Asianet Suvarna News Asianet Suvarna News

ಮಂಡ್ಯ: ಮತ್ತೋರ್ವ ಜೆಡಿಎಸ್ ಮುಖಂಡನಿಗೆ ಕೊಲೆ ಬೆದರಿಕೆ

ಇತ್ತೀಚೆಗಷ್ಟೇ ಮಂಡ್ಯ ಜೆಡಿಎಸ್ ಮುಖಂಡ ಹತ್ಯೆ ಬೆನ್ನಲ್ಲೇ ಮತ್ತೋರ್ವ ಜೆಡಿಎಸ್ ಮುಖಂಡ, ಸಾರಿಗೆ ಸಚಿವ ಡಿ.ಸಿ.ತಮ್ಮಣ್ಣ ಬೆಂಬಲಿಗರೊಬ್ಬರಿಗೆ ಕೊಲೆ ಬೆದರಿಕೆ ಹಾಕಿದ್ದಾರೆ.

Mandya JDS Leader Receive Death Treat
Author
Bengaluru, First Published Jan 8, 2019, 4:11 PM IST

ಮಂಡ್ಯ, (ಜ.8): ಜೆಡಿಎಸ್ ಮುಖಂಡ ಪ್ರಕಾಶ್ ಹತ್ಯೆ ಬೆನ್ನಲ್ಲೇ ಮತ್ತೋರ್ವ ಜೆಡಿಎಸ್ ಮುಖಂಡನಿಗೆ ಅನಾಮಧೇಯ ವ್ಯಕ್ತಿಯೊಬ್ಬನಿಂದ ಕೊಲೆ ಬೆದರಿಕೆ ಹಾಕಿದ್ದಾರೆ.

ಮಂಡ್ಯ JDS​ ಮುಖಂಡನ ಹತ್ಯೆ; ಆರೋಪಿಗಳನ್ನು ಶೂಟೌಟ್​ ಮಾಡಿ ಎಂದ ಸಿಎಂ

ಕೆ.ಎಂ.ದೊಡ್ಡಿಯ ಗ್ರಾಮ ಪಂಚಾಯಿತಿ ಮಾಜಿ ‌ಅಧ್ಯಕ್ಷ ಹಾಗೂ ಜೆಡಿಎಸ್ ಮುಖಂಡ ವೆಂಕಟೇಶ್​ಗೆ ಪತ್ರದ ಮೂಲಕ ಬೆದರಿಕೆ ಬಂದಿದೆ.

JDS ಕಾರ್ಯಕರ್ತ ಹತ್ಯೆ: ಅಂತಿಮ ದರ್ಶನ ವೇಳೆ ಕುಮಾರಸ್ವಾಮಿ ಕಣ್ಣೀರು

ಅನಾಮಧೇಯ ವ್ಯಕ್ತಿ ಒಂದು ಸಾಲಿನಲ್ಲಿ ಕೊಲೆ ಬೆದರಿಕೆ ಪತ್ರ ಬರೆದಿದ್ದು, 'ನಿನ್ನ ಕೊಲೆ ತಕ್ಷಣದಲ್ಲೇ' ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾನೆ.

ಸಾರಿಗೆ ಸಚಿವ ಡಿ.ಸಿ.ತಮ್ಮಣ್ಣ ಬೆಂಬಲಿಗರಾಗಿರುವ ವೆಂಕಟೇಶ್ ಬೆದರಿಕೆ ಪತ್ರದಿಂದ ಆತಂಕಕ್ಕೆ ಒಳಗಾಗಿದ್ದು, ಈ ಬಗ್ಗೆ ಕೆ.ಎಂ.ದೊಡ್ಡಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

Follow Us:
Download App:
  • android
  • ios