Asianet Suvarna News Asianet Suvarna News

ತುಮಕೂರು: ಕಾಲಿನಿಂದ ದೇವರ ವಿಗ್ರಹ ತುಳಿದು ವಿಕೃತಿ ಮೆರೆದವನ ಬಂಧನ

*   ತುಮಕೂರು ಜಿಲ್ಲೆಯ ಮಧುಗಿರಿ ತಾಲೂಕಿನ ಡಿ.ವಿ.ಹಳ್ಳಿ ವ್ಯಾಪ್ತಿಯಲ್ಲಿ ನಡೆದಿದ್ದ ಘಟನೆ
*   ದಬ್ಬೇಘಟ್ಟ ಗ್ರಾಮದ ಶ್ರೀಕಾಂತ ಬಂಧಿತ ಯುವಕ 
*   ಸುತ್ತಮುತ್ತಲ ಗ್ರಾಮದಲ್ಲಿ ಪ್ರಕ್ಷುಬ್ಧ ವಾತಾವರಣ ನಿರ್ಮಾಣ

Man Arrested for Keeps Foot With Slippers on Kote Kallappa Swamy Statue in Tumakuru grg
Author
Bengaluru, First Published Sep 22, 2021, 10:43 AM IST

ಮಧುಗಿರಿ(ಸೆ.22):  ಯುವಕನೊಬ್ಬ ದೇವಸ್ಥಾನವೊಂದರ ಮೂಲವಿಗ್ರಹಕ್ಕೆ ಚಪ್ಪಲಿ ಕಾಲಿನಿಂದ ತುಳಿದು ವಿಕೃತವಾಗಿ ವರ್ತಿಸಿ ಆ ವಿಡಿಯೋ ಹರಿಬಿಟ್ಟಿರುವ ಘಟನೆ ತುಮಕೂರು ಜಿಲ್ಲೆಯ ಮಧುಗಿರಿ ತಾಲೂಕಿನ ಡಿ.ವಿ.ಹಳ್ಳಿ ವ್ಯಾಪ್ತಿಯಲ್ಲಿ ಮಂಗಳವಾರ ಬೆಳಗ್ಗೆ ನಡೆದಿದೆ. 

ಇಲ್ಲಿನ ಬೆಟ್ಟದ ಮೇಲಿನ ಕೋಟೆಕಲ್ಲಪ್ಪ ದೇವಸ್ಥಾನ ಪ್ರವೇಶಿಸಿದ್ದ ದಬ್ಬೇಘಟ್ಟ ಗ್ರಾಮದ ಶ್ರೀಕಾಂತ(23) ಎಂಬ ಯುವಕ ಈ ಕೃತ್ಯ ಎಸಗಿದ್ದು ಸುತ್ತಮುತ್ತಲ ಗ್ರಾಮದಲ್ಲಿ ಪ್ರಕ್ಷುಬ್ಧ ವಾತಾವರಣ ನಿರ್ಮಾಣವಾಗಿದೆ. 

ತುಮಕೂರು; ದೇವರ ಮೂರ್ತಿ ಮೇಲೆ ಚಪ್ಪಲಿ ಕಾಲಿಟ್ಟು ಯುವಕನ ವಿಕೃತಿ

ಆರೋಪಿ ಶ್ರೀಕಾಂತನನ್ನು ಪೊಲೀಸರು ಬಂಧಿಸಲಾಗಿದ್ದು ಆತ ಮಾನಸಿಕ ಅಸ್ವಸ್ಥ ಎನ್ನಲಾಗಿದೆ.
 

Follow Us:
Download App:
  • android
  • ios