*  ಸಂತ್ರಸ್ತೆ ಈವರೆಗೂ ದೂರು ಹಾಗೂ ಹೇಳಿಕೆ ನೀಡಿಲ್ಲ*  ಪೊಲೀಸರಿಗೆ ಅಭಿನಂದನೆ ಸಲ್ಲಿಸಿದ ಆಚಾರ್‌ *  ಕಾನೂನು ಅಡಿ ಆರೋಪಿಗಳಿಗೆ ಶಿಕ್ಷೆ

ಕೊಪ್ಪಳ(ಆ.30): ಮೈಸೂರು ಗ್ಯಾಂಗ್‌ರೇಪ್‌ ಪ್ರಕರಣದಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಿಂದ ಏನೇನು ಕೆಲಸಗಳು ಆಗಬೇಕಿತ್ತೋ ಆ ಎಲ್ಲ ಕೆಲಸಗಳನ್ನು ಈಗಾಗಲೇ ಮಾಡಲಾಗಿದೆ ಎಂದು ಗಣಿ ಮತ್ತು ಭೂವಿಜ್ಞಾನ ಇಲಾಖೆ ಮತ್ತು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವ ಹಾಲಪ್ಪ ಆಚಾರ್‌ ಹೇಳಿದ್ದಾರೆ.

Add Asianetnews Kannada as a Preferred SourcegooglePreferred

ಯಲಬುರ್ಗಾ ತಾಲೂಕಿನ ಮಸಬಹಂಚಿನಾಳ ಗ್ರಾಮದಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿ, ಪ್ರಕರಣದಲ್ಲಿ ಸಂತ್ರಸ್ತೆ ಈವರೆಗೂ ದೂರು ಹಾಗೂ ಹೇಳಿಕೆಯನ್ನು ನೀಡಿಲ್ಲ. ಇದಕ್ಕೆ ಆಕೆ ಘಟನೆಯಲ್ಲಿ ತೀವ್ರ ಆಘಾತಕ್ಕೊಳಗಾಗಿರುವುದೇ ಕಾರಣ ಇರಬಹುದು ಎಂದರು.

ಕೊಪ್ಪಳ: ವಿವಾದಾತ್ಮಕ ಹೇಳಿಕೆ, ರಾಯರಡ್ಡಿ ವಿರುದ್ಧ ಆಕ್ರೋಶ

ಆದರೂ ಈಗಾಗಲೇ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ಐದು ಮಂದಿ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಇದಕ್ಕಾಗಿ ಪೊಲೀಸರಿಗೆ ಅಭಿನಂದನೆ ಸಲ್ಲಿಸುತ್ತೇನೆ. ಮುಂದೆ ಕಾನೂನು ಅಡಿ ಆರೋಪಿಗಳಿಗೆ ಶಿಕ್ಷೆ ಕೊಡಿಸಲು ಖಂಡಿತವಾಗಿಯೂ ಸ್ಪಂದಿಸುತ್ತಾರೆ ಎನ್ನುವ ವಿಶ್ವಾಸವಿದೆ ಎಂದರು.