ನೂರಕ್ಕೆ ನೂರರಷ್ಟುನಾವೆಲ್ಲರೂ ರಮೇಶ್‌ ಜಾರಕಿಹೊಳಿ ಜೊತೆಗೆ ಇದ್ದೇವೆ ನಗರಾಭಿವೃದ್ಧಿ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಬಿ.ಎ.ಬಸವರಾಜ ಭೈರತಿ ಸ್ಪಷ್ಟನೆ 17 ಶಾಸಕರು ಅತೃಪ್ತರಾಗಿದ್ದಾರೆಂಬ ಮಾಜಿ ಸಚಿವ ಎಚ್‌.ಎಂ.ರೇವಣ್ಣ ಹೇಳಿಕೆಗೆ ತಿರುಗೇಟು

ದಾವಣಗೆರೆ (ಜೂ.30): ನೂರಕ್ಕೆ ನೂರರಷ್ಟುನಾವೆಲ್ಲರೂ ರಮೇಶ್‌ ಜಾರಕಿಹೊಳಿ ಜೊತೆಗೆ ಇದ್ದೇವೆ ಎಂದು ನಗರಾಭಿವೃದ್ಧಿ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಬಿ.ಎ.ಬಸವರಾಜ ಭೈರತಿ ಸ್ಪಷ್ಟಪಡಿಸಿ​ದ್ದಾ​ರೆ. 

‘ಉದ್ವೇಗದಲ್ಲಿ ರಮೇಶ್‌ ಜಾರಕಿಹೊಳಿ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವ ಮಾತನ್ನಾಡಿರಬಹುದಷ್ಟೇ. ಬಾಲಚಂದ್ರ ಜಾರಕಿಹೊಳಿ ಸೇರಿ ಸಹೋದರರು ರಮೇಶ್‌ ಅವರನ್ನು ಸಮಾಧಾನಪಡಿಸಿದ್ದಾರೆ. ರಮೇಶ್‌ ಶೀಘ್ರ ಆರೋಪ ಮುಕ್ತ​ರಾ​ಗಿ ಸಚಿವ​ರಾ​ಗು​ತ್ತಾ​ರೆಂಬ ವಿಶ್ವಾಸವಿದೆ. ಈಗಲೂ ರಮೇಶ್‌ ಜಾರಕಿಹೊಳಿ ಜೊತೆಗೆ ನಾವೆಲ್ಲರೂ ಇದ್ದೇವೆ ಎಂದಿದ್ದಾರೆ.

ಜಾರಕಿಹೊಳಿ ಕೇಸ್‌ ವಿಚಾರಣೆ ನಡೆಸ್ತಿದ್ದ ಸೌಮೆಂದು ಮತ್ತೆ 1 ತಿಂಗಳು ರಜೆ..! ...

17 ಶಾಸಕರು ಅತೃಪ್ತರಾಗಿದ್ದಾರೆಂಬ ಮಾಜಿ ಸಚಿವ ಎಚ್‌.ಎಂ.ರೇವಣ್ಣ ಹೇಳಿಕೆಗೆ ತಿರುಗೇಟು ನೀಡಿರುವ ಭೈರತಿ, ‘ಅವರು ಜ್ಯೋತಿಷ್ಯಾ ಓದಿದ್ದಾರಾ? ನಮ್ಮೆಲ್ಲಾ 17 ಶಾಸಕರು, ಸಚಿವರಿಗೆ ಅಸಮಾಧಾನ ಇದೆಯೋ, ಇಲ್ಲವೋ ಅಂತಾ ರೇವಣ್ಣಗೆ ಹೇಗೆ ಗೊತ್ತಾ’ ಎಂದು ಪ್ರಶ್ನಿಸಿದ್ದಾರೆ.