ಕೊರೋನಾ ವೈರಸ್ ನಿಯಂತ್ರಣ ಹಿನ್ನಲೆ ಜಿಲ್ಲೆಯಲ್ಲಿ ನಿರಂತರವಾಗಿ ಪ್ರವಾಸ ಮಾಡುತ್ತಿದ್ದ ಜಿಲ್ಲಾ ಉಸ್ತುವಾರಿ ಸಚಿವ ಸಿ.ಟಿ. ರವಿ ಅವರು ಮಂಗಳವಾರ ಕೊಂಚ ರಿಲ್ಯಾಕ್ಸ್ ಮೂಡ್ನಲ್ಲಿದ್ದರು.
ಚಿಕ್ಕಮಗಳೂರು(ಏ.08): ಕೊರೋನಾ ವೈರಸ್ ನಿಯಂತ್ರಣ ಹಿನ್ನಲೆ ಜಿಲ್ಲೆಯಲ್ಲಿ ನಿರಂತರವಾಗಿ ಪ್ರವಾಸ ಮಾಡುತ್ತಿದ್ದ ಜಿಲ್ಲಾ ಉಸ್ತುವಾರಿ ಸಚಿವ ಸಿ.ಟಿ. ರವಿ ಅವರು ಮಂಗಳವಾರ ಕೊಂಚ ರಿಲ್ಯಾಕ್ಸ್ ಮೂಡ್ನಲ್ಲಿದ್ದರು.
Add Asianetnews Kannada as a Preferred Source

ನಗರದ ರಾಮನಹಳ್ಳಿ ಬಡಾವಣೆಯಲ್ಲಿ ಫಾರಂ ಹೌಸ್ ಇದ್ದು, ಇಲ್ಲಿ ಎರಡು ಎಕರೆ ತೆಂಗಿನ ತೋಟ ಇದೆ. ಸೋಮವಾರ ಈ ಭಾಗದಲ್ಲಿ ಸುಮಾರು ಅರ್ಧ ಗಂಟೆಗೂ ಹೆಚ್ಚು ಕಾಲ ಮಳೆ ಬಂದಿದ್ದು, ಭೂಮಿ ಹದವಾಗಿದೆ.
ಮೂರು ಚಿರತೆಗಳು ಪ್ರತ್ಯಕ್ಷ: ಸ್ಥಳೀಯರಲ್ಲಿ ಆತಂಕ
ಮಂಗಳವಾರ ಬೆಳಗ್ಗೆ ಸಿ.ಟಿ. ರವಿ ಅವರು ಟ್ರ್ಯಾಕ್ಟರ್ ಮೂಲಕ ಭೂಮಿಯನ್ನು ಉಳುಮೆ ಮಾಡುತ್ತ ಕೃಷಿ ಚಟುವಟಿಕೆಯಲ್ಲಿ ಪಾಲ್ಗೊಂಡಿದ್ದರು. ಚಿಕ್ಕಮಗಳೂರಿನಲ್ಲಿರುವ ತಮ್ಮ ಫಾರಂ ಹೌಸ್ನಲ್ಲಿರುವ ತೆಂಗಿನ ತೋಟದಲ್ಲಿ ಸಚಿವ ಸಿ.ಟಿ. ರವಿ ಅವರು ಟ್ರ್ಯಾಕ್ಟರ್ ಮೂಲಕ ಉಳುಮೆ ಮಾಡುತ್ತಿರುವುದು.
