ಏಳು ತಿಂಗಳ ಹಿಂದೆ ಉಪ್ಪೂರಿನ ರಾಷ್ಟಿಯ ಹೆದ್ದಾರಿಯಲ್ಲಿ ಮಾನಸಿಕ ಅಸ್ವಸ್ಥಗೊಂಡು ಭಯದ ವಾತಾವರಣ ಸೃಷ್ಟಿಸಿದ್ದ ರಾಜಸ್ಥಾನ  ಮೂಲದ ರವಿ ಸಿಂಗ್ 7 ತಿಂಗಳ ನಿರಂತರ ಚಿಕಿತ್ಸೆಯಿಂದ ಬಹುತೇಕ ಗುಣಮುಖನಾಗಿದ್ದಾನೆ. ಆದರೆ ಮಗನನ್ನು ಸ್ವೀಕರಿಸಲು ತಂದೆ ಒಪ್ಪದ ಕಾರಣ ಅನಿವಾರ್ಯವಾಗಿ  ಮತ್ತೆ ಆಶ್ರಮದಲ್ಲಿದ್ದಾನೆ.

ವರದಿ: ಶಶಿಧರ್ ಮಾಸ್ತಿಬೈಲು, ಏಷ್ಯಾನೆಟ್ ಸುವರ್ಣನ್ಯೂಸ್

Add Asianetnews Kannada as a Preferred SourcegooglePreferred

ಉಡುಪಿ (ನ.10): ಏಳು ತಿಂಗಳ ಹಿಂದೆ ಉಪ್ಪೂರಿನ ರಾಷ್ಟಿಯ ಹೆದ್ದಾರಿಯಲ್ಲಿ ಮಾನಸಿಕ ಅಸ್ವಸ್ಥಗೊಂಡು ಭಯದ ವಾತಾವರಣ ಸೃಷ್ಟಿಸಿದ್ದ ರಾಜಸ್ಥಾನ ಮೂಲದ ರವಿ ಸಿಂಗ್ (27) ಸಮಾಜ ಸೇವಕರ ಸ್ಪಂದನೆ ಹಾಗೂ 7 ತಿಂಗಳ ನಿರಂತರ ಚಿಕಿತ್ಸೆಯಿಂದ ಬಹುತೇಕ ಗುಣಮುಖನಾಗಿದ್ದಾನೆ. ಆದರೆ ಮಗನನ್ನು ಸ್ವೀಕರಿಸಲು ತಂದೆ ಒಪ್ಪದ ಕಾರಣ ಅನಿವಾರ್ಯವಾಗಿ ಆತ ಮತ್ತೆ ಆಶ್ರಮವನ್ನು ಸೇರುವಂತಾಗಿದೆ. ರವಿ ಸಿಂಗ್‌ನನ್ನು ಸಮಾಜ ಸೇವಕ ವಿಶು ಶೆಟ್ಟಿ ಅವರು ಅಂದು ರಕ್ಷಿಸಿ ದೊಡ್ಡಣ ಗುಡ್ಡೆಯ ಬಾಳಿಗಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದ್ದರು. ನಂತರ ಯುವಕನ ತಂದೆಯನ್ನು ಸಂಪರ್ಕಿಸಿ ಮಾಹಿತಿ ನೀಡಿದರೂ, ತಂದೆ ಮಗನನ್ನು ಸ್ವೀಕರಿಸಲು ಒಪ್ಪಿರಲಿಲ್ಲ. ಮಣಿಪಾಲ ಕೆಎಂಸಿಯ ಅಂಗ ಸಂಸ್ಥೆ `ಹೊಂಬೆಳಕು ' ಮಾನಸಿಕ ಅಸ್ವಸ್ಥರ ಪುನಶ್ಚೇತನ ಕೇಂದ್ರ ಯುವಕನಿಗೆ ಉಚಿತವಾಗಿ ಆರೈಕೆ ಹಾಗೂ ಆಶ್ರಯ ನೀಡಲು ಮುಂದೆ ಬಂದಿದ್ದು, ಇಲ್ಲಿ 6 ತಿಂಗಳ ಕಾಲ ಆರೈಕೆ ಪಡೆದ ರವಿ ಸಿಂಗ್ ಇದೀಗ ಬಹಳಷ್ಟು ಚೇತರಿಸಿಕೊಂಡಿದ್ದಾನೆ. ಹೇಳಿದ ಕೆಲಸ ಕಾರ್ಯಗಳನ್ನು ನಿರಾತಂಕವಾಗಿ ಮಾಡುತ್ತಿದ್ದಾನೆ.

ಹೀಗಾಗಿ ವಿಶು ಶೆಟ್ಟಿ ಅವರು ಮತ್ತೊಮ್ಮೆ ಯುವಕನ ತಂದೆ ರಾಜಸ್ಥಾನದ ಮಹೇಂದ್ರ ಸಿಂಗ್ ಅವರನ್ನು ಸಂಪರ್ಕಿಸಿ ಮಗನನ್ನು ಸ್ವೀಕರಿಸುವಂತೆ ಮನವಿ ಮಾಡಿದ್ದಾರೆ. `ನನಗೆ ಮಗ ಬೇಡ, ಆತನನ್ನು ಎಲ್ಲಿಯಾದರೂ ಬಿಟ್ಟು ಬಿಡಿ ' ಎಂಬ ಉಢಾಫೆ ಉತ್ತರ ತಂದೆಯಿಂದ ಸಿಕ್ಕಿದೆ. ಆಸ್ಪತ್ರೆ ಹಾಗೂ ಪುನರ್ವಸತಿ ಕೇಂದ್ರದ ಮೂಲಕವೂ ಯುವಕನ ತಂದೆಗೆ ಪೋನಾಯಿಸಿ ಮನವೊಲಿಸುವ ಪ್ರಯತ್ನ ಕೂಡಾ ವಿಫಲವಾಗಿದೆ.

Udupi; ಈ ಒಂಟಿ ವೃದ್ದೆಯನ್ನು ಮರಳಿ ಗೂಡಿಗೆ ಸೇರಿಸುವವರಾರು?

ರವಿ ಸಿಂಗ್‌ನನ್ನು ರೈಲಿನ ಮೂಲಕ ರಾಜಸ್ಥಾನಕ್ಕೆ ಒಬ್ಬಂಟಿಯಾಗಿ ಕಳುಹಿಸುವುದು ಸರಿಯಲ್ಲ ಎಂಬ ಅಭಿಪ್ರಾಯ ವೈದ್ಯರಿಂದ ವ್ಯಕ್ತವಾದ ಹಿನ್ನಲೆಯಲ್ಲಿ ವಿಶು ಶೆಟ್ಟಿ ಅವರು ಮಂಜೇಶ್ವರದ ದೈಗುಳಿಯ ಶ್ರೀಸಾಯಿ ಸೇವಾಶ್ರಮವನ್ನು ಸಂಪರ್ಕಿಸಿದಾಗ ಅದರ ಮುಖ್ಯಸ್ಥರು ರವಿ ಸಿಂಗ್‌ನಿಗೆ ಆಶ್ರಯ ನೀಡಲು ಒಪ್ಪಿದ ಹಿನ್ನಲೆಯಲ್ಲಿ ವಿಶು ಶೆಟ್ಟಿ ಅವರು ಆತನನ್ನು ಬುಧವಾರ ಆಶ್ರಮಕ್ಕೆ ದಾಖಲಿಸಿದ್ದಾರೆ.

Udupi; ಮಕ್ಕಳ ವಿರುದ್ಧ ದೂರು ನೀಡಲು ಧರ್ಮಸ್ಥಳಕ್ಕೆ ಹೊರಟಿದ್ದ ವೃದ್ಧನ ರಕ್ಷಣೆ

ಮಗನನ್ನು ಸ್ವೀಕರಿಸಲು ಒಪ್ಪದ ಯುವಕನ ತಂದೆಯ ಮೇಲೆ ಸಂಬಂಧಪಟ್ಟ ಇಲಾಖೆಗಳು ಕಾನೂನು ಕ್ರಮ ಜರುಗಿಸಿ ಯುವಕನನ್ನು ಹಸ್ತಾಂತರಿಸಬೇಕು ಎಂದು ವಿಶು ಶೆಟ್ಟಿ ಆಗ್ರಹಿಸಿದ್ದಾರೆ. ಈ ಬಗ್ಗೆ ಜಿಲ್ಲಾಡಳತ ಹಾಗೂ ಸಂಬಂಧಪಟ್ಟ ಇಲಾಖೆಗಳಿಗೆ ಮನವಿ ಸಲ್ಲಿಸುವುದಾಗಿ ಅವರು ತಿಳಿಸಿದ್ದಾರೆ.ಸೇವಾ ಕಾರ್ಯದಲ್ಲಿ ಪ್ರದೀಪ್ ಅಜ್ಜರಕಾಡು ಹಾಗೂ ರಾಮದಾಸ್ ಪಾಲನ್ ಉದ್ಯಾವರ ಸಹಕರಿಸಿದ್ದರು.