ಮಂಡ್ಯ ಜಿಲ್ಲೆಯ ಪಾಂಡವಪುರ ತಾಲೂಕಿನ ಕನಗನಮರಡಿಯ ವಿ.ಸಿ. ನಾಲೆಯಲ್ಲಿ ಸಂಭವಿಸಿದ ಭೀಕರ ಖಾಸಗಿ ಬಸ್ ದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಪರಾರಿಯಾಗಿದ್ದ ಚಾಲಕ ಕೊನೆಗೂ ಪೊಲೀಸ್ ಬಲೆಗೆ ಬಿದ್ದಿದ್ದಾನೆ.
ಮಂಡ್ಯ, [ಡಿ.09]: ಪಾಂಡವಪುರ ತಾಲೂಕಿನ ಕನಗನಮರಡಿಯಲ್ಲಿ ಸಂಭವಿಸಿದ ಖಾಸಗಿ ಬಸ್ ದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಚಾಲಕನನ್ನು ಪೊಲೀಸರು ಇಂದು ಬಂಧಿಸಿದ್ದಾರೆ.
Add Asianetnews Kannada as a Preferred Source

ಘಟನೆ ನಡೆದು 15 ದಿನಗಳ ಬಳಿಕ ಬಸ್ ಚಾಲಕ ಪಾಂಡವಪುರ ಪೊಲೀಸರ ಬಲೆಗೆ ಬಿದ್ದಿದ್ದು, ಆರೋಪಿಯನ್ನು ಬಸ್ ಚಾಲಕನನ್ನು ಹೊಳಲು ಗ್ರಾಮದ ಶಿವಣ್ಣ ಎಂದು ಹೇಳಲಾಗಿದೆ.
ತಡವಾಗಿ ಬೆಳಕಿಗೆ ಬಂತು ಮಂಡ್ಯ ದುರಂತದ ಹಿಂದಿನ ಕಾರಣ!
ನಾಳೆ [ಸೋಮವಾರ] ಮಂಡ್ಯ ನ್ಯಾಯಾಲಯಕ್ಕೆ ಪೊಲೀಸರು ಹಾಜರು ಪಡಿಸಲಿದ್ದಾರೆ. ಕಳೆದ ತಿಂಗಳು ಪಾಂಡವಪುರ ತಾಲೂಕಿನ ಕನಗನಮರಡಿಯಲ್ಲಿ ಸಂಭವಿಸಿದ ಬಸ್ ದುರಂತದಲ್ಲಿ 30 ಮಂದಿ ಪ್ರಾಣ ಕಳೆದುಕೊಂಡಿದ್ದರು.
ಬಸ್ ಚಾಲಕ ಮತ್ತು ಕಂಡಕ್ಟರ್ ಇಬ್ಬರು ಪ್ರಾಣಾಪಾಯದಿಂದ ತಪ್ಪಿಸಿಕೊಂಡು ಪರಾರಿಯಾಗಿದ್ದರು.
