Asianet Suvarna News Asianet Suvarna News

ಮಂಡ್ಯ ಬಸ್ ದುರಂತ: 15 ದಿನದಿಂದ ನಾಪತ್ತೆಯಾಗಿದ್ದ ಚಾಲಕ ಅರೆಸ್ಟ್

ಮಂಡ್ಯ ಜಿಲ್ಲೆಯ ಪಾಂಡವಪುರ ತಾಲೂಕಿನ ಕನಗನಮರಡಿಯ ವಿ.ಸಿ. ನಾಲೆಯಲ್ಲಿ ಸಂಭವಿಸಿದ ಭೀಕರ ಖಾಸಗಿ ಬಸ್​ ದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಪರಾರಿಯಾಗಿದ್ದ ಚಾಲಕ ಕೊನೆಗೂ ಪೊಲೀಸ್ ಬಲೆಗೆ ಬಿದ್ದಿದ್ದಾನೆ. 

Mandya Bus Tragedy Pandavapura police arrests Driver
Author
Bengaluru, First Published Dec 9, 2018, 7:29 PM IST

ಮಂಡ್ಯ, [ಡಿ.09]: ಪಾಂಡವಪುರ ತಾಲೂಕಿನ ಕನಗನಮರಡಿಯಲ್ಲಿ ಸಂಭವಿಸಿದ ಖಾಸಗಿ ಬಸ್​ ದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಚಾಲಕನನ್ನು ಪೊಲೀಸರು ಇಂದು ಬಂಧಿಸಿದ್ದಾರೆ.

ಘಟನೆ ನಡೆದು 15 ದಿನಗಳ ಬಳಿಕ ಬಸ್​ ಚಾಲಕ  ಪಾಂಡವಪುರ ಪೊಲೀಸರ ಬಲೆಗೆ ಬಿದ್ದಿದ್ದು, ಆರೋಪಿಯನ್ನು ಬಸ್​ ಚಾಲಕನನ್ನು ಹೊಳಲು ಗ್ರಾಮದ ಶಿವಣ್ಣ ಎಂದು ಹೇಳಲಾಗಿದೆ. 

ತಡವಾಗಿ ಬೆಳಕಿಗೆ ಬಂತು ಮಂಡ್ಯ ದುರಂತದ ಹಿಂದಿನ ಕಾರಣ!

ನಾಳೆ [ಸೋಮವಾರ] ಮಂಡ್ಯ ನ್ಯಾಯಾಲಯಕ್ಕೆ ಪೊಲೀಸರು ಹಾಜರು ಪಡಿಸಲಿದ್ದಾರೆ. ಕಳೆದ ತಿಂಗಳು ಪಾಂಡವಪುರ ತಾಲೂಕಿನ ಕನಗನಮರಡಿಯಲ್ಲಿ ಸಂಭವಿಸಿದ ಬಸ್​​ ದುರಂತದಲ್ಲಿ 30 ಮಂದಿ ಪ್ರಾಣ ಕಳೆದುಕೊಂಡಿದ್ದರು.

 ಬಸ್​ ಚಾಲಕ ಮತ್ತು ಕಂಡಕ್ಟರ್​ ಇಬ್ಬರು ಪ್ರಾಣಾಪಾಯದಿಂದ ತಪ್ಪಿಸಿಕೊಂಡು ಪರಾರಿಯಾಗಿದ್ದರು.

Follow Us:
Download App:
  • android
  • ios