* ಮಹಿಳಾ ಜ್ಞಾನವಿಕಾಸ ಕೇಂದ್ರ ಉದ್ಘಾಟನೆ* ಚಳ್ಳಕೆರೆ ತಾಲೂಕು ತುರುವನೂರಿನ ರಾಮಲಿಂಗೇಶ್ವರ ಕಲ್ಯಾಣ ಮಂಟಪದಲ್ಲಿ ನಡೆದ ಕಾರ್ಯಕ್ರಮ* ಶಾಸಕ  ಟಿ ರಘುಮೂರ್ತಿ ಅವರಿಂದ ಉದ್ಘಾಟನೆ

ಚಳ್ಳಕೆರೆ , (ಆ.06): ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ (ರಿ) ವತಿಯಿಂದ "ಮಹಿಳಾ ಜ್ಞಾನವಿಕಾಸ ಕೇಂದ್ರಗಳ ಕಾರ್ಯಕ್ರಮವನ್ನು ಶಾಸಕ ಟಿ ರಘುಮೂರ್ತಿ ಉದ್ಘಾಟಿಸಿದರು.

Add Asianetnews Kannada as a Preferred SourcegooglePreferred

ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ (ರಿ) ವತಿಯಿಂದ ಡಾ. ಡಿ.ವೀರೇಂದ್ರ ಹೆಗ್ಗಡೆ ಹಾಗೂ
ಮಾತೃಶ್ರೀ ಹೇಮಾವತಿ ವಿ.ಹೆಗ್ಗಡೆಯವರ ಕೃಪಾಶೀರ್ವಾದಗಳೊಂದಿಗೆ ಇಂದು (ಶುಕ್ರವಾರ) ಚಳ್ಳಕೆರೆ ತಾಲೂಕು ತುರುವನೂರಿನ ರಾಮಲಿಂಗೇಶ್ವರ ಕಲ್ಯಾಣ ಮಂಟಪದಲ್ಲಿ ಹಮ್ಮಿಕೊಳ್ಳಲಾಗಿತ್ತು.

ರಾಜ್ಯದಲ್ಲಿ ನೈಟ್ ಕರ್ಫ್ಯೂ ವೀಕೆಂಡ್ ಲಾಕ್‌ಡೌನ್, ಹಾಕಿ ಇಂಡಿಯಾಗೆ ದೇಶ ಸಲಾಮ್; ಆ.6ರ ಟಾಪ್ 10 ಸುದ್ದಿ!

ಕಾರ್ಯಕ್ರಮದಲ್ಲಿ ಚಳ್ಳಕೆರೆ ವಿಧಾನಸಭಾ ಕ್ಷೇತ್ರದ ಶಾಸಕ ಟಿ ರಘುಮೂರ್ತಿ ಅವರು ಪಾಲ್ಗೊಂಡು,"ಮಹಿಳಾ ಜ್ಞಾನವಿಕಾಸ ಕೇಂದ್ರಗಳ ಕಾರ್ಯಕ್ರಮವನ್ನು ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ತುರುವನೂರು ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಶ್ರೀಮತಿ ಶಾರದಾ ರಮೇಶ್ ಅವರು ಧರ್ಮಸ್ಥಳ ಸಂಘ ಸಂಸ್ಥೆಯ ಯೋಜನಾ ನಿರ್ದೇಶಕರಾದ ದುಗ್ಗೇಗೌಡ ಜಿಲ್ಲಾ ನಿರ್ದೇಶಕರಾದ ಗಿರೀಶ್ ಅವರು ತಾಲೂಕು ನಿರ್ದೇಶಕರಾದ ಸುಧಾ ರವರು ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಾದ ಯೋಗೇಶ್ ಹಾಜರಿದ್ದರು.