ಮಂಡ್ಯದಲ್ಲಿ ಎಲ್ಲೆಡೆ ಲಸಿಕಾ ಕಾರ್ಯಕ್ರಮ ನಡೆಸಲು ಸಿದ್ಧತೆ ಜಿಲ್ಲಾಡಳಿತದಿಂದ  ಹಳ್ಳಿಗಳಲ್ಲಿ ಸೋಂಕು ನಿವಾರಣೆಗೆ ಕ್ರಮ ಹಳ್ಳಿಗಳಲ್ಲಿಯೇ ವ್ಯಾಪಕವಾಗಿ ಹರಡಿರುವ ಕೊರೊನಾ ಸೋಂಕು

ಮಂಡ್ಯ (ಜೂ.13): ಹಳ್ಳಿಗಳಲ್ಲಿ ಕೊರೋನಾ ಮಹಾಮಾರಿ ಬಾಧಿಸುತ್ತಿರುವ ಹಿನ್ನೆಲೆ ಗ್ರಾಮಗಳನ್ನು ಸೋಂಕು ಮುಕ್ತ ಮಾಡಲು ಮಂಡ್ಯ ಜಿಲ್ಲಾಡಳಿತ‌ ಪ್ಲಾನ್ ಮಾಡಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಸದ್ಯ ಸೋಂಕು ತಡೆಯುವುದರೊಂದಿಗೆ ಮತ್ತೊಂದೆಡೆ ಮೂರನೇ ಅಲೆ ತಡೆಯಲು ಸಿದ್ಧತೆ ನಡೆಸಲಾಗಿದೆ. ಮಂಡ್ಯದ ಹಳ್ಳಿ-ಹಳ್ಳಿಗೆ ತೆರಳಿ ಜನರಿಗೆ ಲಸಿಕೆ ನೀಡಲು ಸಿದ್ಧತೆ ನಡೆದಿದೆ.

ಪೊಲಿಯೋ ಅಭಿಯಾನದಂತೆ ಕೊರೋನಾ ಲಸಿಕೆ ಅಭಿಯಾನ ನಡೆಸಲು ಜಿಲ್ಲಾಡಳಿತ ತಯಾರಿ ಮಾಡಿಕೊಂಡಿದ್ದು, ಶಾಲೆ, ಸಮುದಾಯ ಕೇಂದ್ರಗಳಲ್ಲಿ ಲಸಿಕೆ ನೀಡಲು ಸಿದ್ಧತೆ ನಡೆಸಿದೆ.

ಕೊಂಚ ಏರಿದ್ರೂ ಮತ್ತೆ ಲಾಕ್‌ಡೌನ್ : 2 ಡೋಸ್ ಪಡೆಯೋವರೆಗೆ ಎಚ್ಚರಿಕೆ ವಹಿಸಿ

ಪಾಸಿಟಿವಿಟಿ ರೇಟ್ ಅಥವಾ ಜನಸಂಖ್ಯೆ ಹೆಚ್ಚಿರುವ ಹಳ್ಳಿಗಳಲ್ಲಿ ಮೊದಲು ಲಸಿಕೆ ನೀಡಲಾಗುತ್ತದೆ. ಬಳಿಕ ಉಳಿದೆಡೆ ಲಸಿಕಾ ಕಾರ್ಯಕ್ರಮ ನಡೆಸಲು ಪೂರ್ಣ ತಯಾರಿ ಮಾಡಿಕೊಳ್ಳಲಾಗಿದೆ. 

ಮಂಡ್ಯದ ಬಹುತೇಕ ಹಳ್ಳಿಗಳಿಗೆ ಕೊರೋನಾ ಸೋಂಕು ವ್ಯಾಪಿಸಿದ್ದು, ನಗರಪ್ರದೇಶಕ್ಕಿಂತ ಹಳ್ಳಿಗಳಲ್ಲೇ ಹೆಚ್ಚು ಪಾಸಿಟಿವಿಟಿ ಪ್ರಕರಣಗಳು ಪತ್ತೆಯಾಗುತ್ತಿವೆ. ಇದರಿಂದ ಗ್ರಾಮೀಣ ಭಾಗದಲ್ಲಿ ಸೋಂಕು ನಿಯಂತ್ರಣ ಮಾಡಲು ಜಿಲ್ಲಾಡಳಿತ ಸಂಪೂರ್ಣ ಲಸಿಕಾ ಅಭಿಯಾನಕ್ಕೆ ಮೊರೆಹೋಗಿದೆ.

ಸೂಚನೆ: ಕೊರೋನಾ ಮಹಾಮಾರಿ ಎಲ್ಲೆಡೆ ಹರಡುತ್ತಿದೆ. ಹೀಗಿರುವಾಗ ಎಲ್ಲರೂ ತಪ್ಪದೇ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ ಹಾಗೂ ಲಸಿಕೆ ಪಡೆಯಿರಿ ಎಂಬುವುದು ಏಷ್ಯಾನೆಟ್‌ ನ್ಯೂಸ್‌ ಕಳಕಳಿಯ ವಿನಂತಿ. ಒಗ್ಗಟ್ಟಿನಿಂದ ನಾವು ಈ ಕೊರೋನಾ ಸರಪಳಿ ಮುರಿಯೋಣ #ANCares #IndiaFightsCorona