ನಿಷ್ಪಕ್ಷಪಾತ ತನಿಖೆ ಮಾಡಲು ಬಿಡದೇ ತನಿಖೆಯಲ್ಲಿ ರಾಜಕಾರಣ ಸೇರಿಸಲಾಗುತ್ತಿದೆ| ಅನವಶ್ಯಕವಾಗಿ ಆಡಳಿತ ಸರ್ಕಾರಗಳ ವಿರುದ್ಧ ಆರೋಪ ಮಾಡಿ ಪ್ರಯೋಜನವಿಲ್ಲ| ಈ ತನಿಖೆಯಲ್ಲಿ ಸತ್ಯಾಸತ್ಯತೆ ಹೊರಗೆ ಬರುತ್ತದೆ, ವಿನಯ್‌ ಕುಲಕರ್ಣಿ ನಿರಪರಾಧಿಯಾಗಿದ್ದರೆ ಹೊರಗೆ ಬರುತ್ತಾರೆ: ಪಾಟೀಲ| 

ಧಾರವಾಡ(ನ.12): ಮಾಜಿ ಸಚಿವ ವಿನಯ್‌ ಕುಲಕರ್ಣಿ ಅವರ ಬಂಧನದ ಮುಜುಗರ ತಪ್ಪಿಸಿಕೊಳ್ಳಲು ಕಾಂಗ್ರೆಸ್‌ ಮುಖಂಡರು ಬಿಜೆಪಿ ವಿರುದ್ಧ ಮಾತನಾಡುತ್ತಿದ್ದು ಇದೆಲ್ಲವೂ ಸತ್ಯಕ್ಕೆ ದೂರವಾದುದು ಎಂದು ಕೃಷಿ ಸಚಿವ ಬಿ.ಸಿ. ಪಾಟೀಲ ಹೇಳಿದ್ದಾರೆ. 

Add Asianetnews Kannada as a Preferred SourcegooglePreferred

ಬುಧವಾರ ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಿಬಿಐ ಸಾಂವಿಧಾನಿಕ ಸಂಸ್ಥೆ ಎಂಬುದು ಗೊತ್ತಿರುವ ಮಾತು. ನಿಷ್ಪಕ್ಷಪಾತ ತನಿಖೆ ಮಾಡಲು ಬಿಡದೇ ತನಿಖೆಯಲ್ಲಿ ರಾಜಕಾರಣ ಸೇರಿಸಲಾಗುತ್ತಿದೆ. ಅನವಶ್ಯಕವಾಗಿ ಆಡಳಿತ ಸರ್ಕಾರಗಳ ವಿರುದ್ಧ ಆರೋಪ ಮಾಡಿ ಪ್ರಯೋಜನವಿಲ್ಲ. ಈ ತನಿಖೆಯಲ್ಲಿ ಸತ್ಯಾಸತ್ಯತೆ ಹೊರಗೆ ಬರುತ್ತದೆ. ವಿನಯ ಕುಲಕರ್ಣಿ ಅವರು ನಿರಪರಾಧಿಯಾಗಿದ್ದರೆ ಹೊರಗೆ ಬರುತ್ತಾರೆ ಎಂದು ತಿಳಿಸಿದ್ದಾರೆ. 

ಜೈಲಲ್ಲಿ ವಿನಯ್‌ ಕುಲಕರ್ಣಿಗೆ ಸಾಮಾನ್ಯ ಕೈದಿಯ ಸೌಲಭ್ಯ

ಸಚಿವ ಸಂಪುಟ ವಿಸ್ತರಣೆ ವಿಚಾರ ಕುರಿತು ಪ್ರತಿಕ್ರಿಯೆ ನೀಡಿದ ಅವರು, ಈ ವಿಷಯ ಮುಖ್ಯಮಂತ್ರಿಗಳಿಗೆ ಬಿಟ್ಟ ವಿಚಾರ. ಅವರು ಮಾತ್ರ ನೀಡಿದ ಮಾತು ತಪ್ಪುವುದಿಲ್ಲ ಎಂಬುದು ಸತ್ಯ ಎಂದ ಅವರು, ಉಪ ಚುನಾವಣೆ ಹಾಗೂ ಪರಿಷತ್‌ ಚುನಾವಣೆಯಲ್ಲಿ ರಾಜ್ಯದ ಜನರು ಸರ್ಕಾರ ಹಾಗೂ ಬಿಎಸ್‌ವೈ ಆಡಳಿತಕ್ಕೆ ಪ್ರಮಾಣಪತ್ರ ನೀಡಿದ್ದಾರೆ ಎಂದು ಹೇಳಿದ್ದಾರೆ.