Asianet Suvarna News Asianet Suvarna News

ಸಹಜ ಸ್ಥಿತಿಯತ್ತ ಕರ್ನಾಟಕ; 'ಅನ್‌ಲಾಕ್'‌ ಗೆ ಬೇರೆ ಬೇರೆ ಜಿಲ್ಲೆಗಳ ಸ್ಪಂದನೆ ಹೀಗಿದೆ

ಇಂದಿನಿಂದ ಅನ್‌ಲಾಕ್‌ 1.0 ಶುರುವಾಗಿದೆ. ಆರ್ಥಿಕ ಚಟುವಟಿಕೆಗಳು ಆರಂಭವಾಗಿದೆ. ಉಡುಪಿಯಲ್ಲಿ ಬೆಳಿಗ್ಗೆ 7 ರಿಂದ ಮಧ್ಯಾಹ್ನ 1 ರವರೆಗೆ ಮಾತ್ರ ಅಂಗಡಿ ಮುಂಗಟ್ಟು ತೆರೆಯಲು ಅವಕಾಶ ನೀಡಲಾಗಿದೆ. 

Lockdown 3.0 Ground Report From hassana Davanagere Udupi and Mangaluru
Author
Bengaluru, First Published May 4, 2020, 12:33 PM IST

ಬೆಂಗಳೂರು (ಮೇ. 04): ಇಂದಿನಿಂದ ಅನ್‌ಲಾಕ್‌ 1.0 ಶುರುವಾಗಿದೆ. ಆರ್ಥಿಕ ಚಟುವಟಿಕೆಗಳು ಆರಂಭವಾಗಿದೆ. ಉಡುಪಿಯಲ್ಲಿ ಬೆಳಿಗ್ಗೆ 7 ರಿಂದ ಮಧ್ಯಾಹ್ನ 1 ರವರೆಗೆ ಮಾತ್ರ ಅಂಗಡಿ ಮುಂಗಟ್ಟು ತೆರೆಯಲು ಅವಕಾಶ ನೀಡಲಾಗಿದೆ. ಮದ್ಯ ಮಾರಾಟಕ್ಕೂ 1 ಗಂಟೆವರೆಗೆ ಮಾತ್ರ ಅವಕಾಶ  ಖಾಸಗಿ ಬಸ್ ಸಂಚಾರ ಇರುವುದಿಲ್ಲ. ಉಡುಪಿ ಸದ್ಯ ಗ್ರೀನ್ ಝೋನ್‌ನಲ್ಲಿದೆ. ಮುಂಜಾಗ್ರತಾ ಕ್ರಮವಾಗಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. 

"

ಮಂಗಳೂರಿನಲ್ಲಿ ಬೆಳಿಗ್ಗೆ 7 ರಿಂದ ಸಂಜೆ 7 ರವರೆಗೆ ವ್ಯಾಪಾರ ವಹಿವಾಟಿಗೆ ಅವಕಾಶ ನೀಡಲಾಗಿದೆ. ಖಾಸಗಿ, ಸರ್ಕಾರಿ ಬಸ್ ಸಂಚಾರಕ್ಕೆ ನಿರ್ಬಂಧ ವಿಧಿಸಲಾಗಿದೆ. ಕಾರು, ಬೈಕ್‌ ಓಡಾಟಕ್ಕೆ ಅವಕಾಶ ನೀಡಲಾಗಿದೆ. ಸಂಜೆ 7 ರ ನಂತರ ಸಂಪೂರ್ಣ ಬಂದ್ ಆಗಲಿದೆ. ಬಾರ್ಡರ್‌ಗಳನ್ನು ಬಂದ್ ಮಾಡಿದೆ. 

"

ದಾವಣಗೆರೆಯಲ್ಲಿ ಅಗತ್ಯ ಸೇವೆಗಳನ್ನು ಹೊರತುಪಡಿಸಿ ಬೇರಾವ ಸೇವೆಗಳು ಲಭ್ಯವಿಲ್ಲ. ಇಲ್ಲಿ ಪಾಸಿಟೀವ್ ಕೇಸ್‌ಗಳು ಕಂಡು ಬಂದಿದ್ದರಿಂದ ಜನನೇ ಹೊರಗೆ ಬರಲು ಆತಂಕಪಡುತ್ತಿದ್ದಾರೆ. 

"

ಹಾಸನ ಸಹಜ ಸ್ಥಿತಿಯತ್ತ ಮರಳುತ್ತಿದೆ. ಬಸ್ ಸಂಚಾರ ಆರಂಭವಾಗಿದೆ. ಎಲ್ಲಾ ಅಂಗಡಿ ಮುಂಗಟ್ಟುಗಳು ತೆರೆಯುತ್ತಿವೆ. ಒಂದಷ್ಟು ವಿನಾಯಿತಿ ನೀಡಲಾಗಿದೆ. 

"

Follow Us:
Download App:
  • android
  • ios