* ಹಾವೇರಿ ಜಿಲ್ಲೆಯ ಶಿಗ್ಗಾಂವಿ ಪಟ್ಟಣದಲ್ಲಿ ನಡೆದ ಘಟನೆ* ತನ್ನ ಸೀರೆಯಿಂದ ನೇಣು ಹಾಕಿಕೊಂಡ ಮಾನಸಿಕ ಅಸ್ವಸ್ಥ ವೃದ್ಧೆ* ಈ ಸಂಬಂಧ ಶಿಗ್ಗಾಂವಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು
ಶಿಗ್ಗಾಂವಿ(ಆ.04): ಮಾನಸಿಕ ಅಸ್ವಸ್ಥ ವೃದ್ಧೆಯೊಬ್ಬರು ನೇಣಿಗೆ ಶರಣಾದ ಘಟನೆ ಪಟ್ಟಣದ ಅಂಬೇಡ್ಕರ್ ಓಣಿಯ ಮನೆಯೊಂದರಲ್ಲಿ ಸಂಭವಿಸಿದೆ. ನೇಣಿಗೆ ಶರಣಾದ ವೃದ್ಧ ಮಹಿಳೆಯನ್ನು ವಿಜಯಲಕ್ಷ್ಮಿ ಕೋಂ ರಾಮಪ್ಪ ಧಾರವಾಡ (65) ಎಂದು ತಿಳಿದು ಬಂದಿದೆ.
Add Asianetnews Kannada as a Preferred Source

ಮೃತ ವೃದ್ಧೆ ಮಾನಸಿಕ ಅಸ್ವಸ್ಥಳಾಗಿದ್ದು ಆಸ್ಪತ್ರೆಗೆ ತೋರಿಸಿದರೂ ಫಲಕಾರಿಯಾಗಿರಲಿಲ್ಲ. ಜೊತೆಗೆ ಊಟವನ್ನೂ ಮಾಡುತ್ತಿರಲಿಲ್ಲ, ಸುಮ್ಮನೆ ಇರುತ್ತಿದ್ದಳು. ಅಕೆಯನ್ನು ಮನೆಯವರೇ ಸಮಾಧಾನಪಡಿಸಿ ಊಟ ಮಾಡಿಸುತ್ತಿದ್ದರು.
3 ವರ್ಷದಲ್ಲಿ 24,000 ಮಕ್ಕಳ ಆತ್ಮಹತ್ಯೆ!
ಸೊಮವಾರ ಮನೆಯಲ್ಲಿ ಯಾರೂ ಇಲ್ಲದ ವೇಳೆ ತನ್ನ ಸೀರೆಯಿಂದ ನೇಣು ಹಾಕಿಕೊಂಡಿದ್ದಾಳೆ. ಶಿಗ್ಗಾಂವಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
