನಿಟ್ಟಿನಲ್ಲಿ ನಮ್ಮ ಹೋರಾಟ ಮುಂದುವರಿಯಲಿದೆ. ಪಂಚಮಸಾಲಿ ಮೀಸಲಾತಿ ಹೋರಾಟ ದೇಶದ ಗಮನ ಸೆಳೆದಿದೆ. ಶಿಕ್ಷಣ ಹಾಗೂ ಉದ್ಯೋಗಕ್ಕಾಗಿ ಸಮಾಜವನ್ನು ಪ್ರವರ್ಗ ೨ಎಗೆ ಸೇರ್ಪಡೆ ಮಾಡಬೇಕಾಗಿರುವುದು ಅಗತ್ಯವಾಗಿದೆ. ಹೋರಾಟ ತಾತ್ವಿಕ ಅಂತ್ಯಕ್ಕೆ ಬಂದಿರುವುದು ನಿಜ. ಆದರೆ ಸ್ಪಷ್ಟವಾಗಿ ಮೀಸಲಾತಿ ದೊರಕಬೇಕಿದೆ ಎಂದರು.

ಒನ್ ನೇಷನ್ ಒನ್ ಇಲೆಕ್ಷನ್ ಎಂಬುದು ಒಂದು ಉತ್ತಮ ನಿರ್ಧಾರ, ಆಡಳಿತ ಯಂತ್ರ ಚುನಾವಣೆಗಾಗಿಯೇ ಸೀಮಿತವಾಗುವ ಅನೇಕ ಸಾಧ್ಯತೆಗಳೇ ಹೆಚ್ಚು. ಹೀಗಾಗಿ ಆಡಳಿತ ಯಂತ್ರ ಸುಲಭವಾಗಿ ನಡೆಯಲು ಒಂದೇ ಬಾರಿ ಚುನಾವಣೆ ನಡೆಸಲು ಒನ್ ನೇಷನ್ ಒನ್ ಇಲೆಕ್ಷನ್ ಅತ್ಯಂತ ಸೂಕ್ತ ನಿರ್ಧಾರ ಎಂದು ಹೇಳಿದರು.

ಅದೇ ತೆರನಾಗಿ ಮಹಿಳಾ ಮೀಸಲಾತಿ ಕಲ್ಪಿಸಿದ್ದು ಅಣ್ಣ ಬಸವಣ್ಣನವರು. ಅದರ ಆಧಾರದ ಮೇಲೆ ಅನುಭವ ಮಂಟಪದ ಆಧಾರದ ಮೇಲೆ ಶಾಸನಸಭೆಗಳಲ್ಲಿಯೂ ಮಹಿಳಾ ಮೀಸಲಾತಿಗೆ ನಮ್ಮ ಆಶಯ ಇತ್ತು. ಈಗ ಆಶಯ ಈಡೇರಿರುವುದು ಸಂತೋಷ ತಂದಿದೆ ಎಂದರು.

3 ಡಿಸಿಎಂಗಳು ಬೇಕಾ ಅಂತ ಹೈಕಮಾಂಡ್‌ ನಿರ್ಧರಿಸುತ್ತೆ: ಸಚಿವ ಸತೀಶ್ ಜಾರಕಿಹೊಳಿ

ಅಖಿಲ ಭಾರತ ಲಿಂಗಾಯತ ಪಂಚಮಸಾಲಿ ಸಮಾಜದ ಜಿಲ್ಲಾಧ್ಯಕ್ಷ ಬಿ.ಎಂ.ಪಾಟೀಲ ಮಾತನಾಡಿ, ಪಂಚಮಸಾಲಿ ಸಮುದಾಯಕ್ಕೆ 2ಎ ಪ್ರವರ್ಗಕ್ಕೆ ಸೇರ್ಪಡೆ ಮಾಡುವ ನಿಟ್ಟಿನಲ್ಲಿ ಹೋರಾಟ ಸಂಘಟಿತವಾಗಿ ಮುನ್ನಡೆಯುತ್ತಿದೆ. ಅದರ ಭಾಗವಾಗಿ ನಿಡಗುಂದಿ, ತಾಳಿಕೋಟೆ ಸೇರಿದಂತೆ ಹಲವಾರು ತಾಲೂಕು ಕೇಂದ್ರಗಳಲ್ಲಿ ಸಭೆ, ಆಂದೋಲನ ನಡೆಸಲು ನಿರ್ಧರಿಸಲಾಗಿದೆ. ಚಡಚಣದಲ್ಲಿ ಜಿಲ್ಲಾ ಮಟ್ಟದ ಬೃಹತ್ ಧರಣಿ ನಡೆಸಲು ಸಹ ನಿರ್ಣಯ ಕೈಗೊಳ್ಳಲಾಗಿದ್ದು, 15 ಸಾವಿರಕ್ಕೂ ಹೆಚ್ಚು ಸಮಾಜ ಬಾಂಧವರು ಭಾಗವಹಿಸುವ ನಿರೀಕ್ಷೆ ಇದೆ ಎಂದರು.

ಕಾಂಗ್ರೆಸ್‌ ಸರ್ಕಾರ ಉಪಮುಖ್ಯಮಂತ್ರಿ ಸ್ಥಾನವನ್ನು ಪಂಚಮಸಾಲಿ ಸಮಾಜಕ್ಕೆ ನೀಡುಬೇಕು ಎಂದು ಕೂಡಲಸಂಗಮದ ಪಂಚಮಸಾಲಿ ಬಸವಜಯ ಮೃತ್ಯುಂಜಯ ಮಹಾಸ್ವಾಮೀಜಿ ನುಡಿದಿದ್ದಾರೆ. ನಮ್ಮ ಸಮಾಜದ 11 ಶಾಸಕರು ಕಾಂಗ್ರೆಸ್‌ ಪಕ್ಷದಿಂದ ಆಯ್ಕೆಯಾಗಿದ್ದಾರೆ. ಒಂದು ವೇಳೆ ಕಾಂಗ್ರೆಸ್‌ ಪಕ್ಷ ಡಿಸಿಎಂ ಸ್ಥಾನವನ್ನು ಲಿಂಗಾಯತರಿಗೆ ನೀಡುವುದಾದರೇ ಅದನ್ನು ಪಂಚಮಸಾಲಿ ಸಮಾಜಕ್ಕೆ ನೀಡಬೇಕು ಎಂದು ತಿಳಿಸಿದ್ದಾರೆ. 

Follow Us:
Download App:
  • android
  • ios