Asianet Suvarna News Asianet Suvarna News

ಬಳ್ಳಾರಿ ಜಿಲ್ಲಾ ಉತ್ಸವ ಯಶಸ್ವಿಗೆ ಶ್ರಮಿಸೋಣ; ಸಿಎಂ ಬಸವರಾಜ ಬೊಮ್ಮಾಯಿ

ಜಿಲ್ಲೆಯಲ್ಲಿ ಪ್ರಥಮ ಬಾರಿಗೆ ಬಳ್ಳಾರಿ ಉತ್ಸವ ಆಚರಿಸಲಾಗುತ್ತಿದ್ದು, ವಿವಿಧ ಇಲಾಖೆಗಳಿಗೆ ವಹಿಸಿದ ಕೆಲಸಗಳನ್ನು ಅಚ್ಚುಕಟ್ಟಾಗಿ ನಿರ್ವಹಿಸಿ ಉತ್ಸವ ಉತ್ಸಾಹಿಗಳಾಗಿ ಯಶಸ್ವಿಗೊಳ್ಳುವಂತೆ ಸಾರಿಗೆ,ಜಿಲ್ಲಾ ಉಸ್ತುವಾರಿ ಸಚಿವ ಬಿ.ಶ್ರೀರಾಮುಲು ಅಧಿಕಾರಿಗಳಿಗೆ ತಿಳಿಸಿದರು.ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶನಿವಾರ ನಡೆದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದರು.

Lets strive for a successful Ballari jilla utsav says  CM Basavaraja Bommai rav
Author
First Published Dec 25, 2022, 1:41 PM IST

ಬಳ್ಳಾರಿ (ಡಿ.25) : ಜಿಲ್ಲೆಯಲ್ಲಿ ಪ್ರಥಮ ಬಾರಿಗೆ ಬಳ್ಳಾರಿ ಉತ್ಸವ ಆಚರಿಸಲಾಗುತ್ತಿದ್ದು, ವಿವಿಧ ಇಲಾಖೆಗಳಿಗೆ ವಹಿಸಿದ ಕೆಲಸಗಳನ್ನು ಅಚ್ಚುಕಟ್ಟಾಗಿ ನಿರ್ವಹಿಸಿ ಉತ್ಸವ ಉತ್ಸಾಹಿಗಳಾಗಿ ಯಶಸ್ವಿಗೊಳ್ಳುವಂತೆ ಸಾರಿಗೆ,ಜಿಲ್ಲಾ ಉಸ್ತುವಾರಿ ಸಚಿವ ಬಿ.ಶ್ರೀರಾಮುಲು ಅಧಿಕಾರಿಗಳಿಗೆ ತಿಳಿಸಿದರು.ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶನಿವಾರ ನಡೆದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದರು.

ಉತ್ಸವ ಆಚರಣೆಗೆ ಸಂಬಂಧಿಸಿದಂತೆ ಎಲ್ಲ ಇಲಾಖೆಗಳ ಅಧಿಕಾರಿಗಳನ್ನು ಒಳಗೊಂಡ ವಿವಿಧ 16 ಉಪ ಸಮಿತಿ ರಚಿಸಿದ್ದು,ಆಯಾ ಉಪ ಸಮಿತಿಗಳಿಗೆ ವಹಿಸಿದ ಜವಾಬ್ದಾರಿ ಮತ್ತು ಕಾರ್ಯಕ್ರಮ ಅನುಷ್ಟಾನಗೊಳಿಸಿ ಉತ್ಸವ ಯಶಸ್ವಿಗೊಳಿಸಬೇಕು ಎಂದು ತಿಳಿಸಿದರು.

Ballari Utsav: ವಿಜಯನಗರ ಜಿಲ್ಲೆ ವಿಭಜನೆ ಬಳಿಕ ಇದೇ ಮೊದಲ ಬಾರಿಗೆ ಬಳ್ಳಾರಿ ಉತ್ಸವ

ಜಿಲ್ಲೆ ವಿಭಜನೆಯಾದ ನಂತರ ಇದೇ ಮೊದಲ ಬಾರಿಗೆ ಬಳ್ಳಾರಿ ಉತ್ಸವ ಆಚರಿಸಲು ಜಿಲ್ಲಾಡಳಿತ ನಿರ್ಧರಿಸಿದ್ದು, ಎಲ್ಲರೂ ಸಕ್ರಿಯವಾಗಿ ಭಾಗವಹಿಸಬೇಕು. ಉತ್ಸವ ಯಶಸ್ವಿಯಾಗಲು ಎಲ್ಲರ ಪರಿಶ್ರಮ ಬಹಳ ಮುಖ್ಯವಾಗಿರುತ್ತದೆ. ಇದು ಸಾಮಾನ್ಯ ಉತ್ಸವದಂತಿರದೇ, ವಿಶೇಷತೆಯಿಂದ ಕೂಡಿರಬೇಕು.ಅಂದಾಗ ಮಾತ್ರ ಜನರ ಹತ್ತಿರ ಕೊಂಡೊಯ್ದು ಕಾರ್ಯಕ್ರಮ ಯಶಸ್ವಿಗೊಳ್ಳಲು ಸಾಧ್ಯ ಎಂದರು.

ಸಮಿತಿಗಳ ರಚನೆ:

ಸ್ವಾಗತ ಮತ್ತು ಶಿಷ್ಟಾಚಾರ ಸಮಿತಿ, ಸಾರಿಗೆ ಸಮಿತಿ, ವಸತಿ ಸಮಿತಿ, ಆಹಾರ ಸಮಿತಿ, ಮಾಧ್ಯಮ ಮತ್ತು ಪ್ರಚಾರ ಸಮಿತಿ, ಜಾಹೀರಾತು ಸಮಿತಿ, ಬ್ಯಾನರ್‌, ಆಹ್ವಾನ ಪತ್ರಿಕೆ, ನೆನಪಿನ ಕಾಣಿಕೆ, ಪ್ರಮಾಣ ಪತ್ರಗಳು ವಿತರಣಾ ಸಮಿತಿ, ವೇದಿಕೆ ಮೂಲಭೂತ ಸೌಕರ್ಯಗಳ ಸಮಿತಿ, ಆರೋಗ್ಯ ಮತ್ತು ನೈರ್ಮಲ್ಯೀಕರಣ ಸಮಿತಿ, ಕಾನೂನು ಸುವ್ಯವಸ್ಥೆ ಸಮಿತಿ, ವಸ್ತುಪ್ರದರ್ಶನ ಸಮಿತಿ, ವೇದಿಕೆ ಸಮಿತಿ, ಛಾಯಾಚಿತ್ರ, ಚಿತ್ರಕಲಾ ಶಿಬಿರ ಸಮಿತಿ, ಕಲಾವಿದರ ಆಯ್ಕೆ ಸಮಿತಿ, ಗ್ರಾಮೀಣ ಕಲೆ, ಕ್ರೀಡಾ ಸಮಿತಿ, ರಂಗೋಲಿ-ಮೆಹಂದಿ ಸ್ಪರ್ಧೆ ಸಮಿತಿ, ವಿದ್ಯುತ್‌ ದೀಪಾಲಂಕಾರ ಸೇರಿದಂತೆ ಇತರೆ ಸಮಿತಿಗಳನ್ನು ರಚಿಸಲಾಗಿದೆ.ಉಪ ಸಮಿತಿಯವರು ಮೂರು ದಿನಗಳಲ್ಲಿ ಸಮಿತಿಯಲ್ಲಿ ಪರಾಮರ್ಶಿಸಿ ಆಯೋಜಿಸಬಹುದಾದ ಕಾರ್ಯಕ್ರಮಗಳು ಮತ್ತು ವೆಚ್ಚದ ವಿವರವನ್ನು ನೀಡಲು ಎಂದು ಜಿಲ್ಲಾಧಿಕಾರಿ ಪವನ್‌ಕುಮಾರ್‌ ಮಾಲಪಾಟಿ ತಿಳಿಸಿದರು.

ಉತ್ಸವದಲ್ಲಿ ಸಾವಯವ ಸಿರಿಧಾನ್ಯಗಳ ಪ್ರದರ್ಶನ,ಆಹಾರ ಮೇಳ, ಪುಸ್ತಕ ಪ್ರದರ್ಶನ, ಬಂಡಿಗಳ ಪ್ರದರ್ಶನ, ವಿಮ್ಸ್‌ ನಿಂದ ಕಲಾತಂಡಗಳೊಂದಿಗೆ ನಗರದಲ್ಲಿ ಬೃಹತ್‌ ಮೆರವಣಿಗೆ ಸೇರಿದಂತೆ ಹಲವಾರು ಕಾರ್ಯಕ್ರಮಗಳು ನಡೆಯಲಿವೆ. ಉತ್ಸವದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಪಾಲ್ಗೊಳ್ಳಲು ಬೇಕಾದ ವ್ಯವಸ್ಥೆ ಮತ್ತು ಪ್ರಚಾರ ಕೈಗೊಳ್ಳಬೇಕು ಎಂದರು.

ಜ.4 ರಂದು ಬಳ್ಳಾರಿಗೆ ಸಿಎಂ:

ಬಳ್ಳಾರಿ ನಗರ ಸೇರಿದಂತೆ ಜಿಲ್ಲೆಯಲ್ಲಿನ ವಿವಿಧ ಇಲಾಖೆಗಳ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ ಮತ್ತು ಕಾಮಗಾರಿಗಳ ಉದ್ಘಾಟನಾ ಕಾರ್ಯಕ್ರಮವನ್ನು 2023 ರ ಜ.4 ರಂದು ಏರ್ಪಡಿಸಲಿದ್ದು, ಈ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿಗಳು ಭಾಗವಹಿಸುವರು. ಇದಕ್ಕಾಗಿ ಎಲ್ಲ ಅಭಿವೃದ್ಧಿ ಇಲಾಖೆಯವರು ಉದ್ಘಾಟನೆಗೆ ಬೇಕಾದ ಎಲ್ಲ ಸಿದ್ಧ್ದತೆ ಮಾಡಿಕೊಳ್ಳುವಂತೆ ಜಿಲ್ಲಾಧಿಕಾರಿ ಸೂಚನೆ ನೀಡಿದರು.

ಐತಿಹಾಸಿಕ ಕೃಷ್ಣಾನಗರ ಕೋಟೆ ಸ್ವಚ್ಛತೆಗೆ ಹಿಂದೇಟು

ಈ ಸಂರ್ಭದಲ್ಲಿ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ರಂಜೀತ್‌ಕುಮಾರ್‌ ಬಂಡಾರು, ಉಪ ಅರಣ್ಯ ಸಂರಕ್ಷಣಾಧಿಕಾರಿ ಸಂದೀಪ್‌ ಸೂರ್ಯವಂಶಿ, ಸಹಾಯಕ ಆಯುಕ್ತ ಹೇಮಂತ್‌ಕುಮಾರ್‌.ಎನ್‌, ಪೊ›ಬೆಷನರಿ ಐಎಎಸ್‌ ಅಧಿಕಾರಿ ರೂಪಿಂದರ್‌ ಕೌರ್‌, ಎಡಿಸಿ ಮಂಜುನಾಥ ಸೇರಿದಂತೆ ಜಿಲ್ಲಾ ಮಟ್ಟದ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

Follow Us:
Download App:
  • android
  • ios