ಪಾರಿವಾಳಗಳಿಗೆ ಧಾನ್ಯವಿತರಿಸಿದ ಕಂದಾಯ ಸಚಿವ ಆರ್.ಅಶೋಕ್| ನಗರದ ರೇಸ್ಕೋರ್ಸ್ ಬಳಿ ಬರುವ ಸಾವಿರಾರು ಪಾರಿವಾಳಗಳಿಗೆ ಆಹಾರ ಧಾನ್ಯ ನೀಡಿದ ಕಂದಾಯ ಸಚಿವ| ಮೂಕ ಪಕ್ಷಿಗಳ ಹಸಿವು ನೀಗಿಸಿದ ಅಶೋಕ್|
ಬೆಂಗಳೂರು(ಏ.10): ಲಾಕ್ಡೌನ್ನಿಂದ ಮನುಷ್ಯ ಅಷ್ಟೇ ಅಲ್ಲದೆ ಪ್ರಾಣಿ, ಪಕ್ಷಿಗಳೂ ಕೂಡ ಸಂಕಷ್ಟ ಅನುಭವಿಸುತ್ತಿವೆ. ನಗರದಲ್ಲಿ ನೆಲೆಸಿರುವ ಸಾವಿರಾರು ಸಂಖ್ಯೆಯಲ್ಲಿರುವ ಪಾರಿವಾಳಗಳೂ ಕೂಡ ತಿನ್ನಲು ಏನೂ ಸಿಗದೆ ಪರದಾಡುತ್ತಿವೆ. ಹೀಗಾಗಿ ಕಂದಾಯ ಸಚಿವ ಆರ್.ಅಶೋಕ್ ಅವರು ಆಹಾರ ಸಿಗದೆ ತತ್ತರಿಸುವ ಪಾರಿವಾಳಗಳಿಗೆ ಧಾನ್ಯ ವಿತರಿಸಿದ್ದಾರೆ.
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ
ಹೌದು, ನಗರದ ರೇಸ್ಕೋರ್ಸ್ ಬಳಿ ಬರುವ ಸಾವಿರಾರು ಪಾರಿವಾಳಗಳಿಗೆ ಸಚಿವ ಆರ್.ಅಶೋಕ್ ಆಹಾರ ನೀಡುವ ಮೂಲಕ ಮಾನವೀಯತೆ ಮೆರೆದಿದ್ದಾರೆ. ಪಾರಿವಾಳಗಳಿಗೆ 5 ಮೂಟೆ ಆಹಾರ ಧಾನ್ಯ ನೀಡಿದ್ದಾರೆ.
ಕೊರೋನಾದಿಂದ 50 ಕೋಟಿ ಜನ ಬಡತನದ ಕೂಪಕ್ಕೆ..!
ಹೈಗ್ರೌಂಡ್ ಸಂಚಾರಿ ಪೊಲೀಸರಿಗೆ 5 ಮೂಟೆ ಆಹಾರ ಧಾನ್ಯ ನೀಡಿ ಪ್ರತಿ ದಿನ ಪಾರಿವಾಳಗಳಿಗೆ ಹಾಕಲು ಸೂಚನೆ ನೀಡಿದ್ದಾರೆ. ಲಾಕ್ಡೌನ್ ಹಿನ್ನೆಲೆಯಯಲ್ಲಿ ಆಹಾರಕ್ಕಾಗಿ ಪಾರಿವಾಳಗಳು ಪರದಾಡುತ್ತಿದ್ದವು.ಇದನ್ನ ಗಮನಿಸಿದ ಅಶೋಕ್ ಅವರು ಆಹಾರ ಧಾನ್ಯ ಮೂಕ ಪಕ್ಷಿಗಳ ಹಸಿವು ನೀಗಿಸುತ್ತಿದ್ದಾರೆ.
