ಬಸನಗೌಡ ಪಾಟೀಲ್ ಯತ್ನಾಳ್ ಯಾಕೆ ದೊರೆಸ್ವಾಮಿ ಅವರ ಬಗ್ಗೆ ಈ ರೀತಿಯ ಹೇಳಿಕೆ ನೀಡಿದ್ದಾರೋ ನನಗೆ ಗೊತ್ತಿಲ್ಲ ಎಂದು ಸಚಿವ ಮಾಧುಸ್ವಾಮಿ ಹೇಳಿದರು.
ಹಾಸನ [ಫೆ.28]: ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಯಾವ ಸಂದರ್ಭದಲ್ಲಿ ಸ್ವಾತಂತ್ರ್ಯ ಹೋರಾಟಗಾರ ದೊರೆಸ್ವಾಮಿ ಬಗ್ಗೆ ಆ ರೀತಿಯ ಹೇಳಿಕೆ ಕೊಟ್ಟಿದ್ದಾರೋ ಗೊತ್ತಿಲ್ಲ ಎಂದು ಕಾನೂನು ಸಚಿವ ಜೆ.ಸಿ.ಮಾಧುಸ್ವಾಮಿ ಪ್ರತಿಕ್ರಿಯಿಸಿದ್ದಾರೆ.
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ
ನಗರದಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹೋರಾಟಗಾರರ ದೊರೆಸ್ವಾಮಿ ಅವರ ಜೊತೆ ನಾನು ಅನೇಕ ಹೋರಾಟಗಳಲ್ಲಿ ಭಾಗವಹಿಸಿದ್ದೇನೆ. ಅವರ ಬಗ್ಗೆ ನನಗೆ ಅಪಾರ ಗೌರವ ಇದೆ ಎಂದಷ್ಟೇ ಹೇಳಿದರು. ಹಾಸನ ಜಿಲ್ಲಾಡಳಿತ ಸತ್ತಿದೆ.
ದೊರೆಸ್ವಾಮಿ ನಾಲಿಗೆ ಬಿಗಿ ಹಿಡಿದು ಮಾತನಾಡಲಿ: ಸಚಿವ ಸೋಮಣ್ಣ.
ಖಾಸಗಿ ಲೇಔಟ್ದಾರರ ಹಾವಳಿ ಹೆಚ್ಚಾಗಿದೆ. ಜಿಲ್ಲೆಯ ಅಭಿವೃದ್ಧಿ ಅನುದಾನ ನೀಡುತ್ತಿಲ್ಲ ಎಂಬ ಮಾಜಿ ಸಚಿವ ಎಚ್.ಡಿ.ರೇವಣ್ಣ ಆರೋಪಕ್ಕೆ ಪ್ರತಿಕ್ರಿಯಿಸಿದ ಸಚಿವ ಮಾಧುಸ್ವಾಮಿ, ಈ ಬಗ್ಗೆ ಜಿಲ್ಲಾಡಳಿತದ ಅಧಿಕಾರಿಗಳ ಜೊತೆ ಚರ್ಚಿಸಲಾಗುವುದು ಎಂದರು.
