ಗ್ರಾಮ ಪಂಚಾಯತ್ ಮಾಜಿ ಸದಸ್ಯನ ಪೈಶಾಚಿಕ ಕೃತ್ಯಪೀಡಿಸಿ ಪೀಡಿಸಿ ಗರ್ಭಿಣಿಯಾಗಿದ್ದ ಹೆಂಡತಿಯನ್ನೇ ಕೊಂದು ಬಿಟ್ಟ ಪಾಪಿ ಪತಿ 

ಟಿ.ನರಸೀಪುರ (ನ.16): ಗ್ರಾಪಂ ಮಾಜಿ ಸದಸ್ಯನೊಬ್ಬ ಸೀಮೆ ಎಣ್ಣೆ ಸುರಿದು ತನ್ನ ಪತ್ನಿಯನ್ನು ಬೆಂಕಿ ಹೆಚ್ಚಿ ಕೊಲೆ ಮಾಡಿರುವ ಘಟನೆ ಬನ್ನೂರ ಸಮೀಪದ ದೊಡ್ಡ ಮುಲಗೂಡು ಗ್ರಾಮದಲ್ಲಿ ನಡೆದಿದೆ. 

Add Asianetnews Kannada as a Preferred SourcegooglePreferred

ಮತ್ತೊಮ್ಮೆ ಗ್ರಾಪಂ ಚುನಾವಣೆಯಲ್ಲಿ ಸ್ಪರ್ಧಿಸುವ ಉದ್ದೇಶ ಹೊಂದಿದ್ದ ಆರೋಪಿ ಹಣಕ್ಕಾಗಿ ಪೀಡಿಸಿ ಈ ಕೃತ್ಯ ಎಸಗಿದ್ದಾನೆ ಎಂದು ಆರೋಪಿಸಲಾಗಿದೆ. ಗ್ರಾಮದ ಶಾಂತಮ್ಮ (22) ಕೊಲೆಗೀಡಾದವರು. ಗ್ರಾಪಂ ಮಾಜಿ ಸದಸ್ಯ ರಮೇಶ್‌ ಕೊಲೆ ಮಾಡಿದ ಆರೋಪಿ.

ಪ್ರಿಯತಮನೆ ಫ್ರೆಂಡ್ ಜೊತೆ ಬಂದು ರೇಪ್ ಮಾಡಿ ಸುಟ್ಟು ಹಾಕಿದ : ಗೆಜ್ಜೆ ಹೇಳಿತು ಗುರುತು

ನಂಜನಗೂಡಿನ ಅಶೋಕಪುರಂ ನಿವಾಸಿ ಕಾಳಿಂಗ ಸ್ವಾಮಿ ಎಂಬವರ ಪುತ್ರಿ ಶಾಂತಮ್ಮ (22) ಅವರನ್ನು ದೊಡ್ಡಮುಲಗೂಡು ಗ್ರಾಪಂ ಮಾಜಿ ಸದಸ್ಯ ರಮೇಶ್‌ಗೆ 2 ವರ್ಷಗಳ ಹಿಂದೆ ಮದುವೆ ಮಾಡಿಕೊಡಲಾಗಿತ್ತು. ಮದುವೆ ವೇಳೆ 50 ಸಾವಿರ, 60 ಗ್ರಾಂ. ಚಿನ್ನಾಭರಣವನ್ನು ವರದಕ್ಷಿಣೆಯಾಗಿ ನೀಡಲಾಗಿತ್ತು. 

ರಮೇಶ ಮತ್ತೆ ಗ್ರಾಪಂ ಚುನಾವಣೆಯಲ್ಲಿ ಸ್ಪರ್ಧಿಸಲು ತವರು ಮನೆಯಿಂದ .5 ಲಕ್ಷ ತರುವಂತೆ ಪತ್ನಿಯನ್ನು ಪೀಡಿಸುತ್ತಿದ್ದ ಎಂದು ಕಾಳಿಂಗಸ್ವಾಮಿ ಪೊಲೀಸರಿಗೆ ನೀಡಿರುವ ದೂರಿನಲ್ಲಿ ತಿಳಿಸಿದ್ದಾರೆ.

ಬನ್ನೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.