ಮಂಡ್ಯ: ಮತ್ತೋರ್ವ ಜೆಡಿಎಸ್ ಮುಖಂಡನಿಗೆ ಕೊಲೆ ಬೆದರಿಕೆ
ಇತ್ತೀಚೆಗಷ್ಟೇ ಮಂಡ್ಯ ಜೆಡಿಎಸ್ ಮುಖಂಡ ಹತ್ಯೆ ಬೆನ್ನಲ್ಲೇ ಮತ್ತೋರ್ವ ಜೆಡಿಎಸ್ ಮುಖಂಡ, ಸಾರಿಗೆ ಸಚಿವ ಡಿ.ಸಿ.ತಮ್ಮಣ್ಣ ಬೆಂಬಲಿಗರೊಬ್ಬರಿಗೆ ಕೊಲೆ ಬೆದರಿಕೆ ಹಾಕಿದ್ದಾರೆ.
ಮಂಡ್ಯ, (ಜ.8): ಜೆಡಿಎಸ್ ಮುಖಂಡ ಪ್ರಕಾಶ್ ಹತ್ಯೆ ಬೆನ್ನಲ್ಲೇ ಮತ್ತೋರ್ವ ಜೆಡಿಎಸ್ ಮುಖಂಡನಿಗೆ ಅನಾಮಧೇಯ ವ್ಯಕ್ತಿಯೊಬ್ಬನಿಂದ ಕೊಲೆ ಬೆದರಿಕೆ ಹಾಕಿದ್ದಾರೆ.
ಮಂಡ್ಯ JDS ಮುಖಂಡನ ಹತ್ಯೆ; ಆರೋಪಿಗಳನ್ನು ಶೂಟೌಟ್ ಮಾಡಿ ಎಂದ ಸಿಎಂ
ಕೆ.ಎಂ.ದೊಡ್ಡಿಯ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಹಾಗೂ ಜೆಡಿಎಸ್ ಮುಖಂಡ ವೆಂಕಟೇಶ್ಗೆ ಪತ್ರದ ಮೂಲಕ ಬೆದರಿಕೆ ಬಂದಿದೆ.
JDS ಕಾರ್ಯಕರ್ತ ಹತ್ಯೆ: ಅಂತಿಮ ದರ್ಶನ ವೇಳೆ ಕುಮಾರಸ್ವಾಮಿ ಕಣ್ಣೀರು
ಅನಾಮಧೇಯ ವ್ಯಕ್ತಿ ಒಂದು ಸಾಲಿನಲ್ಲಿ ಕೊಲೆ ಬೆದರಿಕೆ ಪತ್ರ ಬರೆದಿದ್ದು, 'ನಿನ್ನ ಕೊಲೆ ತಕ್ಷಣದಲ್ಲೇ' ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾನೆ.
ಸಾರಿಗೆ ಸಚಿವ ಡಿ.ಸಿ.ತಮ್ಮಣ್ಣ ಬೆಂಬಲಿಗರಾಗಿರುವ ವೆಂಕಟೇಶ್ ಬೆದರಿಕೆ ಪತ್ರದಿಂದ ಆತಂಕಕ್ಕೆ ಒಳಗಾಗಿದ್ದು, ಈ ಬಗ್ಗೆ ಕೆ.ಎಂ.ದೊಡ್ಡಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.