ತುಮಕೂರು: ಕಾಲಿನಿಂದ ದೇವರ ವಿಗ್ರಹ ತುಳಿದು ವಿಕೃತಿ ಮೆರೆದವನ ಬಂಧನ
* ತುಮಕೂರು ಜಿಲ್ಲೆಯ ಮಧುಗಿರಿ ತಾಲೂಕಿನ ಡಿ.ವಿ.ಹಳ್ಳಿ ವ್ಯಾಪ್ತಿಯಲ್ಲಿ ನಡೆದಿದ್ದ ಘಟನೆ
* ದಬ್ಬೇಘಟ್ಟ ಗ್ರಾಮದ ಶ್ರೀಕಾಂತ ಬಂಧಿತ ಯುವಕ
* ಸುತ್ತಮುತ್ತಲ ಗ್ರಾಮದಲ್ಲಿ ಪ್ರಕ್ಷುಬ್ಧ ವಾತಾವರಣ ನಿರ್ಮಾಣ
ಮಧುಗಿರಿ(ಸೆ.22): ಯುವಕನೊಬ್ಬ ದೇವಸ್ಥಾನವೊಂದರ ಮೂಲವಿಗ್ರಹಕ್ಕೆ ಚಪ್ಪಲಿ ಕಾಲಿನಿಂದ ತುಳಿದು ವಿಕೃತವಾಗಿ ವರ್ತಿಸಿ ಆ ವಿಡಿಯೋ ಹರಿಬಿಟ್ಟಿರುವ ಘಟನೆ ತುಮಕೂರು ಜಿಲ್ಲೆಯ ಮಧುಗಿರಿ ತಾಲೂಕಿನ ಡಿ.ವಿ.ಹಳ್ಳಿ ವ್ಯಾಪ್ತಿಯಲ್ಲಿ ಮಂಗಳವಾರ ಬೆಳಗ್ಗೆ ನಡೆದಿದೆ.
ಇಲ್ಲಿನ ಬೆಟ್ಟದ ಮೇಲಿನ ಕೋಟೆಕಲ್ಲಪ್ಪ ದೇವಸ್ಥಾನ ಪ್ರವೇಶಿಸಿದ್ದ ದಬ್ಬೇಘಟ್ಟ ಗ್ರಾಮದ ಶ್ರೀಕಾಂತ(23) ಎಂಬ ಯುವಕ ಈ ಕೃತ್ಯ ಎಸಗಿದ್ದು ಸುತ್ತಮುತ್ತಲ ಗ್ರಾಮದಲ್ಲಿ ಪ್ರಕ್ಷುಬ್ಧ ವಾತಾವರಣ ನಿರ್ಮಾಣವಾಗಿದೆ.
ತುಮಕೂರು; ದೇವರ ಮೂರ್ತಿ ಮೇಲೆ ಚಪ್ಪಲಿ ಕಾಲಿಟ್ಟು ಯುವಕನ ವಿಕೃತಿ
ಆರೋಪಿ ಶ್ರೀಕಾಂತನನ್ನು ಪೊಲೀಸರು ಬಂಧಿಸಲಾಗಿದ್ದು ಆತ ಮಾನಸಿಕ ಅಸ್ವಸ್ಥ ಎನ್ನಲಾಗಿದೆ.