ತೀರ್ಥಹಳ್ಳಿ ಪಟ್ಟಣದಲ್ಲಿ ಮಂಗನಕಾಯಿಲೆಗೆ ಮತ್ತೊಬ್ಬರು ಬಲಿಯಾಗಿದ್ದು, ಇದರೊಂದಿಗೆ ಶಿವಮೊಗ್ಗ ಜಿಲ್ಲೆಯಲ್ಲಿ ಮಂಗನ ಕಾಯಿಲೆಗೆ ಬಲಿಯಾದವರ ಸಂಖ್ಯೆ 5ಕ್ಕೆ ಏರಿದೆ. ತಾಲೂಕಿನ ಅಗ್ರಹಾರ ಹೋಬಳಿಯ ಉಡುಕೆರೆ ಗ್ರಾಮದ ಸುಬ್ರಹ್ಮಣ್ಯ(52) ಮೃತರು.

ಶಿವಮೊಗ್ಗ(ಏ.07): ತೀರ್ಥಹಳ್ಳಿ ಪಟ್ಟಣದಲ್ಲಿ ಮಂಗನಕಾಯಿಲೆಗೆ ಮತ್ತೊಬ್ಬರು ಬಲಿಯಾಗಿದ್ದು, ಇದರೊಂದಿಗೆ ಶಿವಮೊಗ್ಗ ಜಿಲ್ಲೆಯಲ್ಲಿ ಮಂಗನ ಕಾಯಿಲೆಗೆ ಬಲಿಯಾದವರ ಸಂಖ್ಯೆ 5ಕ್ಕೆ ಏರಿದೆ. ತಾಲೂಕಿನ ಅಗ್ರಹಾರ ಹೋಬಳಿಯ ಉಡುಕೆರೆ ಗ್ರಾಮದ ಸುಬ್ರಹ್ಮಣ್ಯ(52) ಮೃತರು.

Add Asianetnews Kannada as a Preferred SourcegooglePreferred

ಕೆಲವು ದಿನಗಳಿಂದ ತೀವ್ರ ಜ್ವರದಿಂದ ಬಳಲುತ್ತಿದ್ದ ಅವರನ್ನು ತೀರ್ಥಹಳ್ಳಿಯ ಜೆ.ಸಿ. ಆಸ್ಪತ್ರೆಗೆ ಸೇರಿಸಲಾಗಿತ್ತು. ಕೆಎಫ್‌ಡಿ ಸೋಂಕಿರುವುದು ದೃಢಪಟ್ಟಬಳಿಕ ಮಣಿಪಾಲದ ಕೆಎಂಸಿ ಆಸ್ಪತ್ರೆಗೆ ಸೇರಿಸಲಾಯಿತು. ಆದರೆ, ಅಲ್ಲಿ ಚಿಕಿತ್ಸೆ ವಿಫಲವಾಗಿ ಸೋಮವಾರ ಮೃತಪಟ್ಟಿದ್ದಾರೆ.

ಮಾಸ್ಕ್‌ ಮೇಲೆ ವಾರ, ನೋಟ್‌ನಲ್ಲಿ 2 ದಿನ ಇರುತ್ತೆ ಕೊರೋನಾ!

ಈವರೆಗೆ ತೀರ್ಥಹಳ್ಳಿ ತಾಲೂಕಿನಲ್ಲಿ 3 ಮತ್ತು ಸಾಗರ ತಾಲೂಕಿನಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ. ತೀರ್ಥಹಳ್ಳಿಯಲ್ಲಿ 105 ಮತ್ತು ಸಾಗರದಲ್ಲಿ 29 ಮಂದಿಗೆ ಸೋಂಕು ತಗುಲಿದೆ. ಕೊರೋನಾ ವೈರಸ್‌ ಜೊತೆಗೇ ಮಂಗನ ಕಾಯಿಲೆಯ ಬಗ್ಗೆಯೂ ಜನ ಆತಂಕಕ್ಕೊಳಗಾಗಿದ್ದಾರೆ.