ಮತ್ತೊಮ್ಮೆ ಮಾನವೀಯತೆ ಮೆರೆದ ಸಚಿವ ಜಮೀರ್ ಅಹಮದ್
ಕೆಲ ದಿನಗಳ ಹಿಂದಷ್ಟೆ ಬೆಂಗಳೂರಿನ ಕಾವೇರಿ ಚಿತ್ರ ಮಂದಿರದ ಬಳಿ ಅಪಘಾತಗೊಂಡ ದಂಪತಿಯನ್ನು ಸಚಿವ ಜಮೀರ್ ಅಹಮದ್ ಖಾನ್ ಆಂಬ್ಯುಲೆನ್ಸ್ ಮೂಲಕ ಆಸ್ಪತ್ರೆಗೆ ಸೇರಿಸಿ ಮಾನವೀಯತೆ ಮೆರೆದಿದ್ದರು. ಈಗ ಗದಗ ಜಿಲ್ಲೆಯಲ್ಲಿ ಅಪಘಾತಗೊಂಡ ಮೂವರನ್ನು ಸಾರ್ವಜನಿಕರ ಸಹಾಯದ ಮೂಲಕ ಆಂಬ್ಯುಲೆನ್ಸ್'ನಲ್ಲಿ ಸ್ಥಳೀಯ ಆಸ್ಪತ್ರೆಗೆ ಸೇರಿಸಿ ಹೃದಯ ವೈಶಾಲ್ಯತೆ ಮೆರೆದಿದ್ದಾರೆ.
- ಗದಗ ಜಿಲ್ಲೆಯಲ್ಲಿ ಅಪಘಾತದಲ್ಲಿ ಗಾಯಗೊಂಡ ಮೂವರನ್ನು ಸಚಿವ ಜಮೀರ್ ಅಹಮದ್ ಖಾನ್ ಆಂಬ್ಯುಲೆನ್ಸ್ ಮೂಲಕ ಸ್ಥಳೀಯ ಆಸ್ಪತ್ರೆಗೆ ಸೇರಿಸಿದ್ದಾರೆ
- ಕೆಲ ದಿನಗಳ ಹಿಂದಷ್ಟೆ ಬೆಂಗಳೂರಿನ ಕಾವೇರಿ ಚಿತ್ರಮಂದಿರದ ಬಳಿ ವ್ಯಕ್ತಿಯೊಬ್ಬರನ್ನು ಆಸ್ಪತ್ರೆಗೆ ದಾಖಲಿಸಿದ್ದರು