ಬೆಳಗಾವಿ ಉಪಚುನಾವಣೆ| ಬಹುಶಃ ಕೆಲವು ದಿನಗಳಲ್ಲಿ ರಮೇಶ ಮತ್ತು ಬಾಲಚಂದ್ರ ಜಾರಕಿಹೊಳಿ ಪ್ರಚಾರಕ್ಕೆ ಬರಲಿದ್ದಾರೆ| ಪಕ್ಷದ ಅಭ್ಯರ್ಥಿ ಪರವಾಗಿ ಪ್ರಚಾರಕ್ಕೆ ಬರುವುದಾಗಿಯೂ ಭರವಸೆ ನೀಡಿದ ಜಾರಕಿಹೊಳಿ ಬ್ರದರ್ಸ್‌|  4 ಲಕ್ಷ ಮತಗಳ ಅಂತರದಿಂದ ಬಿಜೆಪಿ ಅಭ್ಯರ್ಥಿ ಗೆಲವು ಸಾಧಿಸುತ್ತಾರೆ: ಜಗದೀಶ ಶೆಟ್ಟರ್‌| 

ಧಾರವಾಡ(ಏ.02):  ಈಶ್ವರಪ್ಪ ಅವರು ನೀಡಿದ ದೂರನ್ನು ಮುಖ್ಯಮಂತ್ರಿ ಬಗ್ಗೆಯೇ ಎಂದು ತಿಳಿಯಬಾರದು. ಪಕ್ಷದಲ್ಲಿನ ಭಿನ್ನಾಭಿಪ್ರಾಯಗಳ ಬಗ್ಗೆ ಪಕ್ಷದಲ್ಲಿ ಆಂತರಿಕವಾಗಿ ಚರ್ಚಿಸಿ ಬಗೆಹರಿಸಲಾಗುವುದು ಎಂದು ಉಸ್ತುವಾರಿ ಸಚಿವ ಜಗದೀಶ ಶೆಟ್ಟರ್‌ ಹೇಳಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಗುರುವಾರ ತಮ್ಮನ್ನು ಭೇಟಿಯಾದ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ವಿಷಯವಾಗಿ ಈಶ್ವರಪ್ಪ ಅವರೊಂದಿಗೆ ಮಾತನಾಡಲಾಗುವುದು ಎಂದರು. ಇನ್ನು ಈಶ್ವರಪ್ಪ ಅವರು ರಾಜೀನಾಮೆ ಕೊಡಬೇಕೆಂದು ಸಚಿವರಾದ ಸುಧಾಕರ, ಬಿ.ಸಿ. ಪಾಟೀಲ ಹಾಗೂ ರೇಣುಕಾಚಾರ್ಯ ಇತರ 40 ಶಾಸಕರಿಂದ ಸಹಿ ಸಂಗ್ರಹ ಮಾಡಿದ್ದಾರೆಂಬ ವಿಚಾರ ಕುರಿತು ಪ್ರತಿಕ್ರಿಯೆ ನೀಡಿದ ಶೆಟ್ಟರ್‌, ಈ ಬಗ್ಗೆ ತಮಗೆ ಮಾಹಿತಿ ಇಲ್ಲ. ಇದ್ದರೂ ಇವೆಲ್ಲವನ್ನೂ ಪಕ್ಷದ ವೇದಿಕೆಯಲ್ಲಿಯೇ ಬಗೆಹರಿಸಿಕೊಳ್ಳುತ್ತೇವೆ ಎಂದರು.

ದೇಶದ ಆಹಾರ ಖಾಸಗಿ ವ್ಯಕ್ತಿಗಳ ತಿಜೋರಿಯಲ್ಲಿ ಭದ್ರ: ಟಿಕಾಯತ್‌

ಬೆಳಗಾವಿ ಉಪಚುನಾವಣೆಯಲ್ಲಿ ರಮೇಶ ಮತ್ತು ಬಾಲಚಂದ್ರ ಜಾರಕಿಹೊಳಿಗೆ ಪ್ರಚಾರಕ್ಕೆ ಬರಲು ಹೇಳಿದ್ದೇವೆ ಎಂದ ಶೆಟ್ಟರ್‌, ಬಹುಶಃ ಕೆಲವು ದಿನಗಳಲ್ಲಿ ಅವರು ಪ್ರಚಾರಕ್ಕೆ ಬರಲಿದ್ದಾರೆ. ಕೇಸ್‌ ನಡೆದ ಹಿನ್ನೆಲೆಯಲ್ಲಿ ಅವರಿಗೆ ಬರಲು ಆಗಿಲ್ಲ. ನಾನು ಅವರೊಂದಿಗೆ ಈ ಬಗ್ಗೆ ಮಾತನಾಡಿದ್ದೇನೆ. ಪಕ್ಷದ ಅಭ್ಯರ್ಥಿ ಪರವಾಗಿ ಪ್ರಚಾರಕ್ಕೆ ಬರುವುದಾಗಿಯೂ ಭರವಸೆ ನೀಡಿದ್ದಾರೆ. ಈ ಕ್ಷೇತ್ರದಿಂದ ಅತ್ಯಂತ ಹೆಚ್ಚಿನ ಅಂದರೆ 4 ಲಕ್ಷ ಮತಗಳ ಅಂತರದಿಂದ ಪಕ್ಷದ ಅಭ್ಯರ್ಥಿ ಗೆಲವು ಸಾಧಿಸುತ್ತಾರೆ ಎಂದು ಭರವಸೆ ವ್ಯಕ್ತಪಡಿಸಿದರು.