ಮಹದಾಯಿ ನೀರು ಬಳಕೆಗೆ ಗೆಜೆಟ್ ನೋಟಿಫೀಕೇಶನ್ ಹೊರಡಿಸಿದ ಕೇಂದ್ರ ಸರ್ಕಾರ| ಸರ್ವೋಚ್ಚ ನ್ಯಾಯಾಲಯದ ನಿರ್ದೇಶನದಂತೆ ಗೆಜೆಟ್ ನೋಟಿಫೀಕೇಶನ್ ಹೊರಡಿಸಿದ ಕೇಂದ್ರ|ಕೇಂದ್ರ ಸರಕಾರ ಗೆಜೆಟ್ ಹೊರಡಿಸೋ ಮೂಲಕ ಹೋರಾಟಕ್ಕೆ ನ್ಯಾಯ|
ಗದಗ(ಫೆ.28): ಸರ್ವೋಚ್ಚ ನ್ಯಾಯಾಲಯದ ನಿರ್ದೇಶನದಂತೆ ಮಹದಾಯಿ ನೀರು ಬಳಕೆಗೆ ಕೇಂದ್ರ ಸರ್ಕಾರ ಗೆಜೆಟ್ ನೋಟಿಫೀಕೇಶನ್ ಹೊರಡಿಸಿರುವುದು ಉತ್ತರ ಕರ್ನಾಟಕದ ಬಹು ದಿನಗಳ ಹೋರಾಟಕ್ಕೆ ಸಂದ ಜಯವಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಸಿ.ಸಿ. ಹೇಳಿದ್ದಾರೆ.
Add Asianetnews Kannada as a Preferred Source

ಮಾಧ್ಯಮದವರ ಮಾತನಾಡಿದ ಅವರು, ಮುಖ್ಯಮಂತ್ರಿ ಯೂಡಿಯೂರಪ್ಪ ಹುಟ್ಟುಹಬ್ಬದ ದಿನದಂದೇ ಪ್ರಧಾನಿ ಮೋದಿ ಗಿಫ್ಟ್ ನೀಡಿದ್ದಾರೆ. ಮಹದಾಯಿ ನದಿ ನೀರು ಹಂಚಿಕೆ ವಿವಾದ 13.5 ಟಿಎಂಸಿ ನೀರು ಬಳಕೆಗೆ ನ್ಯಾಯಾಲಯ ಆದೇಶ ಹೊರಡಿಸಿತ್ತು.
ಮಹದಾಯಿ: ಕರ್ನಾಟಕಕ್ಕೆ ಜಯ, ಗೋವಾದ ತಕರಾರಿಗೆ ಮಣೆ ಹಾಕದ ಕೇಂದ್ರ!
ಇದೀಗ ಕೇಂದ್ರ ಸರಕಾರ ಗೆಜೆಟ್ ಹೊರಡಿಸೋ ಮೂಲಕ ಹೋರಾಟಕ್ಕೆ ನ್ಯಾಯ ಒದಗಿಸುರುವುದಕ್ಕೆ ಸಚಿವ ಪಾಟೀಲರು ಕೇಂದ್ರಕ್ಕೆ ಅಭಿನಂದನೆ ಸಲ್ಲಿಸಿದ್ದಾರೆ.
