ರಾಜ್ಯದಲ್ಲಿ ರಾಜಕೀಯ ಚಟುವಟಿಕೆಗಳು ಬಿರುಸುಗೊಂಡಿದ್ದು ಇದೇ ಸಂದರ್ಭದಲ್ಲಿ ಪಕ್ಷಾಂತರ ಪರ್ವಗಳು ಕೂಡ ಜೋರಾಗಿದೆ. ಹಲವು ಮುಖಂಡರು ಕಾಂಗ್ರೆಸ್ ಸೇರಿದ್ದಾರೆ.

ಮೊಣಕಾಲ್ಮೂರು (ಸೆ.28): ನೂರಾರು ವರ್ಷ ಇತಿಹಾಸ ಹೊಂದಿರುವ ಕಾಂಗ್ರೆಸ್ ಪಕ್ಷ ಬಡವರು ದಲಿತರು ಹಿಂದುಳಿದ, ಅಲ್ಪಸಂಖ್ಯಾತರಿಗೆ ಸಾಮಾಜಿಕ ನ್ಯಾಯ ಕಲ್ಪಿಸಿದೆ. ಪಕ್ಷದ ತತ್ವ ಸಿದ್ಧಾಂತ ಮೆಚ್ಚಿರುವ ನೂರಾರು ಯುವಕರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗುತ್ತಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಇದರಿಂದ ಕ್ಷೇತ್ರದಲ್ಲಿ ಪಕ್ಷ ಇನ್ನಷ್ಟು ಬಲಗೊಳ್ಳುತ್ತಿದೆ ಎಂದು ಮಾಜಿ ಶಾಸಕ ತಿಪ್ಪೇಸ್ವಾಮಿ ಹೇಳಿದರು. 

ತಾಲೂಕೊಮ ರಾಯಾಪುರ ಸಮೀಪದ ರಂಗ ಪರಿಸರದಲ್ಲಿ ಬ್ಲಾಕ್ ಕಾಂಗ್ರೆಸ್ ಆಯೋಜಿಸಿದ್ದ ವಿವಿಧ ಪಕ್ಷದ ಮುಖಂಡರು ಪಕ್ಷಕ್ಕೆ ಸೇರ್ಪಡೆ ಕಾರ್ಯಕ್ರಮದಲ್ಲಿ ಮಾತನಾಡಿ ಕಾಂಗ್ರೆಸ್ ಸರ್ಕಾರ ಕೈಗೊಂಡಿದ್ದ ಸಾಧನೆ ಜನತೆಗೆ ತಿಳಿಸಬೇಕು ಎಂದರು.

ಬಿಜೆಪಿ ನಿಲುವಿಗೆ ಜೈಕಾರ ಹಾಕಿದ ಕುಮಾರಸ್ವಾಮಿ : ಜೆಡಿಎಸ್ ನಿಲುವು ಮೀರಿದ ಶಾಸಕ ...

ಬಿಜೆಪಿ ಸರ್ಕಾರದ ಜನ ವಿರೋಧಿ ನೀರಿ ವಿರುದ್ಧ ಹೆಚ್ಚು ಪ್ರಚಾರ ಮಾಡಿ ಕಾಂಗ್ರೆಸ್ ಪಕ್ಷ ಇನ್ನಷ್ಟು ಗಟ್ಟಿಗೊಳಿಸಬೇಕು ಎಂದು ತಿಳಿಸಿದರು.

ಮುಖಂಡರಾದ ಯೋಗೀಶ ಬಾಬು ಮಾತನಾಡಿ ಕಾಂಗ್ರೆಸ್ ಭದ್ರ ಕೋಟೆಯಾಗಿರುವ ಮೊಳಕಾಲ್ಮೂರು ಕ್ಷೇತ್ರದಲ್ಲಿ ಸ್ಥಳೀಯ ಬಿಜೆಪಿ ಶಾಸಕರ ಧೋರಣೆಗೆ ಬೇಸತ್ತು ಬಿಜೆಪಿಯಲ್ಲಿನ ಅನೇಕ ಕಾರ್ಯಕರ್ತರು ಕಾಂಗ್ರೆಸ್ ಬೆಂಬಲಿಸುತ್ತಿದ್ದಾರೆ. 

ಗ್ರಾಮ ಪಂಚಾಯಿತಿ ಚುನಾವಣೆ ಎದುರಾಗುತ್ತಿದೆ. ಪಕ್ಷ ಭೂತ್ ಮಟ್ಟದಲ್ಲಿ ಸಂಘಟನೆಯಾಗಬೇಕು . ಕಾಂಗ್ರೆಸ್ ಬೆಂಬಲಿತರನ್ನು ಗೆಲ್ಲಿಸಬೇಕು ಎಂದರು.