Asianet Suvarna News Asianet Suvarna News

ಗೆಳೆಯ ಅಂಗಡಿ ಸಾವಿ​ನಿಂದ ವಿಚ​ಲಿ​ತ​ನಾ​ಗಿ​ದ್ದೇನೆ: ಜಾರ​ಕಿ​ಹೊ​ಳಿ

ಅಂಗ​ಡಿ​ಯ​ವ​ರಿಗೆ ಕಾಂಗ್ರೆಸ್‌, ಬಿಜೆಪಿಯವರು ಯಾರೂ ವಿರೋಧ ಮಾಡುತ್ತಿರಲಿಲ್ಲ| ಸುರೇಶ ಅಂಗಡಿ ಅವರ ಪತ್ನಿ ಮಂಗಲಾ ಅಂಗಡಿ ಅವರು ನಮ್ಮ ಮನೆಯಲ್ಲಿ ಬೆಳೆದವರು. ಅವರು ನಮಗೆ ಚಿಕ್ಕ ಸಹೋದರಿ ಹಾಗೆ ಇದ್ದರು. ಅವರಿಗೆ ಭಗವಂತ ದುಃಖ ಭರಿಸುವ ಶಕ್ತಿ ನೀಡಲಿ ಎಂದು ಬೇಡಿಕೊಂಡಿದ್ದೇನೆ ಎಂದ ಜಾರಕಿಹೊಳಿ| 
 

Minister Ramesh Jarakiholi Talks Over Suresh Angadigrg
Author
Bengaluru, First Published Oct 3, 2020, 11:50 AM IST

ಬೆಳಗಾವಿ(ಅ.03): ಸುರೇಶ್‌ ಅಂಗಡಿ, ಸಚಿವ ಜಗದೀಶ್‌ ಶೆಟ್ಟರ್‌ ಹಾಗೂ ನಾವು ಒಂದು ತಂಡ ರಚನೆ ಮಾಡಿ ರಾಜಕೀಯವಾಗಿ ದೊಡ್ಡ ಶಕ್ತಿಯಾಗಿದ್ದೆವು. ಆತ್ಮೀಯ ಗೆಳೆಯನ ಸಾವಿನಿಂದ ವಿಚಲಿತನಾಗಿದ್ದೇನೆ. ಅಂಗಡಿ ಅವರು ಪಕ್ಷಾತೀತವಾಗಿ ಎಲ್ಲರ ಕೆಲಸ ಮಾಡಿಕೊಡುತ್ತಿದ್ದರು ಎಂದು ಸಚಿವ ರಮೇಶ್‌ ಜಾರ​ಕಿ​ಹೊಳಿ ಬೇಸರ ವ್ಯಕ್ತ​ಪ​ಡಿ​ಸಿ​ದ್ದಾರೆ. 

ಶುಕ್ರವಾರ ನಗರದಲ್ಲಿ  ಮಾಧ್ಯಮದವರ ಜೊತೆ ಮಾತನಾಡಿದ ಅವರು, ಅಂಗ​ಡಿ​ಯ​ವ​ರಿಗೆ ಕಾಂಗ್ರೆಸ್‌, ಬಿಜೆಪಿಯವರು ಯಾರೂ ವಿರೋಧ ಮಾಡುತ್ತಿರಲಿಲ್ಲ. ಅವರ ಪತ್ನಿ ಮಂಗಲಾ ಅಂಗಡಿ ಅವರು ನಮ್ಮ ಮನೆಯಲ್ಲಿ ಬೆಳೆದವರು. ಅವರು ನಮಗೆ ಚಿಕ್ಕ ಸಹೋದರಿ ಹಾಗೆ ಇದ್ದರು. ಅವರಿಗೆ ಭಗವಂತ ದುಃಖ ಭರಿಸುವ ಶಕ್ತಿ ನೀಡಲಿ ಎಂದು ಬೇಡಿಕೊಂಡಿದ್ದೇನೆ ಎಂದಿದ್ದಾರೆ.

'ಅಂಗಡಿ ಕೇಂದ್ರದ ಮಂತ್ರಿ ಆಗಿದ್ರೂ ಬೆಳಗಾವಿಗೆ ತಂದು ಗೌರವ ಸಲ್ಲಿಸಲು ಸರ್ಕಾರಕ್ಕೆ ಆಗಲಿಲ್ಲ'

ಕೋವಿಡ್‌-​19 ಹೆಸರಿನಲ್ಲಿ ಡಿ.ಕೆ.ಶಿವಕುಮಾರ್‌ ರಾಜಕೀಯ ಮಾಡುತ್ತಿದ್ದಾರೆ. ರಾಜ್ಯದ ಜನರ ದಿಕ್ಕು ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ ಎಂದು ಜಲಸಂಪನ್ಮೂಲ ಸಚಿವ ರಮೇಶ್‌ ಜಾರಕಿಹೊಳಿ ಹೇಳಿದ್ದಾರೆ. 
 

Follow Us:
Download App:
  • android
  • ios