ವ್ಯಕ್ತಿ ಮೃತಪಟ್ಟ ಬಳಿಕ ಆಸ್ಪತ್ರೆಗೆ ದಾಖಲಾಗಲು ಕರೆ!
ವ್ಯಕ್ತಿಯೋರ್ವ ತೀವ್ರ ಅನಾರೋಗ್ಯದಿಂದ ಮೃತಪಟ್ಟ ಬಳಿಕ ಆತನ ಮನೆಗೆ ಕರೆ ಮಾಡಿದ ಆಸ್ಪತ್ರೆ ಸಿಬ್ಬಂದಿ ಆಸ್ಪತ್ರೆಗೆ ದಾಖಲಿಸುವಂತೆ ಸೂಚಿಸಿದ್ದಾರೆ.
ಮಂಡ್ಯ (ಆ.27): ಕೊರೋನಾ ಸೋಂಕಿನ ಜೊತೆಗೆ ಬಹು ಅಂಗಾಂಗ ವೈಫಲ್ಯದಿಂದ ವ್ಯಕ್ತಿಯೊಬ್ಬರು ಮೃತಪಟ್ಟ3 ದಿನದ ಬಳಿಕ ಆಸ್ಪತ್ರೆಗೆ ದಾಖಲಾಗುವಂತೆ ಮಿಮ್ಸ್ ಕೋವಿಡ್ ಕೇಂದ್ರದಿಂದ ದೂರವಾಣಿ ಕರೆ ಬಂದಿರುವ ವಿಲಕ್ಷಣ ಪ್ರಸಂಗವೊಂದು ಜರುಗಿದೆ.
ಕಿಡ್ನಿ, ಲಿವರ್ ವೈಫಲ್ಯ, ಶ್ವಾಸಕೋಶದ ತೊಂದರೆಯಿಂದ ಕಳೆದ ಬುಧವಾರ ಮಂಡ್ಯದ ಶ್ರೀನಿವಾಸಲು ಮಿಮ್ಸ್ ಆಸ್ಪತ್ರೆಗೆ ದಾಖಲಾಗಿದ್ದರು. ಚಿಕಿತ್ಸೆ ಫಲಕಾರಿಯಾಗದೆ ಶನಿವಾರ ಮುಂಜಾನೆ ಆಸ್ಪತ್ರೆಯಲ್ಲಿ ಅವರು ಮೃತಪಟ್ಟಿದ್ದರು. ರೋಗಿಯ ಸಂಬಂಧಿಕರು ಗಲಾಟೆ ಮಾಡಿದ ಬಳಿಕವಷ್ಟೇ ಸಂಜೆ ವೇಳೆಗೆ ಶವವನ್ನು ನೀಡಿದರು. ತಾಲೂಕಿನ ಸುಂಡಹಳ್ಳಿ ಬಳಿ ಕೊರೋನಾ ಸೋಂಕಿನಿಂದ ಮೃತಪಟ್ಟವರಿಗಾಗಿ ಗುರುತಿಸಲಾಗಿದ್ದ ಸ್ಥಳದಲ್ಲಿ ಅಂತ್ಯ ಸಂಸ್ಕಾರವನ್ನೂ ನೆರವೇರಿಸಲಾಗಿತ್ತು.
ಬೆಂಗಳೂರು: 17 ದಿನದಲ್ಲಿ 50 ಕೊರೋನಾ ಸೋಂಕಿತ ಗರ್ಭಿಣಿಯರಿಗೆ ಹೆರಿಗೆ...
ಸೋಮವಾರ ಮಧ್ಯಾಹ್ನ ಮೃತ ಶ್ರೀನಿವಾಸಲು ಅವರ ಮನೆಯವರಿಗೆ ಮಿಮ್ಸ್ನ ಕೋವಿಡ್ ಸಿಬ್ಬಂದಿ ದೂರವಾಣಿ ಕರೆ ಮಾಡಿ ಶ್ರೀನಿವಾಸಲು ಅವರಿಗೆ ಸೋಂಕು ದೃಢಪಟ್ಟಿದೆ. ತಕ್ಷಣವೇ ಕೋವಿಡ್ ಆಸ್ಪತ್ರೆಗೆ ದಾಖಲಾಗುವಂತೆ ಸೂಚಿಸಿದ್ದು ಅಚ್ಚರಿಗೆ ಕಾರಣವಾಯಿತು.
ಇದರಿಂದ ಸಿಡಿಮಿಡಿಗೊಂಡ ಮನೆಯವರು ಅವರಾಗಲೇ ಮೃತಪಟ್ಟು ಮೂರು ದಿನ ಕಳೆದಿದೆ. ಈಗ ಎಲ್ಲಿಂದ ಕರೆತಂದು ಆಸ್ಪತ್ರೆಗೆ ದಾಖಲು ಮಾಡುವುದು ಎನ್ನುವಷ್ಟರಲ್ಲಿ ಸಿಬ್ಬಂದಿ ಮೊಬೈಲ್ ಸಂಪರ್ಕ ಕಡಿತಗೊಳಿಸಿದರು.
ಸೆಪ್ಟಂಬರ್ ಅಂತ್ಯದೊಳಗೆ ರಾಜ್ಯದಲ್ಲಿ ಕೊರೋನಾ ಸೋಂಕಿರ ಸಂಖ್ಯೆ 6 ಲಕ್ಷಕ್ಕೆ?
"