Asianet Suvarna News Asianet Suvarna News

ಚುನಾವಣೆಗಾಗಿ ಆಯ್ತು ಕಾಂಗ್ರೆಸ್‌ ಜೊತೆಗೆ ಮೈತ್ರಿ

ರಾಜ್ಯದಲ್ಲಿ ರಾಜಕೀಯ ಚಟುವಟಿಕೆಗಳು ಬಿರುಸಿನಿಂದ ಸಾಗಿವೆ. ಇತ್ತ ಕಾಂಗ್ರೆಸ್‌ ಜೊತೆ   ಚುನಾವಣೆ ಉದ್ದೇಶಕ್ಕಾಗಿ ಮೈತ್ರಿಯೊಂದು ಆಗಿದೆ.

Mandya TAPCMS Election  Farmers Union Alliance with Congress snr
Author
Bengaluru, First Published Sep 15, 2020, 12:23 PM IST

ಪಾಂಡವಪುರ (ಸೆ.15): ಮಾಸಾಂತ್ಯದಲ್ಲಿ ನಡೆಯುವ ಟಿಎಪಿಸಿಎಂಎಸ್‌ ಚುನಾವಣೆಗೆ ಕಾಂಗ್ರೆಸ್‌ ಪಕ್ಷದೊಂದಿಗೆ ಮೈತ್ರಿ ಮಾಡಕೊಳ್ಳಲಾಗಿದೆ. ಅಭ್ಯರ್ಥಿಗಳ ಗೆಲುವಿಗೆ ಪ್ರತಿಯೊಬ್ಬರು ಶಕ್ತಿ ಮೀರಿ ದುಡಿಯುವಂತೆ ರೈತಸಂಘ ಜಿಲ್ಲಾಧ್ಯಕ್ಷ ಎ.ಎಲ್ ಕೆಂಪೂಗೌಡ ಮನವಿ ಮಾಡಿದರು.

ಪಟ್ಟಣದ ಪ್ರವಾಸಿ ಮಂದಿರದಲ್ಲಿ ನಡೆದ ರೈತಸಂಘ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿ, ಟಿಎಪಿಸಿಎಂಎಸ್‌ಗೆ ಈ ಹಿಂದೆಯೂ ಕಾಂಗ್ರೆಸ್‌ ಜತೆ ಮೈತ್ರಿ ಮಾಡಿಕೊಂಡು ಅಭ್ಯರ್ಥಿಗಳನ್ನು ಕಣಕ್ಕಿಳಿಸಲಾಗಿತ್ತು. ಅದೇ ರೀತಿ ಈ ಬಾರಿಯೂ ಮೈತ್ರಿ ಮಾಡಿಕೊಳ್ಳಲಾಗಿದೆ ಎಂದರು.

ಶೀಘ್ರ ಶರತ್ ಬಚ್ಚೇಗೌಡ ಅಧಿಕೃತ ಪಕ್ಷ ಸೇರ್ಪಡೆ : ಯಾವ ಪಕ್ಷ..? ...

ಅದೇ ರೀತಿ ಗ್ರಾಪಂ ಚುನಾವಣೆ ಹಿನ್ನೆಲೆಯಲ್ಲಿ ಗ್ರಾಮಗಳ ಮಟ್ಟದಲ್ಲಿ ಸಭೆ ಕರೆದು ಎಲ್ಲರ ಅಭಿಪ್ರಾಯ ಪಡೆದು ಸ್ಥಳೀಯ ಉತ್ತಮ ಅಭ್ಯರ್ಥಿಗಳನ್ನು ಆಯ್ಕೆ ಮಾಡಿ ಅವರ ಗೆಲುವಿಗೆ ಹೋರಾಟ ಮಾಡಲಾಗುವುದು ಎಂದು ಹೇಳಿದರು.

ಡಿಕೆಶಿ ಸೂಚನೆ :ಶಿರಾದಲ್ಲಿ ಇವರಿಗೆ ಕಾಂಗ್ರೆಸ್ ಟಿಕೆಟ್ ಪಕ್ಕಾ? ..

ಸಭೆಯಲ್ಲಿ ಸ್ವರಾಜ್‌ ಇಂಡಿಯಾ ಪಕ್ಷದ ತಾಲೂಕು ಅಧ್ಯಕ್ಷ ದಯಾನಂದ್‌, ಅಮೃತಿ ರಾಜಶೇಖರ್‌, ಎಣೆಹೊಳೆಕೊಪ್ಪಲು ಮಂಜು, ವೈ.ಜಿ.ರಘು, ಇಂಗಲಗುಪ್ಪೆ ಲೋಕೇಶ್‌, ಬೇವಿನಕುಪ್ಪೆ ಶಿವಲಿಂಗೇಗೌಡ ಇತರರು ಇದ್ದರು.

Follow Us:
Download App:
  • android
  • ios