Asianet Suvarna News Asianet Suvarna News

ವಿಪರೀತ ಮದ್ಯ ಸೇವಿಸಿ ಮಲಗಿದ್ದ ವ್ಯಕ್ತಿ ಸಾವು

ಮದ್ಯದಂಗಡಿಗಳು ತೆರೆಯುವ ಮುನ್ನ ರಾಜ್ಯದಲ್ಲಿ ಮದ್ಯ ಸಿಗದೆ ಆತ್ಮಹತ್ಯೆ ಪ್ರಕರಣಗಳು ನಡೆದಿತ್ತು. ಇದೀಗ ಬ್ರಹ್ಮಾವರದ ವಾರಂಬಳ್ಳಿ ಗ್ರಾಮದ ಮೂಡುಬಿರ್ತಿ ನಿವಾಸಿ ದಿನೇಶ್‌ ವಿಪರೀತ ಮದ್ಯಪಾನ ಮಾಡಿ ಸಾವನ್ನಪ್ಪಿದ್ದಾರೆ.

Man died after consuming excess liquor in udupi
Author
Bangalore, First Published May 22, 2020, 9:14 AM IST

ಉಡುಪಿ(ಮೇ 22): ಮದ್ಯದಂಗಡಿಗಳು ತೆರೆಯುವ ಮುನ್ನ ರಾಜ್ಯದಲ್ಲಿ ಮದ್ಯ ಸಿಗದೆ ಆತ್ಮಹತ್ಯೆ ಪ್ರಕರಣಗಳು ನಡೆದಿತ್ತು. ಇದೀಗ ಬ್ರಹ್ಮಾವರದ ವಾರಂಬಳ್ಳಿ ಗ್ರಾಮದ ಮೂಡುಬಿರ್ತಿ ನಿವಾಸಿ ದಿನೇಶ್‌ ವಿಪರೀತ ಮದ್ಯಪಾನ ಮಾಡಿ ಸಾವನ್ನಪ್ಪಿದ್ದಾರೆ.

ಅವರು ಬುಧವಾರ ಬೆಳಗ್ಗೆ 9 ಗಂಟೆಗೆ ವಿಪರೀತ ಮದ್ಯ ಸೇವನೆಯಿಂದ ವಾಂತಿ ಮಾಡಿ ಮನೆಯ ಹಾಲ್‌ನಲ್ಲಿ ಮಲಗಿದ್ದರು. ಸಂಜೆವರೆಗೂ ಏಳದೇ ಇದ್ದಾಗ ಮನೆಯವರು ಎಬ್ಬಿಸಲು ಪ್ರಯತ್ನಿಸಿದಾಗ ಅವರು ಮಲಗಿದಲ್ಲೇ ಮೃತಪಟ್ಟಿದ್ದರು.

ಲಾಕ್‌ಡೌನ್‌ ಎಫೆಕ್ಟ್‌: ರಸ್ತೆ ಬದಿಯಲ್ಲೇ ಮಗುವಿಗೆ ಜನ್ಮ ನೀಡಿದ ತಾಯಿ, ಸಂಕಷ್ಟದಲ್ಲಿ ಅಲೆಮಾರಿ ಕುಟುಂಬ

ನಿತ್ಯ ಮದ್ಯಸೇವನೆ ಮಾಡುತ್ತಿದ್ದು, ವಿಪರೀತ ಮದ್ಯ ಸೇವಿಸಿದ ಮೇಲೆ ಊಟ ಮಾಡದೇ ಇದ್ದುದರಿಂದ ಅಸ್ವಸ್ಥಗೊಂಡು ಮೃತಪಟ್ಟಿದ್ದಾರೆ ಎಂದು ಬ್ರಹ್ಮಾವರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Follow Us:
Download App:
  • android
  • ios