ಗೋಕರ್ಣ ಬೀಚಲ್ಲಿ ಮುಳುಗುತ್ತಿದ್ದ ಪ್ರವಾಸಿಗರನ್ನು ರಕ್ಷಣೆ ಮಾಡಲಾಗಿದೆ. ಲೈಫ್ ಗಾರ್ಡ್ ಸಿಬ್ಬಂದಿ ಪ್ರವಾಸಿಗನ ಪ್ರಾಣ ಉಳಿಸಿದ್ದಾರೆ.
ಗೋಕರ್ಣ [ಅ.01]: ಗೋಕರ್ಣ ಬೀಚಲ್ಲಿ ಮುಳುಗುತ್ತಿದ್ದ ಪ್ರವಾಸಿಗನ ರಕ್ಷಣೆ ಮಾಡಲಾಗಿದೆ.
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ
ಬಾಗಲಕೋಟೆ ಮೂಲದ 13 ಮಂದಿ ಗೋಕರ್ಣಕ್ಕೆ ಪ್ರವಾಸಕ್ಕೆಂದು ಆಗಮಿಸಿದ್ದರು. ಇದರಲ್ಲಿ ಓರ್ವರಾದ ಶಿವಾಜಿ ಲಕ್ಕಪ್ಪ ಎನ್ನುವವರು ಸಮುದ್ರಕ್ಕೆ ಇಳಿದ ವೇಳೆ ಸುಳಿಗೆ ಸಿಲುಕಿದ್ದು, ಅವರನ್ನು ರಕ್ಷಣೆ ಮಾಡಲಾಗಿದೆ.
ಇಲ್ಲಿನ ಲೈಫ್ ಗಾರ್ಡ್ ಸಿಬ್ಬಂದಿ ಮೋಹನ್ ಅಂಬಿಕ ಸಮುದ್ರಕ್ಕೆ ಇಳಿದು ಪ್ರವಾಸಿಗರನ್ನು ರಕ್ಷಣೆ ಮಾಡಿದ್ದಾರೆ. ರಕ್ಷಣಾ ಕಾರ್ಯಕ್ಕೆ ಮೇಲ್ವಿಚಾರಕ ರವಿ ನಾಯ್ಕ್ ಅವರು ನೆರವಾಗಿದ್ದಾರೆ.
ಹೆಚ್ಚಿನ ಜಿಲ್ಲಾ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ
ಅತ್ಯಂತ ಅಪಾಯಕಾರಿಯಾದ ಪ್ರದೇಶದಲ್ಲಿ ಇಳಿದ ಕಾರಣ ಮುಳುಗುತ್ತಿದ್ದ ಪ್ರವಾಸಿಗರನ್ನು ಪ್ರಾಣಾಪಾಯದಿಂದ ರಕ್ಷಣೆ ಮಾಡಿ ದಡಕ್ಕೆ ಕರೆತರಲಾಗಿದೆ.
