ಸಚಿವ ಶಿವಾನಂದ ಪಾಟೀಲ ಅವರು 2025-26ನೇ ಸಾಲಿನ ಹಿಂಗಾರು ಹಂಗಾಮಿನ ಸೂರ್ಯಕಾಂತಿಯನ್ನು ಬೆಂಬಲ ಬೆಲೆ ಯೋಜನೆಯಡಿ ಪ್ರತಿ ಕ್ವಿಂಟಾಲ್‌ಗೆ ₹7,721 ದರದಲ್ಲಿ ಖರೀದಿಸಲು ಆದೇಶಿಸಿದ್ದಾರೆ. ಈ ಹಿನ್ನೆಲೆಯಲ್ಲಿ, ರಾಜ್ಯದ 11 ಜಿಲ್ಲೆಗಳಲ್ಲಿ ಖರೀದಿ ಕೇಂದ್ರಗಳನ್ನು ತೆರೆಯಲು ನಿರ್ದೇಶನ ನೀಡಿದ್ದು, ನೋಂದಣಿ ಮತ್ತು ಖರೀದಿ ಪ್ರಕ್ರಿಯೆಗೆ ನಿರ್ದಿಷ್ಟ ಸಂಸ್ಥೆಗಳನ್ನು ನೇಮಕ ಮಾಡಲಾಗಿದೆ.

ವಿಜಯಪುರ: ಬೆಂಬಲ ಬೆಲೆ ಯೋಜನೆ ಅಡಿಯಲ್ಲಿ 2025-26ನೇ ಸಾಲಿನ ಹಿಂಗಾರು ಹಂಗಾಮಿನ ಸೂರ್ಯಕಾಂತಿಯನ್ನು ಪ್ರತಿ ಕ್ವಿಂಟಾಲ್‌ಗೆ ₹7,721 ದರದಲ್ಲಿ ಖರೀದಿಗೆ ಕಬ್ಬು ಅಭಿವೃದ್ಧಿ, ಸಕ್ಕರೆ, ಜವಳಿ ಹಾಗೂ ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ ಆದೇಶಿಸಿದ್ದಾರೆ.

ಖರೀದಿ ಕೇಂದ್ರ ತೆರೆತಲಯ

ಕೇಂದ್ರ ಸರ್ಕಾರದ ಬೆಂಬಲ ಬೆಲೆ ಮಾರ್ಗಸೂಚಿಗಳ ಅನ್ವಯ ಬಾಗಲಕೋಟೆ, ಬೆಳಗಾವಿ, ಬಳ್ಳಾರಿ, ವಿಜಯಪುರ, ಚಾಮರಾಜನಗರ, ಚಿತ್ರದುರ್ಗ, ಗದಗ, ಕಲಬುರಗಿ, ವಿಜಯನಗರ, ರಾಯಚೂರು ಹಾಗೂ ಧಾರವಾಡ ಜಿಲ್ಲೆಗಳಲ್ಲಿ ಅವಶ್ಯಕತೆಗೆ ಅನುಗುಣವಾಗಿ ಖರೀದಿ ಕೇಂದ್ರಗಳನ್ನು ತೆರೆಯಲು ನಿರ್ದೇಶನ ನೀಡಿದ್ದಾರೆ. 

ನಾಫೆಡ್‌ ಮತ್ತು ಎನ್‌ಸಿಸಿಎಫ್‌ ಸಂಸ್ಥೆಗಳನ್ನು ಕೇಂದ್ರ ಸರ್ಕಾರದ ಖರೀದಿ ಸಂಸ್ಥೆಗಳನ್ನಾಗಿ ಹಾಗೂ ಕರ್ನಾಟಕ ಸಹಕಾರಿ ಎಣ್ಣೆಬೀಜ ಬೆಳೆಗಾರರ ಮಹಾಮಂಡಳವನ್ನು ರಾಜ್ಯ ಸರ್ಕಾರದ ಖರೀದಿ ಸಂಸ್ಥೆಗಳನ್ನಾಗಿ ನೇಮಕ ಮಾಡಲಾಗಿದೆ.

ನೋಂದಣಿ ಅವಧಿ 60 ದಿನಕ್ಕೆ ಹೆಚ್ಚಳ

ನೋಂದಣಿ ಅವಧಿಯನ್ನು 50 ದಿನ ಹಾಗೂ ಖರೀದಿ ಅವಧಿಯನ್ನು 60 ದಿನ ನಿಗದಿಪಡಿಸಲಾಗಿದೆ. ನೋಂದಣಿ ಜೊತೆಗೆ ಖರೀದಿ ಪ್ರಕ್ರಿಯೆ ಆರಂಭಿಸಬೇಕು ಎಂದು ಜಿಲ್ಲಾ ಟಾಸ್ಕ್‌ ಫೋರ್ಸ್‌ ಸಮಿತಿ ಅಧ್ಯಕ್ಷರಾಗಿರುವ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಗ್ರಾಮೀಣ ಭಾಗದ ರೈತರಿಗೆ ಅನುಕೂಲವಾಗುವಂತೆ ತಾಂತ್ರಿಕ ಮತ್ತು ವೈಜ್ಞಾನಿಕ ಸೌಲಭ್ಯದಿಂದ ಕೂಡಿರುವ ಗೋದಾಮುಗಳನ್ನು ಹೊಂದಿರುವ ಸಂಸ್ಥೆಗಳೊಂದಿಗೆ ಒಪ್ಪಂದ ಮಾಡಿಕೊಂಡು ಖರೀದಿ ಕೇಂದ್ರಗಳನ್ನು ತೆರೆಯಬೇಕು. ನೋಂದಣಿ ಮತ್ತು ಖರೀದಿಯಲ್ಲಿ ಯಾವುದೇ ಸಮಸ್ಯೆಗಳಾಗದಂತೆ ಸಿದ್ಧತೆ ಮಾಡಿಕೊಂಡು ಪ್ರಕ್ರಿಯೆ ಆರಂಭಿಸಬೇಕು ಎಂದು ಸೂಚಿಸಿದ್ದಾರೆ. 

ಇದನ್ನೂ ಓದಿ: ಕಾಂಗ್ರೆಸ್ಸಿಂದ ನಮ್ಮನ್ನು ದೂರ ಕೂರಿಸಿ; ಸ್ಪೀಕರ್‌ಗೆ ಡಿಎಂಕೆ ಮನವಿ, ಇಂಡಿ ಕೂಟಕ್ಕೂ ವಿದಾಯ ಸಂಭವ

ರೈತರ ಹೆಸರಿನಲ್ಲಿ ವರ್ತಕರು ಮತ್ತು ಖರೀದಿ ಸಂಸ್ಥೆಗಳು ಬೆಂಬಲ ಬೆಲೆ ಖರೀದಿ ಕೇಂದ್ರಗಳನ್ನು ದುರ್ಬಳಕೆ ಮಾಡಿಕೊಳ್ಳಲು ಅವಕಾಶ ನೀಡಬಾರದು. ಖರೀದಿ ಪ್ರಗತಿ ವಿವರವನ್ನು ಪ್ರತಿ ದಿನ ರಾಜ್ಯ ಸರ್ಕಾರ ಹಾಗೂ ಕರ್ನಾಟಕ ರಾಜ್ಯ ಕೃಷಿ ಮಾರಾಟ ಮಂಡಳಿಗೆ ಒದಗಿಸಬೇಕು ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ಬಂಗಾಳಕ್ಕೆ ಸುವೇಂದು ಅಧಿಕಾರಿ ಮೊದಲ ಬಿಜೆಪಿ ಸಿಎಂ! ದೀದಿ ಆಳ್ವಿಕೆಗೆ ಅಂತ್ಯ, ದಾದಾ ಸಾಮ್ರಾಜ್ಯ ಆರಂಭ!

------